ಪೊಲೀಸ್ ಮೆಸ್ನಲ್ಲಿ ಸಿಬ್ಬಂದಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ, ಉಟದ ತಟ್ಟೆ ಹಿಡಿದು ಕಾನ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದ ಕಾನ್ಸ್ಟೇಬಲ್ಗೆ ಉನ್ನತ ಅಧಿಕಾರಿಗಳು ಹುಚ್ಚನ ಹಣೆಪಟ್ಟಿ ಕಟ್ಟುವ ಹುನ್ನಾರ ನಡೆಸುತ್ತಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ಪೊಲೀಸ್ ಕಾನ್ಸ್ಟೇಬಲ್ ಮನೋಜ್ ಕುಮಾರ್ ಕೈಯಲ್ಲಿ ಊಟದ ತಟ್ಟೆ ಹಿಡಿದು ರಸ್ತೆಯಲ್ಲಿ ಪೊಲೀಸ್ ಇಲಾಖೆ ಕೊಡುತ್ತಿರುವ ಆಹಾರ ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ. ಆದರೆ, ಅದನ್ನು ನಮಗೆ ನೀಡಲಾಗುತ್ತಿದೆ. ಇದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಡಿಸಿಪಿಗಳ ಮಾಡುತ್ತಿರುವ ಹಗರಣವಾಗಿದೆ ಎಂದು ವಿಡಿಯೋದಲ್ಲಿ ಪೇದೆ ಪ್ರತಿಭಟನೆ ನಡೆಸುವುದರ ಜೊತೆಗೆ ಕಣ್ಣೀರು ಹಾಕಿದ್ದರು.
ಪೊಲೀಸ್ ಕಾನ್ಸ್ಟೇಬಲ್ ಮನೋಜ್ ಕುಮಾರ್ ಈಗಾಗಲೇ 15 ಬಾರಿ ಶಿಕ್ಷೆಗೆ ಒಳಗಾಗಿದ್ದಾರೆ. ಆತ ಮಾಡಿರುವ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ ಎಂದಿರುವ ಉನ್ನತ ಅಧಿಕಾರಿಗಳು ಆತನೋರ್ವ ಹುಚ್ಚ ಎಂದು ಕರೆಯಲು ಮುಂದಾಗಿದ್ದಾರೆಂದು ಮಾಧ್ಯಮಗಳು ವರದಿಯಾಗಿದೆ.