• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹೊಡೆತ : ಚುನಾವಣೆ ಹೊಸ್ತಿಲಲ್ಲಿ SP ಸೇರುತ್ತಿರುವ BJP ಸಾಲು ಸಾಲು ನಾಯಕರು

ಯದುನಂದನ by ಯದುನಂದನ
January 13, 2022
in ದೇಶ, ರಾಜಕೀಯ
0
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹೊಡೆತ : ಚುನಾವಣೆ ಹೊಸ್ತಿಲಲ್ಲಿ SP ಸೇರುತ್ತಿರುವ BJP ಸಾಲು ಸಾಲು ನಾಯಕರು
Share on WhatsAppShare on FacebookShare on Telegram

ದೇಶದಲ್ಲಿ ಈಗ ಬಿಜೆಪಿ ‘ತನ್ಮದೇಯಾದ ರೀತಿಯ ಹವಾ’ ಇಟ್ಟುಕೊಂಡಿದೆ. ಇದೊಂಥರಾ ‘ಟ್ರೆಂಡಿಂಗ್ ಟುವರ್ಡ್ಸ್ ಬಿಜೆಪಿ’ ಎನ್ನುವಂಥದ್ದು. ಆದರೆ ಉತ್ತರ ಪ್ರದೇಶದಲ್ಲಿ ಅದ್ಯಾಕೋ ಏನೋ ಬಿಜೆಪಿಗೆ ಏಟಿನ ಮೇಲೆ ಏಟು ಬೀಳುತ್ತಲೇ ಇವೆ. ಈಗ ಉತ್ತರ ಪ್ರದೇಶ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಆ ಪಕ್ಷಕ್ಕೆ ಚುನಾವಣೆ ವೇಳೆ ಭಾರೀ ಆಘಾತ ಉಂಟಾಗುವ ಸಾಧ್ಯತೆ ಕೂಡ ಇದೆ.

ADVERTISEMENT

ಈಗಾಗಲೇ ಉತ್ತರ ಪ್ರದೇಶದಲ್ಲಿ ಇಬ್ಬರು ಸಚಿವರು ಸೇರಿದಂತೆ ಎಂಟು ಜನ ಬಿಜೆಪಿ ಬಿಟ್ಟು ಸಮಾಜವಾದಿ ಪಕ್ಷ ಸೇರಿದ್ದಾರೆ. ಹೊಸ ಸೇರ್ಪಡೆ ಅಲ್ಲಿನ ಹಿಂದುಳಿದ ವರ್ಗಗಳ ಪ್ರಮುಖ ಮುಖಂಡ ಮುಖೇಶ್ ವರ್ಮಾ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಕುಳಿತು ಚುನಾವಣೆ ಗೆಲ್ಲುವ ರಣತಂತ್ರ ರೂಪಿಸುತ್ತಿದ್ದರೆ ಇತ್ತ ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರು ಒಬ್ಬರಾದ ಮೇಲೆ ಒಬ್ಬರು ಪಕ್ಷ ತ್ಯಜಿಸುತ್ತಿದ್ದಾರೆ. ಸಮಾಜವಾದಿ ಪಕ್ಷ ಸೇರುವ ಮೂಲಕ ಉತ್ತರ ಪ್ರದೇಶದಲ್ಲಿ ಈಗ ಸಮಾಜವಾದಿ ಪಕ್ಷಕ್ಕೆ ಪೂರಕ ವಾತಾವರಣ ಇದೆ ಎಂಬ ಸಂದೇಶ ಕೊಡುತ್ತಿದ್ದಾರೆ.

ಇಲ್ಲಿ ಮತ್ತೊಂದು ಗಮನಿಸಬೇಕಾದ ಅಂಶ ಎಂದರೆ ಯಾದವ್ ಮತ್ತು ಮುಸ್ಲಿಂ ಸಮುದಾಯದ ಮತಗಳು ಸಮಾಜವಾದಿ ಪಕ್ಷದ ಪರ ಇವೆ. ದಲಿತ ಮತಗಳು ಬಿಎಸ್ ಪಿ ಜೊತೆಗಿವೆ. ಕಳೆದ ಬಾರಿ ಹಿಂದುಳಿದ ವರ್ಗಗಳ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದರಿಂದ ಆ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಾಗಿತ್ತು. ಆದರೆ ಈ ಬಾರಿ ಹಿಂದುಳಿದ ವರ್ಗಗಳಲ್ಲಿ ಬಿಜೆಪಿ ಬಗ್ಗೆ ಒಲವು ಇಲ್ಲ ಎಂದು ಸದ್ಯದ ಬೆಳವಣಿಗೆಗಳು ಸಾರಿ ಹೇಳುತ್ತವೆ. ಉದಾಹರಣೆಗೆ ಈಗ ಬಿಜೆಪಿ ತೊರೆದ ಮೊದಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹಿಂದುಳಿದ ವರ್ಗಕ್ಕೆ ಸೇರಿದವರು. ಇದೀಗ ಇವತ್ತಿನ ಮಟ್ಟಿಗೆ ಕಡೆಯದಾಗಿ ಬಿಜೆಪಿ ತೊರೆದಿರುವ ಮುಖೇಶ್ ವರ್ಮಾ ಕೂಡ ಹಿಂದುಳಿದವರ ಪೈಕಿ.

ಬಿಜೆಪಿ ತೊರೆದ ಬಳಿಕ ಟ್ವೀಟ್ ಮಾಡಿರುವ ಮುಖೇಶ್ ವರ್ಮಾ ಅವರು ‘ಬಿಜೆಪಿಯು ಹಿಂದುಳಿದ ಜಾತಿಗಳನ್ನು ನಿರ್ಲಕ್ಷ್ಯ ಮಾಡಿದೆ. ಅದಕ್ಕಾಗಿ ನಾನು ಬಿಜೆಪಿ ತ್ಯಜಿಸುತ್ತಿದ್ದೇನೆ’ ಎಂಬ ಅರ್ಥದಲ್ಲಿ ಬರೆದಿದ್ದಾರೆ. ಅಲ್ಲದೆ ಸ್ವಾಮಿ ಪ್ರಸಾದ್ ಮೌರ್ಯ ಅವರು ‘ದಮನಿತರ ಧ್ವನಿ’. ಆದ್ದರಿಂದ ನಾನು ಕೂಡ ಅವರಂತೆಯೇ ಬಿಜೆಪಿ ಬಿಟ್ಟಿದ್ದೇನೆ ಎಂದಿದ್ದಾರೆ. ಇದು ಒಂದು ರೀತಿಯಲ್ಲಿ ಇನ್ನಿತರ ಹಿಂದುಳಿದ ಸಚಿವರು, ಶಾಸಕರು ಪಕ್ಷ ಬಿಡಲು ಕೇಳಿಕೊಂಡಂತಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತರ ಬಗ್ಗೆ ನಡೆಯುತ್ತಿರುವ ದೌರ್ಜನ್ಯಗಳು ಹೆಚ್ಚಾಗಿವೆ. ಈ ವರ್ಗಗಳ ಅಭಿವೃದ್ಧಿಗೆ ಬಿಜೆಪಿ ಗಮನವನ್ನು ನೀಡಲಿಲ್ಲ. ಅಷ್ಟೇಯಲ್ಲ, ದಲಿತ ಮತ್ತು ಹಿಂದುಳಿದ ಜಾತಿಗಳ ಜನಪ್ರತಿನಿಧಿಗಳಿಗೆ ಅಗೌರವ ತೋರಲಾಗುತ್ತಿದೆ ಎಂದು ಮುಖೇಶ್ ವರ್ಮಾ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ನೇರವಾಗಿ ಬಿಜೆಪಿ ಮೇಲೆ ಹರಿಹಾಯ್ದಿದ್ದಾರೆ.

ಇದಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹಲವಯ ನಾಯಕರು ಬಿಜೆಪಿ ಬಿಡುತ್ತಾರೆ. ಸಮಾಜವಾದಿ ಪಕ್ಷ ಸೇರಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿಗೆ ಭಾರೀ ಆಘಾತ ಉಂಟುಮಾಡಿದ್ದಾರೆ. ಮೊನ್ನೆ ಎನ್ ಸಿಪಿ ನಾಯಕ ಶರದ್ ಪವರ್ ’13 ಶಾಸಕರು, ಸಚಿವರು ಬಿಜೆಪಿ ತೊರೆಯುತ್ತಾರೆ’ ಎಂದು ಹೇಳಿದ್ದನ್ನು ಸ್ಮರಿಸಬಹುದು. ಈ ಇಬ್ಬರ ಮಾತುಗಳನ್ನು ಗಮನಿಸಿದರೆ ಇನ್ನೂ ಒಂದಷ್ಟು ಮಂದಿ ಬಿಜೆಪಿ ಬಿಡುವ ಸಾಧ್ಯತೆ ಕಂಡುಬರುತ್ತಿದೆ.

2017ರಲ್ಲಿ ಕಾನ್ಪುರ ಗ್ರಾಮಾಂತರದ ಬಿಲ್ಹೌರ್ನಲ್ಲಿ ಬಿಜೆಪಿ ಇತಿಹಾಸ ಬರೆದಿತ್ತು. ಹಿರಿಯ ರಾಜಕಾರಣಿ ಭಗವತಿ ಸಾಗರ್ ಅವರು ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದ್ದರು. ಇದರಿಂದ ಮೊದಲ ಬಾರಿಗೆ ಬಿಜೆಪಿಯು ಈ ಕ್ಷೇತ್ರದಿಂದ ಗೆದ್ದಿತ್ತು. ಈಗ ಭಗವತಿ ಸಾಗರ್ ಕೂಡ ರಾಜೀನಾಮೆ ನೀಡಿದ್ದಾರೆ. ನಾನು ಬಿಆರ್ ಅಂಬೇಡ್ಕರ್ ಮತ್ತು ವಿಚಾರಧಾರೆಗಳನ್ನು ನಂಬುವ ವ್ಯಕ್ತಿ. ಬಿಜೆಪಿ ಅಂಬೇಡ್ಕರ್ ವಿಚಾರಗಳಿಗೆ ವಿರೋಧ ಮಾಡುವುದರಿಂದ ನಾನು ಪಕ್ಷ ತ್ಯಜಿಸಬೇಕಾಯಿತು’ ಎಂದಿದ್ದಾರೆ. ಅಷ್ಟೇಯಲ್ಲ, ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಇನ್ನಷ್ಟು ಜನ ಆಡಳಿತಾರೂಢ ಬಿಜೆಪಿ ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಿದ್ದಾರೆ.

80 ಸಂಸದರ ಬಲವನ್ನು ಹೊಂದಿರುವ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಮತ್ತೆ ಗೆಲ್ಲಲೇಬೇಕು ಎಂದು ಬಿಜೆಪಿ ಭಾರೀ ಕಸರತ್ತು ನಡೆಸಿದೆ. ಆದರೆ ಚುನಾವಣಾ ದಿನಾಂಕ ಘೋಷಣೆ ಆಗಿದ್ದರೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೋ ಇಲ್ಲವೋ? ಸ್ಪರ್ಧಿಸಿದರೂ ಯಾವ ಕ್ಷೇತ್ರದಿಂದ ಎಂಬ ಗೊಂದಲ ಬಗೆಹರಿದಿಲ್ಲ. ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ಮೋದಿ ನಡುವೆ ಭಿನ್ನಾಭಿಪ್ರಾಯ ಇದೆ. ಯೋಗಿ ಆದಿತ್ಯನಾಥ್ ಮತ್ತು ಅಮಿತ್ ಶಾ ನಡುವೆ ಭಿನ್ನಾಭಿಪ್ರಾಯ ಇದೆ ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ. ಹಿಂದಿನಿಂದಲೂ ಈ ಗೊಂದಲ ಇದ್ದರೂ ಬಿಜೆಪಿ ಹೈಕಮಾಂಡ್ ನಾಯಕರು ಮತ್ತು RSS ನಾಯಕರು ಪ್ರಯತ್ನಿಸಿದರೂ ಈ ಗೊಂದಲ ಸಂಪೂರ್ಣವಾಗಿ ಬಗೆಹರಿದಿಲ್ಲ. ಕೇಂದ್ರ ಸರ್ಕಾರ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ತಡ ಮಾಡಿದ್ದರಿಂದ ಈ ಬಾರಿ ಬಿಜೆಪಿಗೆ ರೈತ ವಿರೋಧಿ ಎಂಬ ಹಣೆಪಟ್ಟಿ ಇದೆ. ಯೋಗಿ ಆದಿತ್ಯನಾಥ್ ಅವರು ಧಾರ್ಮಿಕ ವಿಚಾರಗಳಿಗೆ ಒತ್ತು ನೀಡಿದ್ದಾರೆಯಷ್ಟೇ, ಅಭಿವೃದ್ಧಿಗೆ ಅಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಇವು ಆಡಳಿತ ವಿರೋಧಿ ಅಲೆಯಾಗಿ ಪರಿಣಮಿಸಬಹುದು ಎಂದು ಹೇಳಲಾಗುತ್ತಿದೆ. ಈಗ ಬಿಜೆಪಿ ನಾಯಕರ ‘ಪಕ್ಷ ಬಿಡುವ ಅಭಿಯಾನ’ ಕೂಡ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಈಗ ಬಿಜೆಪಿ ಮೊದಲಿಗಿಂತ ಹೆಚ್ಚು ಒತ್ತಡಕ್ಕೆ ಸಿಲುಕಿದೆ ಎಂದು ಹೇಳಲಾಗುತ್ತಿದೆ.

Tags: BJPCongress PartyCovid 19ಅಕಿಲೇಶ್‌ ಯಾದವ್‌ಉತ್ತರ ಪ್ರದೇಶಕರೋನಾಕೋವಿಡ್-19ಚುನಾವಣೆ ಹೊಸ್ತಿಲುನರೇಂದ್ರ ಮೋದಿಬಿಜೆಪಿಯೋಗಿ ಅದಿತ್ಯನಾಥ್‌
Previous Post

ಹಳಿ ತಪ್ಪಿದ ಗುವಾಹಟಿ – ಬಿಕನೇರ್ ಎಕ್ಸ್ ಪ್ರೆಸ್ ರೈಲು ; ಹಲವು ಮಂದಿಗೆ ಗಾಯ

Next Post

ಯುಪಿ ಚುನಾವಣೆ : ಸಾಂಪ್ರದಾಯಿಕ ಮತಗಳು ಚದುರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಮಾಡಿದ ಬಿಜೆಪಿ!

Related Posts

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್
ದೇಶ

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

by ಪ್ರತಿಧ್ವನಿ
December 2, 2025
0

ನವದೆಹಲಿ: ರಷ್ಯಾ ಅಧ್ಯಕ್ಷ ವಾಗ್ಲಿಮಿರ್ ಪುಟಿನ್ ಡಿ.4ರಂದು ನವದೆಹಲಿಗೆ ಭೇಟಿ‌ ನೀಡಲಿದ್ದಾರೆ. ಎರಡು ದಿನಗಳ ಈ ಭೇಟಿಯ ಹಿನ್ನಲೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್...

Read moreDetails
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಬ್ರೇಕ್​ಫಾಸ್ಟ್ ಮೀಟಿಂಗ್‌ನಲ್ಲಿ ರಾಜಕೀಯ ಚರ್ಚೆ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?

December 2, 2025
ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

December 2, 2025
Next Post
ಯುಪಿ ಚುನಾವಣೆ : ಸಾಂಪ್ರದಾಯಿಕ ಮತಗಳು ಚದುರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಮಾಡಿದ ಬಿಜೆಪಿ!

ಯುಪಿ ಚುನಾವಣೆ : ಸಾಂಪ್ರದಾಯಿಕ ಮತಗಳು ಚದುರದಂತೆ ನೋಡಿಕೊಳ್ಳಲು ಮಾಸ್ಟರ್ ಪ್ಲ್ಯಾನ್ ಮಾಡಿದ ಬಿಜೆಪಿ!

Please login to join discussion

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada