• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಶಿ ವಿಶ್ವನಾಥ್, ಜ್ಞಾನವಾಪಿ ಮಸೀದಿ ವಿವಾದದಲ್ಲಿ ದಲಿತ ಪ್ರೊಫೆಸರ್‌ಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆಯೇ?

Shivakumar A by Shivakumar A
May 19, 2022
in Top Story
0
ಕಾಶಿ ವಿಶ್ವನಾಥ್, ಜ್ಞಾನವಾಪಿ ಮಸೀದಿ ವಿವಾದದಲ್ಲಿ ದಲಿತ ಪ್ರೊಫೆಸರ್‌ಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆಯೇ?
Share on WhatsAppShare on FacebookShare on Telegram

ದೇಶದ ಇಬ್ಬರು ಪ್ರತಿಷ್ಠಿತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ವಿವಾದಾತ್ಮಕ ಹೇಳಿಕೆಗಳ ನಂತರ ಕಾಶಿ ವಿಶ್ವನಾಥ್ ಮತ್ತು ಜ್ಞಾನವಾಪಿ ಮಸೀದಿ ವಿವಾದ ಮತ್ತಷ್ಟು ಬಿಸಿಯಾಗಿದೆ. ಇಬ್ಬರೂ ಪ್ರಾಧ್ಯಾಪಕರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ವಿಶ್ವವಿದ್ಯಾನಿಲಯದ ಪ್ರೊಫೆಸರ್ ರತನ್ ಲಾಲ್ ಅವರು ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದಲ್ಲಿ ವ್ಯಂಗ್ಯವಾಗಿ ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಹಾಕಿದ್ದು, ಇದಕ್ಕೆ ಸಂಬಂಧಿಸಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಅದೇ ಸಮಯದಲ್ಲಿ, ಕಾಶಿ ವಿಶ್ವನಾಥ ದೇವಾಲಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗಮನ ಸೆಳೆದಿದ್ದ ಪ್ರೊಫೆಸರ್ ರವಿಕಾಂತ್ ಅವರಿಗೆ ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿಯೇ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ.

ADVERTISEMENT

ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಪ್ರಕರಣದ ಬಳಿಕ ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ರತನ್ ಲಾಲ್ ಫೇಸ್‌ಬುಕ್ ಪೋಸ್ಟ್ ಹಾಕಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟ್‌ ವಿರುದ್ಧ ಬಲಪಂಥೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರೊಫೆಸರ್ ರತನ್ ಲಾಲ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರೊಫೆಸರ್ ರತನ್ ಲಾಲ್ ಅವರು ‘ಶಿವಲಿಂಗ’ ಎನ್ನಲಾದ ಫೋಟೋವನ್ನು ಪೋಸ್ಟ್ ಮಾಡಿ, ಅದರ ಜೊತೆಗೆ ಆಕ್ಷೇಪಾರ್ಹ ಕಾಮೆಂಟ್‌ ಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ನನಗೆ ಇನ್ನೂ ಪೊಲೀಸರಿಂದ ಯಾವುದೇ ಸೂಚನೆ ಬಂದಿಲ್ಲ, ಆದರೆ ನನಗೆ ನೋಟಿಸ್ ಬಂದರೆ, ನಾನು ಅವರೊಂದಿಗೆ ಸಹಕರಿಸುತ್ತೇನೆ. ಈ ಹೇಳಿಕೆಗಾಗಿ ನಾನು ಬೆದರಿಕೆ ಮತ್ತು ನಿಂದನೆಗಳನ್ನು ನಿರೀಕ್ಷಿಸಿರಲಿಲ್ಲ.” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆಗೆ ಮಾತನಾಡಿದ ಪ್ರೊಫೆಸರ್ ರತನ್ ಲಾಲ್ ಹೇಳಿದ್ದಾರೆ.

“ಹಿಂದೂ ಧರ್ಮದಲ್ಲಿ ಫುಲೆ, ರವಿದಾಸ್ ಮತ್ತು ಅಂಬೇಡ್ಕರ್ ಅವರನ್ನೊಳಗೊಂಡ ಸುದೀರ್ಘವಾದ ವಿಮರ್ಶೆಯ ಸಂಪ್ರದಾಯವಿದೆ. ಇಲ್ಲಿ, ನಾನು ಅದನ್ನು ವಿಮರ್ಶಿಸಿಲ್ಲ, ಇದು ಕೇವಲ ಒಂದು ಅವಲೋಕನ ಮತ್ತು ಅಭಿಪ್ರಾಯವಾಗಿದೆ. ನಮ್ಮ ದೇಶದಲ್ಲಿ (ಏನು ಮಾತನಾಡಿದರೂ) ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಬಾಯಿಗೆ ಪಟ್ಟಿ ಹಾಕಿಕೊಂಡು ಜನ ಏನು ಮಾಡುತ್ತಾರೆ?” ಎಂದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರೊಫೆಸರ್‌ ಸಮರ್ಥಿಸಿಕೊಂಡಿದ್ದಾರೆ.

ಅದಾಗ್ಯೂ, ತನ್ನ ವಿರುದ್ಧ ಬರುತ್ತಿರುವ ನಿಂದನಾತ್ಮಕ ಅವಹೇಳನ ಹಾಗೂ ಬೆದರಿಕೆಗಳ ವಿರುದ್ಧ ರಕ್ಷಣೆ ಕೋರಿರುವ ಹಿಂದೂ ಕಾಲೇಜಿನ ಇತಿಹಾಸ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ರತನ್ ಲಾಲ್ ಎಕೆ-56 ಪರವಾನಗಿ ನೀಡುವಂತೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ನಿಮ್ಮ ಸರ್ಕಾರವನ್ನು ಟೀಕಿಸುವುದಕ್ಕಾಗಿ ಮತ್ತು ವಿವಿಧ ಸಮಕಾಲೀನ ಸಾಮಾಜಿಕ-ಧಾರ್ಮಿಕ ವಿಷಯಗಳ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಅನೇಕ ಸಮಾಜವಿರೋಧಿಗಳು ನನಗೆ ಬೆದರಿಕೆ ಹಾಕಲು ಪ್ರಾರಂಭಿಸುತ್ತಾರೆ. ಕೆಲವೊಮ್ಮೆ ಈ ಸರಣಿಯು ನನ್ನನ್ನು ಕೊಲ್ಲುವ ಬೆದರಿಕೆಯನ್ನು ಸಹ ನೀಡುತ್ತದೆ.”

“ನನಗೆ ಇಬ್ಬರು ಅಂಗರಕ್ಷಕರನ್ನು ಎಕೆ 56 ರೈಫಲ್‌ಗಳನ್ನು ಒದಗಿಸುವಂತೆ ನಾನು ವಿನಂತಿಸುತ್ತೇನೆ. ಇದು ಸಾಧ್ಯವಾಗದಿದ್ದರೆ, ಸೂಕ್ತ ಅಧಿಕಾರಿಗೆ ಸೂಚನೆ ನೀಡಿ ಎಕೆ 56 ರೈಫಲ್‌ಗಳ ಪರವಾನಗಿಯನ್ನು ನನಗೆ ನೀಡಬೇಕು, ಆದ್ದರಿಂದ ಅಗತ್ಯವಿದ್ದರೆ, ಹಿಂಡು ಹಿಂಡಾಗಿ ಬರುವ ಜನರು ಈ ಸಮಾಜಘಾತುಕ ಶಕ್ತಿಗಳಿಂದ ನನ್ನ ಮತ್ತು ನನ್ನ ಕುಟುಂಬದ ಜೀವವನ್ನು ರಕ್ಷಿಸಿಕೊಳ್ಳಲು” ಎಂದು ಫೇಸ್‌ಬುಕ್‌ನಲ್ಲಿ ಪ್ರೊಫೆಸರ್ ರತನ್ ಲಾಲ್ ಪೋಸ್ಟ್‌ ಮಾಡಿದ್ದಾರೆ.

ಲಕ್ನೋ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಗೆ ಕಪಾಳಮೋಕ್ಷ

ಲಕ್ನೋ ವಿಶ್ವವಿದ್ಯಾನಿಲಯದ ಹಿಂದಿ ವಿಭಾಗದ ಸಹ ಪ್ರಾಧ್ಯಾಪಕ ರವಿಕಾಂತ್ ಕೂಡ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ. ಕಾಶಿ ವಿಶ್ವನಾಥ ದೇಗುಲದ ಬಗ್ಗೆ ನೀಡಿದ್ದ ಹೇಳಿಕೆಗೆ ಪ್ರೊಫೆಸರ್ ರವಿಕಾಂತ್ ಅವರಿಗೆ ಲಕ್ನೋ ವಿಶ್ವವಿದ್ಯಾಲಯದ ಆವರಣದಲ್ಲಿಯೇ ವಿದ್ಯಾರ್ಥಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಕಾರ್ತಿಕ್ ಪಾಂಡೆ ಎಂದು ಗುರುತಿಸಲಾಗಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರೊಫೆಸರ್ ರವಿಕಾಂತ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ವಿಶ್ವವಿದ್ಯಾನಿಲಯ ಆಡಳಿತ ಈ ಬಗ್ಗೆ ಗಂಭೀರವಾಗಿಲ್ಲ, ಪೊಲೀಸ್ ಆಡಳಿತವೂ ಗಂಭೀರವಾಗಿಲ್ಲ.ಇದರಿಂದಾಗಿ ಮತ್ತೆ ಇಂತಹ ಘಟನೆ ನನಗೆ ಮರುಕಳಿಸಿದೆ ಎಂದು ರವಿಕಾಂತ್ ಹೇಳಿದ್ದಾರೆ. ಇನ್ನು ನನಗೆ ಹಲ್ಲೆ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಾಗಿಲ್ಲ, ಆದರೆ, ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರೊಫೆಸರ್ ರವಿಕಾಂತ್ ಹೇಳಿದ್ದೇನು?

ಮೇ 10 ರಂದು ಯೂಟ್ಯೂಬ್ ಚಾನೆಲ್‌ನಲ್ಲಿ ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿತ್ತು. ಈ ಚರ್ಚೆಯಲ್ಲಿ ಲಕ್ನೋ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ರವಿಕಾಂತ್ ಕೂಡ ಭಾಗಿಯಾಗಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಪಟ್ಟಾಭಿ ಸೀತಾರಾಮಯ್ಯ ಅವರ ‘ಫೆದರ್ಸ್ ಅಂಡ್ ಸ್ಟೋನ್ಸ್’ ಪುಸ್ತಕವನ್ನು ಉಲ್ಲೇಖಿಸಿದ ಅವರು, ಮೊಘಲ್ ಚಕ್ರವರ್ತಿ ಔರಂಗಜೇಬ್ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯವನ್ನು ಅಲ್ಲಿ ವ್ಯಭಿಚಾರದ ಆರೋಪದ ಮೇಲೆ ಕೆಡವಿದರು ಎಂದು ಹೇಳಿದ್ದರು.

ದಲಿತ ಪ್ರಾಧ್ಯಾಪಕರನ್ನು ಟಾರ್ಗೆಟ್ ಮಾಡಲಾಗುತ್ತಿದೆಯೇ?

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ ಹೊತ್ತಿರುವ ದೆಹಲಿ ಮತ್ತು ಲಕ್ನೋ ವಿಶ್ವವಿದ್ಯಾಲಯಗಳ ಇಬ್ಬರು ಪ್ರಾಧ್ಯಾಪಕರು ದಲಿತ ಸಮಾಜದಿಂದ ಬಂದವರು. ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ರತನ್‌ಲಾಲ್ ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ, “ಆರಂಭದಲ್ಲಿ ನಾನು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಲಿಲ್ಲ, ಆದರೆ ಇತ್ತೀಚೆಗೆ ನನ್ನಂತಹ ದಲಿತ ಸಮುದಾಯದಿಂದ ಬಂದ ಲಕ್ನೋ ವಿಶ್ವವಿದ್ಯಾಲಯದ ಪ್ರೊಫೆಸರ್ ರವಿಕಾಂತ್ ಚಂದನ್ ಅವರಿಗೂ ಸಮಾಜವಿರೋಧಿ ಸಂಘಟನೆಗಳ ಸದಸ್ಯರು ಮತ್ತು ಆರೋಪಿತ ವಿದ್ಯಾರ್ಥಿ ಸಂಘಟನೆಗಳ ದಾಳಿ ನಡೆದ ನಂತರ ಈ ಪತ್ರ ಬರೆಯುವುದು ಅನಿವಾರ್ಯವಾಗಿದೆ..”

“ನೀವು (ಪ್ರಧಾನಿ ಮೋದಿ) ಒಮ್ಮೆ ‘ಗುಂಡು ಹಾರಿಸಬೇಕಾದರೆ ನನ್ನನ್ನು ಕೊಲ್ಲು, ನನ್ನ ದಲಿತ ಸಹೋದರರ ಮೇಲೆ ಹಲ್ಲೆ ಮಾಡಬೇಡಿ’ ಎಂದು ಹೇಳಿದ್ದು ನನಗೆ ನೆನಪಿದೆ, ನಿಮ್ಮ ರಾಜಕೀಯದ ಬೆಂಬಲಿಗರು ಸಹ ನಿಮ್ಮ ಮಾತನ್ನು ತೆಗೆದುಕೊಳ್ಳುತ್ತಿಲ್ಲ ಎಂದು ತೋರುತ್ತದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಡಿ, ನೀವು ಅಂತಹ ಗಂಭೀರ ಹೇಳಿಕೆ ನೀಡಿದ ನಂತರವೂ ಅವರು ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ.” ಎಂದು ಬರೆದಿದ್ದಾರೆ.

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲೂ ವಿವಾದ

ಅನೇಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಇಂತಹ ವಿವಾದದಲ್ಲಿ ಸಿಲುಕಿದ್ದಾರೆ. ಏಪ್ರಿಲ್‌ನಲ್ಲಿ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಸಹಾಯಕ ಪ್ರಾಧ್ಯಾಪಕ ಜಿತೇಂದ್ರ ಕುಮಾರ್ ಅವರು ದೇವರು ಮತ್ತು ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪ್ರಸ್ತುತಿಯನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ ಅವರನ್ನು ಬಂಧಿಸಲಾಗಿದೆ. ಎಎಂಯುನ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಎಂಬಿಬಿಎಸ್ ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪ್ರಸ್ತುತಿ ನೀಡಿದ ಆರೋಪವನ್ನು ಪ್ರೊಫೆಸರ್ ಜಿತೇಂದ್ರ ಕುಮಾರ್ ಎದುರಿಸಿದ್ದರು.

Tags: BJPCongress PartyCovid 19ಕಾಶಿ ವಿಶ್ವನಾಥ್ಜ್ಞಾನವಾಪಿ ಮಸೀದಿದಲಿತ ಪ್ರೊಫೆಸರ್‌ನರೇಂದ್ರ ಮೋದಿಬಿಜೆಪಿ
Previous Post

ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಲಾರಿ: 3 ಸಾವು, 11 ಮಂದಿಗೆ ಗಾಯ

Next Post

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲ್ಲ : ಸಚಿವ ಬಿ.ಸಿ ಪಾಟೀಲ್

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post
ಸೌಹಾರ್ದತೆಗಾಗಿ  ಸಿಎಂ ಲಾಠಿ ಹಿಡ್ಕೊಂಡು ಬೀದಿಯಲ್ಲಿ ನಿಲ್ಬೇಕಾ? – ಸಚಿವ ಬಿ.ಸಿ. ಪಾಟೀಲ್

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲ್ಲ : ಸಚಿವ ಬಿ.ಸಿ ಪಾಟೀಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada