• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ!

Any Mind by Any Mind
October 12, 2023
in Top Story, ಕರ್ನಾಟಕ
0
ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ ₹25,000 ಕೋಟಿ ಹೂಡಿಕೆಗೆ ಆಸಕ್ತಿ!
Share on WhatsAppShare on FacebookShare on Telegram

ಬೆಂಗಳೂರು: ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ಪ್ರಕಟವಾಗಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಹೇಳಿದರು.

ADVERTISEMENT

ಅಮೆರಿಕಕ್ಕೆ 12 ದಿನಗಳ ವ್ಯಾಪಾರ ಉತ್ತೇಜನಾ ಪ್ರವಾಸ ತೆರಳಿದ್ದ ರಾಜ್ಯ ನಿಯೋಗದ ನೇತೃತ್ವ ವಹಿಸಿದ್ದ ಎಂ.ಬಿ.ಪಾಟೀಲ ಮತ್ತು ಪ್ರಿಯಾಂಕ್ ಖರ್ಗೆ ಅವರು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ದೃಷ್ಟಿಯಿಂದ ಇದೊಂದು ಯಶಸ್ವಿ ಭೇಟಿಯಾಗಿದೆ ಎಂದರು. ಸಚಿವ ಎಂ.ಬಿ.ಪಾಟೀಲ ಮಾತನಾಡಿ, ಕೆಲವು ಕಂಪನಿಗಳು ಹೊಸದಾಗಿ ರಾಜ್ಯದಲ್ಲಿ ಕಾರ್ಯಾಚರಣೆ ಯೋಜನೆ ಹೊಂದಿವೆ.‌ ಇನ್ನು ಕೆಲವು ಕಂಪನಿಗಳು ಈಗಾಗಲೇ ಇಲ್ಲಿ ಘಟಕಗಳನ್ನು ಹೊಂದಿದ್ದು, ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ ಎಂದರು.

ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಈಗ ಕರ್ನಾಟಕ ಸೇರಿದಂತೆ ‌ದೇಶದ‌ ಬಹುತೇಕ ರಾಜ್ಯಗಳು ನಡೆಸುತ್ತಿವೆ. ಇಂತಹ ಸಮಾವೇಶದ ಜೊತೆಗೆ ಹೊಸ ಉಪಕ್ರಮವೊಂದನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಲೋಚನೆಯಾಗಿತ್ತು. ಹೀಗಾಗಿ, ಉದ್ಯಮಿಗಳಿರುವ ಹಾಗೂ ಉದ್ಯಮ ಸಂಸ್ಥೆಗಳ ಜಾಗಕ್ಕೆ ನಾವೇ ಹೋಗಿ ನಮ್ಮಲ್ಲಿರುವ ಅನುಕೂಲತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು ಎಂದು ವಿವರಿಸಿದರು.

ಅಮೆರಿಕದ ಪೂರ್ವ ಕರಾವಳಿಯಿಂದ ಹಿಡಿದು ಪಶ್ಚಿಮ ಕರಾವಳಿವರೆಗೆ ಪ್ರಯಾಣಿಸಿ ಬೇರೆ ಬೇರೆ ಕಂಪನಿಗಳ ಉನ್ನತ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಯಿತು.‌ ಈ ವೇಳೆ 27 ಮುಖಾಮುಖಿ ಸಭೆಗಳು ಮತ್ತು 9 ಸಂವಾದ ಗೋಷ್ಠಿಗಳು ಸೇರಿ ಒಟ್ಟು 36 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆವು. ಜೊತೆಗೆ, ಅಲ್ಲಿನ ಕೆಲವು ಕೈಗಾರಿಕೆಗಳ ಕಾರ್ಯಾಚರಣೆಯನ್ನು
ಖುದ್ದು ವೀಕ್ಷಿಸಿದೆವು ಎಂದು ಹೇಳಿದರು.

ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಏರೋಸ್ಪೇಸ್ & ರಕ್ಷಣೆ, ಆಟೋ/ಇವಿ, ಉತ್ಪಾದನೆ ಮತ್ತು ಮೆಡ್-ಟೆಕ್ ವಲಯಗಳಲ್ಲಿ ಹೂಡಿಕೆ ಅವಕಾಶಗಳನ್ನು ಅವಲೋಕಿಸಲಾಗಿದೆ. ಅಪ್ಲೈಡ್ ಮಟೀರಿಯಲ್ಸ್, ಎಎಂಡಿ, ಜುನಿಪರ್, ಗ್ಲೋಬಲ್ ಫೌಂಡ್ರೀಸ್, ಲ್ಯಾಮ್ ರಿಸರ್ಚ್, ಬೋಯಿಂಗ್, ಕ್ರಿಪ್ಪನ್, ಡೆಲ್, ಎಂಕೆಎಸ್ ಇನ್‌ಸ್ಟ್ರುಮೆಂಟ್ಸ್, ಟೆರಾಡೈನ್, ಜಿಇ ಹೆಲ್ತ್ ಕೇರ್, ಇಂಟೆಲ್‌ಸ್ಯಾಟ್, ಆರ್‌ಟಿಎಕ್ಸ್, ಟೆಕ್ಸಾಸ್ ಇನ್‌ಸ್ಟ್ಯುಮೆಂಟ್ಸ್, ಆಪಲ್ ಮತ್ತು ವಾಟರ್ಸ್‌ ಕಾರ್ಪ್ ನಂತಹ ಮುಂಚೂಣಿ ಕಂಪನಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಜಂಟಿ ಕೌಶಲ್ಯಾಭಿವೃದ್ಧಿ ಉಪಕ್ರಮಗಳು, ಪೂರೈಕೆದಾರರ ನೆಲೆಯ ವಿಸ್ತರಣೆ, ಆರ್ & ಡಿ ಪರಿಸರ ವ್ಯವಸ್ಥೆ ಬಲಪಡಿಸುವುದು ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಬಗೆಗೂ ಸಮಾಲೋಚನೆಗಳನ್ನು ನಡೆಸಲಾಗಿದೆ ಎಂದರು. ಬದಲಾಗುತ್ತಿರುವ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕದ ಉದ್ಯಮಿಗಳು ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿದ್ದಾರೆ. ಈ ಅವಕಾಶ ಬಳಸಿಕೊಳ್ಳುವ ದೃಷ್ಟಿಯಿಂದ ನಾವು ಇಲ್ಲಿನ ಕೈಗಾರಿಕಾ ಕಾರ್ಯಪರಿಸರ, ಉದ್ಯಮಸ್ನೇಹಿ ಕಾರ್ಯನೀತಿಗಳು, ಸರ್ಕಾರದ ಪ್ರೋತ್ಸಾಹಕ ಕ್ರಮಗಳು, ಮತ್ತು ಮಾನವ ಸಂಪನ್ಮೂಲ ಲಭ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಜೊತೆಗೆ, ಸುಗಮ ವ್ಯಾಪಾರ ಕಾರ್ಯಾಚರಣೆಗೆ ಪೂರಕವಾಗಿ ಸರ್ಕಾರದ ಸಹಕಾರವನ್ನು ಖಾತ್ರಿಗೊಳಿಸಿದ್ದೇವೆ ಎಂದು ಪಾಟೀಲ ಅವರು ಮಾಹಿತಿ ನೀಡಿದರು.

ವಿಷನ್ ಗ್ರೂಪ್:
ಕೈಗಾರಿಕಾ ಇಲಾಖೆಯು ಕ್ಷೇತ್ರವಾರು ಒಂಬತ್ತು ವಿಷನ್ ಗ್ರೂಪ್ ಗಳನ್ನು ರಚಿಸಲಿದೆ ಸಚಿವ ಹೇಳಿದರು. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬಂಡವಾಳ ಆಕರ್ಷಿಸುವ ಸಲುವಾಗಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದು ಅದರಲ್ಲಿ ಈ ಅಮೆರಿಕಾ ಭೇಟಿ ಯೂ ಸೇರಿದೆ. ಮಾನವ ಸಂಪನ್ಮೂಲದ ಬೇಡಿಕೆಗಣುಗುಣವಾಗಿ ಎಂಜಿನಿಯರ್ ಗಳಿಗೆ ತರಬೇತಿ ನೀಡುವ ಸಂಬಂಧ ಎಎಂಡಿ ಸಂಸ್ಥೆ ಜತೆ‌ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳಲಿದೆ. ಈ ಸಂಸ್ಥೆ 800 ಎಂಜಿನಿಯರ್ ಗಳನ್ನು‌ ಭಾರತದಲ್ಲಿ ನೇಮಕ‌ ಮಾಡಿಕೊಳ್ಳಲಿದೆ ಎಂದು ಹೇಳಿದರು. ನಾವೀನ್ಯತಾ ಸೂಚ್ಯಂಕ ದಲ್ಲಿ ಕರ್ನಾಟಕ18ನೇ ಸ್ಥಾನ‌ ಪಡೆದಿದ್ದು ಮುಂದಿನ‌ ದಿನಗಳಲ್ಲಿ 10ರೊಳಗೆ ಸ್ಥಾನ‌ ಪಡೆಯುವ ನಿಟ್ಟಿನಲ್ಲಿ ಕೆಲಸ‌ ಮಾಡಲಿದೆ ಎಂದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು. 2024 ಡಿಸೆಂಬರ್ ಅಥವಾ 2025ರ ಜನವರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (ಜಿಮ್) 2024ರ ಕೊನೆಯಲ್ಲಿ ಅಥವಾ 2025ರ ಆರಂಭದಲ್ಲಿ ಆಯೋಜಿಸಲಾಗುವುದು ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

Tags: #investingAmericaBangaloreITBTMB PatilPriyank Kharge
Previous Post

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

Next Post

ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

ವಿಷಾನಿಲದ ನಡುವೆ ಕನಸು ಕಟ್ಟಿಕೊಳ್ಳುವ ಒಂದು ಜಗತ್ತು

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada