• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜನರ ಮನಸ್ಸಿನಿಂದ ಗಾಂಧಿ ಕುಟುಂಬವನ್ನು ದೂರ ಮಾಡಲು BJP ಯಿಂದ ಸಾಧ್ಯವಿಲ್ಲ: ಮಾಜಿ ಸಚಿವ ಯು.ಟಿ ಖಾದರ್

ಪ್ರತಿಧ್ವನಿ by ಪ್ರತಿಧ್ವನಿ
August 9, 2021
in ಕರ್ನಾಟಕ, ರಾಜಕೀಯ
0
ಜನರ ಮನಸ್ಸಿನಿಂದ ಗಾಂಧಿ ಕುಟುಂಬವನ್ನು ದೂರ ಮಾಡಲು BJP ಯಿಂದ ಸಾಧ್ಯವಿಲ್ಲ: ಮಾಜಿ ಸಚಿವ ಯು.ಟಿ ಖಾದರ್
Share on WhatsAppShare on FacebookShare on Telegram

‘ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರರು ದೇಶದ ಏಕತೆ, ಸಾರ್ವಭೌಮತ್ವ ಕಾಪಾಡಿ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಹೀಗಾಗಿ ಜನರ ಮನಸ್ಸಿನಿಂದ ಅವರ ಹೆಸರನ್ನು ಅಳಿಸಲು ಬಿಜೆಪಿ ವ್ಯರ್ಥ ಪ್ರಯತ್ನ ಮಾಡುತ್ತಿದ್ದು, ಇದು ಸಾಧ್ಯವಾಗುವುದಿಲ್ಲ’ ಎಂದು ಮಾಜಿ ಸಚಿವ ಯು.ಟಿ ಖಾದರ್ ಅವರು ತಿಳಿಸಿದ್ದಾರೆ.

ADVERTISEMENT

ಬೆಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಖಾದರ್ ಅವರು, ‘ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಬೇಕು’ ಎಂಬ ಬಿಜೆಪಿಯ ಕೆಟ್ಟ ಪ್ರಯತ್ನವನ್ನು ಖಂಡಿಸಿದರು.

‘ಇಂದಿರಾ ಗಾಂಧಿ ಅವರ ಹೆಸರಿರುವ ಯೋಜನೆಗಳನ್ನು ಬಿಜೆಪಿ ಅವರು ಬದಲಾವಣೆ ಮಾಡಬಹುದು. ಆದರೆ ಇಂದಿರಾ ಗಾಂಧಿ ಅವರ ಕೊಡುಗೆ ಹಾಗೂ ಅವರ ವ್ಯಕ್ತಿತ್ವವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಅವರು ದೇಶಕ್ಕೆ ಕೊಟ್ಟ ಅನೇಕ ಕೊಡುಗೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಸ್ವಾಭಿಮಾನ ಮತ್ತು ನೆಮ್ಮದಿ ಬದುಕಿಗೆ ಕಾರ್ಯಕ್ರಮ, ದೇಶದ ಸಾರ್ವಬೌಮತೆಗೆ ಜೀವ ತ್ಯಾಗ ಮಾಡಿದ ವ್ಯಕ್ತಿತ್ವವನ್ನು ಜನ ಮರೆಯಲು ಸಾಧ್ಯವಿಲ್ಲ. ಸರ್ಕಾರಕ್ಕೆ ಹೆಸರು ಮುಖ್ಯವಲ್ಲ. ಜನರು, ಬಡವರ ಪರವಾಗಿ ಮಾಡುವ ಕಾರ್ಯಕ್ರಮ ಮುಖ್ಯ. ಬಡವರ ಹಸಿವು ನೀಗಿಸಲು ಮಾಡಲಾದ ಇಂದಿರಾ ಕ್ಯಾಂಟೀನ್ ಗೆ ಅನುದಾನ ಬಿಡುಗಡೆ ಮಾಡದೇ ಅದನ್ನು ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಕೋವಿಡ್ ಸಮಯದಲ್ಲಿ ಈ ಇಂದಿರಾ ಕ್ಯಾಂಟೀನ್ ಅಗತ್ಯತೆ ಎಲ್ಲರಿಗೂ ಎಷ್ಟು ಮುಖ್ಯವಾಗಿತ್ತು ಎಂಬುದು ಜನರಿಗೆ ತಿಳಿದಿದೆ’ಎಂದು ಹೇಳಿದ್ದಾರೆ.

‘ಹೈಕೋರ್ಟ್ ನಿರ್ದೇಶನದ ನಂತರ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲು ಆರಂಭಿಸಿದ್ದಿರಿ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾನು ಆಹಾರ ಸಚಿವನಾಗಿದ್ದಾಗ ತಮಿಳುನಾಡಿಗೆ ಹೋಗಿ ಅಮ್ಮಾ ಕ್ಯಾಂಟೀನ್ ಅಧ್ಯಯನ ಮಾಡಲು ಹೋಗಿದ್ದೆ. ಅಲ್ಲಿ ಉತ್ತಮ ಗುಣಮಟ್ಟದ ಆಹಾರ,ಶುಚಿತ್ವ , ಬಡವರು ಮಾತ್ರವಲ್ಲ ಶ್ರೀಮಂತರೂ ಸಹ ಅಲ್ಲಿಗೆ ಬರುವಂತೆ ಇರಬೇಕು ಎಂದು ಇಂದಿರಾ ಕ್ಯಾಂಟೀನ್ ಆರಂಭಿಸಿದ್ದೆವು. ಆಗ ನಮ್ಮ ಮುಖ್ಯ ಉದ್ದೇಶ ಬಡವರ ಹಸಿವು ನೀಗಿಸುವುದು ಮತ್ತು ನಮ್ಮ ರಾಜ್ಯದಲ್ಲಿ ಯಾರೂ ಹಸಿವಿನಿಂದ ನರಳಬಾರದು ಎಂಬುದಾಗಿತ್ತುʼ ಎಂದು ಸಭೆಯಲ್ಲಿ ಹೇಳಿದರು.

‘ಬೆಂಗಳೂರಿನಲ್ಲಿ ಕೂಲಿ ಕಾರ್ಮಿಕರು, ಚಾಲಕರು, ಬಸ್ ಕಂಡಕ್ಟರ್ ಗಳು ಬೆಳಗ್ಗೆ ತಿಂದರೆ ಮತ್ತೆ ಸಂಜೆ ಮನೆಗೆ ಹೋದಾಗ ತಿನ್ನುವ ಪರಿಸ್ಥಿತಿ ಇತ್ತು. ಮಧ್ಯಾಹ್ನ ಹೊರಗೆ ಊಟ ಮಾಡಲು ಹೋದರೆ 150 ರೂ. ಖರ್ಚು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಕಾಲೇಜಿಗೆ ಹೋಗುತ್ತಿದ್ದ ಬಡ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುತ್ತಿರಲಿಲ್ಲ. ಹೀಗಾಗಿ ಇವರು ಹಸಿವಿನಿಂದ ಕಲಿಕೆ, ದುಡಿಮೆ ಮಾಡಬಾರದು ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಯೋಜನೆ ಜಾರಿಗೆ ತಂದಿತ್ತು. ಇಂದಿರಾ ಗಾಂಧಿ ಅವರ ಹೆಸರು ಯಾಕೆ ಸೂಕ್ತ ಎಂದರೆ, ಪಡಿತರ ಚೀಟಿ ಹಾಗೂ ನ್ಯಾಯಬೆಲೆ ಅಂಗಡಿ ವ್ಯವಸ್ಥೆಯನ್ನು ಇಂದಿರಾ ಗಾಂಧಿ ಅವರು ಜಾರಿಗೆ ತಂದು ದೇಶದಲ್ಲಿ ಆಹಾರ ಇಲ್ಲದೆ ಜನ ಹಸಿವಿನಿಂದ ಜೀವಿಸಬಾರದು ಎಂದು ಸರ್ಕಾರವೇ ದೇಶದುದ್ದಗಲಕ್ಕೆ ಈ ಯೋಜನೆ ಮೂಲಕ ಆಹಾರ ನೀಡಲು ಆರಂಭಿಸಿತ್ತು. ಇಂತಹ ಪಡಿತರ ಚೀಟಿಯನ್ನು ಕೊಡುವ ಯೋಗ್ಯತೆ ಬಿಜೆಪಿ ಸರ್ಕಾರಕ್ಕಿಲ್ಲ. ಪಡಿತರ ಚೀಟಿ ಕೊಡುವುದನ್ನು ಸರ್ಕಾರ ನಿಲ್ಲಿಸಿದೆ. ಬಡವವರ ಆಹಾರ ಕಡಿತಗೊಳಿಸಿದೆ. ಇಂತಹ ಸರ್ಕಾರ ಅವರ ಹೆಸರನ್ನು ಬದಲಿಸಲು ಮುಂದಾಗಿದೆ. ಯೋಜನೆಗೆ ಇಟ್ಟಿರುವ ಹೆಸರನ್ನು ಬದಲಿಸುವ ಬದಲು ಜನಪರ ಕಾರ್ಯಕ್ರಮವನ್ನು ರೂಪಿಸಿʼ ಎಂದು ಆಗ್ರಹಿಸಿದರು.

‘ಇದು ಕೆಟ್ಟ ಸಂಪ್ರದಾಯವಾಗಿದ್ದು, ಮುಂದುವರಿದರೆ ಅಧಿಕಾರಕ್ಕೆ ಬರುವ ಸರ್ಕಾರಗಳು ಜನಪರ ಕಾರ್ಯಕ್ರಮ ತರುವ ಬದಲು ಹೆಸರು ಬದಲಾವಣೆ ಮಾಡುವುದನ್ನೇ ಸಾಧನೆ ಎಂದುಕೊಳ್ಳುತ್ತವೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಆರೋಗ್ಯ ಸಚಿವನಾಗಿದ್ದಾಗ ವಾಜಪೇಯಿ ಆರೋಗ್ಯ ಶ್ರೀ ಎಂದು ಕಲಬುರ್ಗಿ ವಲಯದಲ್ಲಿ 100 ಕೋಟಿ ರೂ. ಯೋಜನೆ ಜಾರಿಗೆ ತಂದಿದ್ದೆವು. ನಂತರ ಇದನ್ನು ರಾಜ್ಯದುದ್ದಗಲಕ್ಕೂ ಜಾರಿಗೆ ತಂದಿದ್ದೆವು. ಆಗ ಹೆಸರು ಬದಲಿಸಲು ಸಾಕಷ್ಟು ಒತ್ತಡ ಇದ್ದವು. ಆದರೂ ನಾವು ಹೆಸರು ಬದಲಾವಣೆ ಮಾಡಲಿಲ್ಲ. ವಸತಿ ಯೋಜನೆಯಲ್ಲಿ ವಾಜಪೇಯಿ ವಸತಿ ಯೋಜನೆ ಅಂತಾ ಮಾಡಿದರು. ಕಾಂಗ್ರೆಸ್ ಸರ್ಕಾರ ಅದರ ಹೆಸರು ಬದಲಾವಣೆ ಮಾಡಲಿಲ್ಲ. ಕಾಂಗ್ರೆಸ್ ಎಂದಿಗೂ ಇಂತಹ ಕೆಟ್ಟ ಸಂಪ್ರದಾಯ ಮಾಡುವುದಿಲ್ಲ. ಗಾಂಧಿ ಕುಟುಂಬದ ಹೆಸರನ್ನು ಜನರ ಮನಸ್ಸಿನಿಂದ ಅಳಿಸುವುದು ವ್ಯರ್ಥ ಪ್ರಯತ್ನವಾಗಿದ್ದು, ಯಶಸ್ವಿಯಾಗಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

‘ಖಲಿಸ್ಥಾನ ಮಾಡುವ ಪಾಕಿಸ್ತಾನದ ಕುತಂತ್ರ ಮೆಟ್ಟಿ ನಿಂತಿದ್ದಕ್ಕೆ ಬಲಿಯಾದ ಇಂದಿರಾ ಗಾಂಧಿ ಅವರ ರಕ್ತ ಈ ದೇಶದ ಮಣ್ಣಲ್ಲಿ ಬೆರೆತಿದೆ. ಇನ್ನು ದಕ್ಷಿಣ ಭಾರತದಲ್ಲಿ ಶ್ರೀಲಂಕಾದ ಎಲ್ ಟಿಟಿ ದಾಳಿಗೆ ಬಲಿಯಾದ ರಾಜೀವ್ ಗಾಂಧಿ ಅವರ ರಕ್ತ ಮಣ್ಣಲ್ಲಿ ಬೆರೆತಿದೆ. ಹೀಗಾಗಿ ಗಾಂಧಿ ಕುಟುಂಬದವರನ್ನು ಜನರಿಂದ ದೂರ ಮಾಡಲು ಸಾಧ್ಯವಿಲ್ಲ. ಅವರ ಹೆಸರಿನ ಯೋಜನೆಗಳ ಮರುನಾಮಕರಣ ಅವರಿಗೆ ಮಾಡುವ ಅಗೌರವವಾಗಿದೆ’ ಎಂದು ತಿಳಿಸಿದ್ದಾರೆ.

ಮೇಕೆದಾಟು ವಿಚಾರವಾಗಿ ಸಿ.ಟಿ ರವಿ ಮೌನ ಏಕೆ?

‘ಸಿ.ಟಿ ರವಿ ಅವರು ರಾಷ್ಟ್ರಮಟ್ಟದಲ್ಲಿ ಅವರ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ಅಲಂಕರಿಸಿದ್ದಾರೆ. ಅವರು ಇನ್ನಷ್ಟು ಉನ್ನತ ಹುದ್ದೆಗೆ ಏರಲಿ. ಅವರು ತಮಿಳುನಾಡಿನ ಉಸ್ತುವಾರಿ ಹೊತ್ತಿದ್ದು, ಅವರು ಮೇಕೆದಾಟು ವಿಚಾರವಾಗಿ ಯಾಕೆ ಮಾತನಾಡುತ್ತಿಲ್ಲ? ಇಲ್ಲಿಂದ ಅಧಿಕಾರಿಯನ್ನು ಕರೆದುಕೊಂಡು ಹೋಗಿ ಅಲ್ಲಿನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವ ವ್ಯಕ್ತಿ ಅಧಿಕಾರದಲ್ಲಿ ಇಲ್ಲವಾದರೂ ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಧರಣಿ ಕೂತಿದ್ದಾರೆ. ಆದರೂ ರಾಜ್ಯದ ಶಾಸಕರಾಗಿ, ಕನ್ನಡಿಗರ ಪರವಾಗಿ ಸಿ.ಟಿ ರವಿ ಅವರು ಯಾಕೆ ನಿಲ್ಲಲಿಲ್ಲ? ಬಿಜೆಪಿಯವರಿಗೆ ರಾಜ್ಯದ ಜನರ ಬಗ್ಗೆ ಬದ್ಧತೆ ಇದ್ದರೆ ಅವರು ತಮ್ಮ ರಾಜ್ಯಾಧ್ಯಕ್ಷರಿಗೆ ಸಂದೇಶ ಕೊಟ್ಟು ಮೇಕೆದಾಟು ಯೋಜನೆ ಆರಂಭಿಸಲು ಅವಕಾಶ ನೀಡುವಂತೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಜಮೀರ್ ಅಹ್ಮದ್ ಅವರ ಮೇನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ನಮ್ಮ ಪಕ್ಷದ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಗೂ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇನ್ನು ಜಮೀರ್ ಅಹ್ಮದ್ ಅವರು ಅಧಿಕಾರಿಗಳ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಹೇಳಿದ ಮಾತೇ ನಮ್ಮೆಲ್ಲರ ಅಭಿಪ್ರಾಯ’ ಎಂದು ಹೇಳಿದ್ದಾರೆ.

Tags: Congress PartyKarnataka Pradesh Congress Partyut khadarಬಿಜೆಪಿಸಿದ್ದರಾಮಯ್ಯ
Previous Post

ಪೇಗಾಸಸ್: ಬಿಜೆಪಿಯ ಮಂತ್ರದೆದುರು ದಿಕ್ಕೆಟ್ಟು ಹೋಯಿತೆ ಪ್ರತಿಪಕ್ಷ ತಂತ್ರಗಾರಿಕೆ?

Next Post

ಲಸಿಕೆ ಪಡೆದವರಿಗೆ ಲಾಕ್‌ ಓಪನ್‌ ಮಾಡಿ; ಲಸಿಕೆ ಪಡೆಯದೇ ಇದ್ದವರಿಗೆ ಲಾಕ್‌ಡೌನ್‌ ಮಾಡಿ – ಸರಕಾರಕ್ಕೆ Ut khader ಸಲಹೆ

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post

ಲಸಿಕೆ ಪಡೆದವರಿಗೆ ಲಾಕ್‌ ಓಪನ್‌ ಮಾಡಿ; ಲಸಿಕೆ ಪಡೆಯದೇ ಇದ್ದವರಿಗೆ ಲಾಕ್‌ಡೌನ್‌ ಮಾಡಿ - ಸರಕಾರಕ್ಕೆ Ut khader ಸಲಹೆ

Please login to join discussion

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada