• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

UPSC ಜಿಹಾದ್: ಪ್ರಾಯೋಜಕತ್ವ ನೀಡಿದ ಅಮುಲ್ ಸಂಸ್ಥೆ ವಿರುದ್ಧ ಬಾಯ್ಕಾಟ್ ಅಭಿಯಾನ

by
September 4, 2020
in ದೇಶ
0
UPSC ಜಿಹಾದ್: ಪ್ರಾಯೋಜಕತ್ವ ನೀಡಿದ ಅಮುಲ್ ಸಂಸ್ಥೆ ವಿರುದ್ಧ ಬಾಯ್ಕಾಟ್ ಅಭಿಯಾನ
Share on WhatsAppShare on FacebookShare on Telegram

ಸುದರ್ಶನ್‌ ನ್ಯೂಸ್‌ ಚಾನೆಲ್ಲಿನ ʼಯುಪಿಎಸ್‌ಸಿ ಜಿಹಾದ್‌ʼ ಕಾರ್ಯಕ್ರಮದ ನಕರಾತ್ಮಕ ಪರಿಣಾಮ ಇದೀಗ ಭಾರತದ ಖಾಸಗಿ ಡೈರಿ ಸಂಸ್ಥೆಗೂ ತಟ್ಟಿದೆ. ಸುದರ್ಶನ್‌ ಚಾನೆಲ್‌ಗೆ ಸಂಸ್ಥೆ ನೀಡುತ್ತಿರುವ ಪ್ರಾಯೋಜತ್ವ ಸಾಮಾಜಿಕ ಜಾಲತಾಣ ಬಳಕೆದಾರರ ಕೆಂಗಣ್ಣಿಗೆ ಗುರಿಯಾಗಿದೆ. ಸುದರ್ಶನ್‌ ಟಿವಿಯಲ್ಲಿ ಬರುವ ಕಾರ್ಯಕ್ರಮಕ್ಕೆ ಸಂಸ್ಥೆ ಪ್ರಾಯೋಜಕತ್ವ ನೀಡಿರುವುದೇ ಇಷ್ಟೆಲ್ಲಾ ಟೀಕೆಗಳಿಗೆ ಕಾರಣವಾಗಿದೆ.

ಭಾರತದ ಜನಪ್ರಿಯ ಡೈರಿ ಬ್ರಾಂಡ್ ಅಮುಲ್, ಹಿಂದುತ್ವ ಪರವಿರುವ ಸುದರ್ಶನ್ ಟಿವಿಗೆ ನೀಡಿದ ಬೆಂಬಲಕ್ಕಾಗಿ ಟೀಕೆಗಳನ್ನು ಎದುರಿಸುತ್ತಿದೆ, ಸುದರ್ಶನ್‌ ಟಿವಿಯಲ್ಲಿ ಪ್ರಸಾರವಾಗಬೇಕಿದ್ದ ಮುಸ್ಲಿಮರ ವಿರುದ್ಧ ದ್ವೇಷವನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ದೆಹಲಿ ಹೈಕೋರ್ಟ್ ಕಳೆದ ವಾರ ನಿಷೇಧಿಸಿತ್ತು. ದೆಹಲಿ ಹೈಕೋರ್ಟ್ ಟಿವಿ ಚಾನೆಲ್‌ನ ವಿವಾದಾತ್ಮಕ ಕಾರ್ಯಕ್ರಮವನ್ನು ಪ್ರಸಾರದಿಂದ ನಿಲ್ಲಿಸಿದ ನಂತರವೂ ಸುದರ್ಶನ್ ಟಿವಿಗೆ ಪ್ರಾಯೋಜಕತ್ವ ನೀಡುವ ಅಮುಲ್ ನಿರ್ಧಾರಕ್ಕಾಗಿ ಕೋಪಗೊಂಡ ಸಾಮಾಜಿಕ ಜಾಲತಾಣ ಬಳಕೆದಾರರು ಟ್ವಿಟರ್‌ನಲ್ಲಿ #BoycottAmul ಎಂಬ ಹ್ಯಾಶ್‌ಟ್ಯಾಗ್ ಅನ್ನು ಟ್ರೆಂಡ್ ಮಾಡಿದ್ದಾರೆ.

ಅಮುಲ್‌ ಹಿಂದಿನಿಂದಲೂ ಮೋದಿ ಸರ್ಕಾರ ಹಾಗೂ ಹಿಂದುತ್ವ ಅಜೆಂಡಾದೊಂದಿಗೆ ಪರೋಕ್ಷವಾಗಿ ತನ್ನನ್ನು ಗುರುತಿಸಿಕೊಂಡು ಬಂದಿದೆ. ಮೋದಿ ಗೆಲುವಿನಲ್ಲಿ, ರಾಮಮಂದಿರ ಭೂಮಿಪೂಜೆ ಸಂಧರ್ಭದಲ್ಲಿ ಹರ್ಷ ವ್ಯಕ್ತಪಡಿಸಿ ಜಾಹಿರಾತು ನೀಡಿತ್ತು. ಇಂಡಿಯಾ- ಚೀನಾ ಅಥವಾ ಸರ್ಜಿಕಲ್‌ ಸ್ಟ್ರೈಕ್‌ ಮುಂತಾದ ಭಾವನಾತ್ಮಕ ವಿಚಾರಗಳನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡಿತ್ತು. ಅಲ್ಲದೆ ಒಂದು ಪೋಸ್ಟರ್‌ನಲ್ಲಿ ಪರೋಕ್ಷವಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ವ್ಯಂಗ್ಯವಾಗಿ ಬಿಂಬಿಸಿತ್ತು. ಸಂಸ್ಕೃತಕ್ಕೆ ಬೆಂಬಲ, ಕಾಶ್ಮೀರ 370 ರದ್ದತಿ ಇರಲಿ ಇದನ್ನೆಲ್ಲಾ ಅಮುಲ್‌ ತನ್ನ ಕಂಪೆನಿ ಪ್ರಚಾರಕ್ಕೆ ಬಳಸಿಕೊಂಡಿತ್ತು.

#boycottamul if you have any self respect pic.twitter.com/nwaTr2DoO8

— Zaidu Sabbag (ذیشان ‏رنگ ریز) (@Iamsabbag) August 29, 2020


ಒಟ್ಟಿನಲ್ಲಿ ಅಮುಲ್‌ ಎಂಬ ದಿಗ್ಗಜ ಸಂಸ್ಥೆ ಸದ್ಯ ಭಾರತದಲ್ಲಿ ಧ್ವೇಷ ಮಾರಾಟವಾಗುತ್ತದೆಯೆಂಬುದನ್ನು ಅರ್ಥಮಾಡಿಕೊಂಡಿತ್ತು. ಹಾಗೂ ಆ ದಾರಿಯಲ್ಲಿ ತನ್ನ ಉತ್ಪನ್ನಗಳನ್ನು ಮಾರಾಟದಲ್ಲಿ ತೊಡಗಿಸಿಕೊಂಡಿದೆ. ಹಾಗಾಗಿಯೇ ಸಂಪೂರ್ಣ ಇಸ್ಲಾಮೋಫೋಬಿಯಾ ಹರಡುವ ಸುದ್ದಿ ಸಂಸ್ಥೆಯೊಂದರ ಕಾರ್ಯಕ್ರಮವನ್ನು ನ್ಯಾಯಾಲಯ ತಡೆಹಿಡಿದಿದ್ದರೂ, ಅಮುಲ್‌ ಆ ಸುದ್ದಿ ಸಂಸ್ಥೆಯ ಕಾರ್ಯಕ್ರಮಗಳಿಗೆ ತನ್ನ ಪ್ರಾಯೋಜಕತ್ವ ನೀಡಿರುವುದು.

ಕಳೆದ ಐದಾರು ದಿನಗಳಿಂದ ಅಮುಲ್‌ ಕಂಪೆನಿಯ ಬೇಜವಾಬ್ದಾರಿ ನಡೆಯ ಬಗ್ಗೆ ಸಾಕಷ್ಟು ಟೀಕೆಗಳು ಎದುರಾಗುತ್ತಿದೆ. ಇಸ್ಲಾಮೋಫೋಬಿಯಾವನ್ನು ಹರಡುವುದರಲ್ಲಿ ಕುಖ್ಯಾತಿ ಪಡೆದ ಟಿವಿ ಚಾನೆಲ್ ಅನ್ನು ಬೆಂಬಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯುನೈಟೆಡ್‌ ಕಿಂಗ್‌ಡಂ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಗ್ರೂಪ್ ಅಮುಲ್ ಸಂಸ್ಥೆಯನ್ನು ಒತ್ತಾಯಿಸಿದೆ.

ಭಾರತ ಚೀನಾ ಗಡಿ ಬಿಕ್ಕಟ್ಟು ಸಂಧರ್ಭದಲ್ಲಿ ಗುಜರಾತ್‌ ಮೂಲದ ಅಮುಲ್‌ ಸಂಸ್ಥೆಯ‌ ಖಾತೆಯಿಂದ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸುವ ಪೋಸ್ಟ್‌ ಹಂಚಲಾಗಿದೆಯೆಂದು ಟ್ವಿಟರ್‌ ಕೆಲಕಾಲಕ್ಕೆ ಅಮುಲ್ ಸಂಸ್ಥೆಯ ಅಧಿಕೃತ ಟ್ವಿಟರ್‌ ಖಾತೆಯನ್ನು ತಡೆಹಿಡಿದಿತ್ತು.

Islamophobic Amul: Twitter explodes in anger as #BoycottAmul trends against popular Indian dairy brand. https://t.co/DnMrHIyO5q via @JantaKaReporter

— Ashok Swain (@ashoswai) August 29, 2020


ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ಏಕ ಸದಸ್ಯ ನ್ಯಾಯಪೀಠ ಕಳೆದ ಶುಕ್ರವಾರ ಸುದರ್ಶನ್ ಟಿವಿಯ ಯುಪಿಎಸ್‌ಸಿ ಜಿಹಾದ್ ಕಾರ್ಯಕ್ರಮದ ಪ್ರಸಾರವನ್ನು ತಡೆಹಿಡಿಯಲು ಆದೇಶಿಸಿ ಕೇಂದ್ರದ ನರೇಂದ್ರ ಮೋದಿ ಸರ್ಕಾರಕ್ಕೆ ನೋಟಿಸ್ ನೀಡಿತ್ತು ಈ ಕಾರ್ಯಕ್ರಮದ ಕುರಿತಂತೆ ಭಾರತೀಯ ಐಪಿಎಸ್‌ ಸಂಘ ಖಂಡನೆ ಕೂಡ ವ್ಯಕ್ತಪಡಿಸಿತ್ತು. ಅಂತಹ ವಿನಾಶಕಾರಿ ಕಾರ್ಯಕ್ರಮಗಳಿಗೆ ಸಾಮಾಜಿಕ ರಂಗದಲ್ಲಿ ವ್ಯವಹಾರ ನಡೆಸುವ ಸಂಸ್ಥೆಯೊಂದು ಪ್ರಾಯೋಜಕತ್ವ ನೀಡಬಾರದೆಂದು ಅಭಿಯಾನ ಚಾಲ್ತಿಯಲ್ಲಿದೆ

Seedhi Baat, No Bakwas…
Straight Way, Boycott @Amul_Coop For Sponsoring, Funding Hate #BoycottAmul https://t.co/LRZtn9OYZ8

— Shrimant Mane (@ShrimantManey) August 29, 2020


ADVERTISEMENT
Tags: ‌ ಇಸ್ಲಾಮೋಫೋಬಿಯಾಯುಪಿಎಸ್‌ಸಿ ಜಿಹಾದ್‌ಸುದರ್ಶನ್‌ ಟಿವಿ
Previous Post

ಡ್ರಗ್ಸ್‌ ಜಾಲ: ಮೂವರು ಸ್ಯಾಂಡಲ್‌ವುಡ್‌ ನಟಿಯರ ಆಪ್ತರನ್ನು ವಶಕ್ಕೆ ಪಡೆದ ಸಿಸಿಬಿ

Next Post

ʼಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿʼ ಯೂತ್‌ ಕಾಂಗ್ರೆಸ್‌ ಅಭಿಯಾನ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ʼಉದ್ಯೋಗ ನೀಡಿ

ʼಉದ್ಯೋಗ ನೀಡಿ, ಆತ್ಮಹತ್ಯೆ ನಿಲ್ಲಿಸಿʼ ಯೂತ್‌ ಕಾಂಗ್ರೆಸ್‌ ಅಭಿಯಾನ

Please login to join discussion

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada