• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

Any Mind by Any Mind
July 17, 2023
in ರಾಜಕೀಯ
0
ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮಿತ್ರ ಪಕ್ಷಗಳು ಬಹುಮತವನ್ನು ಸಾಧಿಸಲಿದೆ. ಬಿಜೆಪಿ ಮಿತ್ರ ಪಕ್ಷಗಳು ಸೋಲನ್ನು ಅನುಭವಿಸಲಿದ್ದು , ವಿಪಕ್ಷಗಳ ಒಕ್ಕೂಟ ಗೆಲುವು ಸಾಧಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಸಭೆಯಾಗಿದ್ದು, ಸುಮಾರು 24 ಪಕ್ಷದ ನಾಯಕರು ನಾಳಿನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎಲ್ಲ ವಿಪಕ್ಷಗಳ ನಾಯಕರು ಇಂದು ಮತ್ತು ನಾಳೆ , ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟುಗೂಡಿ ಚುನಾವಣೆ ಎದುರಿಸುವುದೇ ಈ ಸಭೆಯ ಮುಖ್ಯ ಉದ್ದೇಶವಾಗಿದೆ ಎಂದು ಸಿಎಂ ವಿವರಿಸಿದರು.

ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುತ್ತಿರುವುದೇ ಬಿಜೆಪಿಯ ಕೊಡುಗೆ


ದೇಶವನ್ನು ಲೂಟಿ ಮಾಡಿದಂತಹ ಪಕ್ಷಗಳು ಇಂದು ಒಂದಾಗುತ್ತಿವೆ ಎಂಬ ಬಿಜೆಪಿ ಪಕ್ಷದ ಹೇಳಿಕೆಗೆ ಉತ್ತರ ನೀಡುತ್ತಾ, ಈ ದೇಶದ ಆರ್ಥಿಕತೆಯನ್ನು ಹಾಳು ಮಾಡಿದವರೇ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿಯವರು ಬಂದ ನಂತರ ಬೆಲೆ ಏರಿಕೆ, ಬಡವರು, ರೈತರು, ದಲಿತರು ಇಂದು ಬದುಕಲು ಅಸಾಧ್ಯವಾದ ಪರಿಸ್ಥಿತಿ ಬಂದಿದೆ. ಕೋಮುವಾದದಿಂದ ಎಲ್ಲರೂ ಆತಂಕದಿಂದ ಬದುಕುವಂತಾಗಿದೆ. ಇದು ಬಿಜೆಪಿಯ ಕೊಡುಗೆ ಎಂದು ತಿಳಿಸಿದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ :


ಪ್ರಧಾನಿ ಮೋದಿಯವರನ್ನು ಎದುರಿಸಲು ಎಲ್ಲ ಪಕ್ಷಗಳು ಒಟ್ಟಾಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಬಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾದ್ಯವಿಲ್ಲ. ಎಂದರು.

ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ :



ಜೆಡಿಎಸ್ ನ ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ ಡಿ ಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ ಎಂದು ಜೆಡಿಎಸ್ ನ ಕುಮಾರಸ್ವಾಮಿಯವರು ಹೇಳುತ್ತಿರುವ ಬಗ್ಗೆ ಉತ್ತರ ನೀಡುತ್ತಾ , ಜೆಡಿಎಸ್ ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು. ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಎಂದರ್ಥ ಎಂದರು.

ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರೆನ್ನಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ , ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದರು.

Tags: CMSiddaramaiahDKShivakumaropposition partyUPA
Previous Post

ವಿಪಕ್ಷಗಳ ಸಭೆಗೆ ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಹೈಕಮಾಂಡ್

Next Post

ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ʼಕೈʼ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada