• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

Congress Guarantee | ಇವತ್ತು ಸರ್ಕಾರದ 5 ಗ್ಯಾರಂಟಿ ಇಲ್ಲ.. ನಾಳೆ 3 ಪಕ್ಕಾ.. ಉಳಿದಿದ್ದು ಯಾಕೆ ತಡ..?

ಕೃಷ್ಣ ಮಣಿ by ಕೃಷ್ಣ ಮಣಿ
June 1, 2023
in Uncategorized
0
Congress Guarantee | ಇವತ್ತು ಸರ್ಕಾರದ 5 ಗ್ಯಾರಂಟಿ ಇಲ್ಲ.. ನಾಳೆ 3 ಪಕ್ಕಾ.. ಉಳಿದಿದ್ದು ಯಾಕೆ ತಡ..?
Share on WhatsAppShare on FacebookShare on Telegram
ರಾಜ್ಯ ಸರ್ಕಾರದ ಗ್ಯಾರಂಟಿ ಇವತ್ತು ಜಾರಿ ಆಗ್ತಿಲ್ಲ. ಜೂನ್‌ 1 ರಂದು ಸಚಿವ ಸಂಪುಟ ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ, ಇಂದಿನ ಸಭೆಯನ್ನು ನಾಳೆಗೆ ಮುಂದೂಡಿದ್ದಾರೆ. ಇಂದು ಪಂಚ ಗ್ಯಾರಂಟಿಗಳು ಘೋಷಣೆ ಆಗುತ್ತವೆ ಎಂದುಕೊಂಡಿದ್ದ ಜನರು ಇನ್ನೊಂದು ದಿನ ಕಾಯಲೇ ಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಬುಧವಾರ ನಡೆದ ಸಚಿವರು ಹಾಗು ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಅಂಶಗಳನ್ನು ಅಧಿಕಾರಿಗಳು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ಇನ್ನೂ ಒಂದಿಷ್ಟು ತಿದ್ದುಪಡಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಆ ಸಿದ್ಧತೆಗಳನ್ನು ಇವತ್ತು ಮತ್ತೊಮ್ಮೆ ಪರಿಶೀಲನೆ ನಡೆಸಲಿದ್ದು, ಶುಕ್ರವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಘೋಷಣೆ ಮಾಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

3 ಗ್ಯಾರಂಟಿಗಳಿಗೆ ಮಾತ್ರ ಸರ್ಕಾರದ ಅಸ್ತು..!

ADVERTISEMENT

ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲೇ ಘೋಷಣೆ ಮಾಡ್ತೇವೆ ಎಂದಿದ್ದ ಸಿದ್ದರಾಮಯ್ಯ ಹಾಗು ಡಿ.ಕೆ ಶಿವಕುಮಾರ್‌, ಇದೀಗ ಮೊದಲಿಗೆ ಮೂರು ಗ್ಯಾರಂಟಿಗಳನ್ನು ಮಾತ್ರ ಜಾರಿ ಮಾಡಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ಮೂರು ಯೋಜನೆಗಳನ್ನು ಜಾರಿ ಮಾಡಿ ಇನ್ನೆರಡು ಯೋಜನೆಗಳನ್ನು ನಿಧಾನವಾಗಿ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದಾರೆ ಅನ್ನೋ ಮಾಹಿತಿ ವಿಧಾನಸೌಧದಿಂದ ಹೊರಬಿದ್ದಿದೆ. ಮನೆಗೆ 200 ಯೂನಿಟ್‌ ವಿದ್ಯುತ್‌ ನೀಡುವ ಗೃಹಜ್ಯೋತಿ, ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಉಚಿತ ಅಕ್ಕಿ ಹಾಗು ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ಸರ್ಕಾರ ಅಸ್ತು ಎಂದಿದೆ. ಇನ್ನುಳೀದ ಎರಡು ಗ್ಯಾರಂಟಿಗಳನ್ನು ಪಡೆಯಲು ಇನ್ನೂ ಸ್ವಲ್ಪ ದಿನಗಳು ಕಾಯಬೇಕಾಗಿದೆ.

ಗೃಹಲಕ್ಷ್ಮೀ, ಯುವನಿಧಿ ಯೋಜನೆ ತಡ ಯಾಕೆ..?

ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಘೋಷಣೆಯನ್ನು ಸದ್ಯಕ್ಕೆ ಘೋಷಣೆ ಮಾಡದಿರಲು ಕಾಂಗ್ರೆಸ್‌ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗ್ತಿದೆ. ಇದಕ್ಕೆ ಕಾರಣ, ಪ್ರತಿಯೊಂದು ಕುಟುಂಬದಲ್ಲಿ ಮಹಿಳೆಯರು ಇರುತ್ತಾರೆ. ಯಾರನ್ನು ಆಯ್ಕೆ ಮಾಡುವುದು ಅನ್ನೋ ಗೊಂದಲ ಶುರುವಾಗಿದೆ. ಅತ್ತೆ ಮನೆ ಯಜಮಾನಿಯೋ..? ಸೊಸೆ ಯಜಮಾನಿಯೋ ಅನ್ನೋ ಗೊಂದಲ ಎದುರಾಗಿದೆ. ಇನ್ನು ಗೃಹಲಕ್ಷ್ಮೀ ಯೋಜನೆ ಜಾರಿ ಬಳಿಕ ವಯೋವೃದ್ಧ ಮಹಿಳೆಯರಿಗೆ ಕೊಡುತ್ತಿರುವ ವೃದ್ಧಾಪ್ಯ ವೇತನ ಹಾಗು ವಿಧವಾ ವೇತನ ನಿಲ್ಲಿಸುವುದು ಸೂಕ್ತವೇ ಅನ್ನೋ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ರೇಷನ್‌ ಕಾರ್ಡ್‌ನಲ್ಲಿ ಎಷ್ಟು ಜನರಿದ್ದಾರೆ, ಅದರಲ್ಲಿ ಯಾರು ಮನೆ ಯಜಮಾನಿಯಾಗಿ ಕಾಣಿಸಿಕೊಂಡಿದ್ದಾರೆ ಅವರಿಗೆ ಮಾತ್ರ 2 ಸಾವಿರ ನೀಡುವಂತೆಯೂ ಸಲಹೆಗಳು ಸರ್ಕಾರವನ್ನು ತಲುಪಿವೆ ಎನ್ನಲಾಗಿದೆ.

ಯುವನಿಧಿ ಯೋಜನೆ ಜಾರಿಯಲ್ಲೇ ಕಾಲಾವಕಾಶ ಇದೆ..

ಯುವನಿಧಿ ಯೋಜನೆಯಲ್ಲಿ ಪದವಿ ಹಾಗು ಡಿಪ್ಲೊಮಾ ಮುಗಿಸಿ ಯುವ ಜನಾಂಗಕ್ಕೆ 2 ವರ್ಷಗಳ ಕಾಲ 3 ಸಾವಿರ ಹಾಗು ಒಂದೂವರೆ ಸಾವಿರ ಸಹಾಯ ಧನ ನೀಡುವ ಘೋಷಣೆ ಮಾಡಲಾಗಿದೆ. ಪದವಿ ಅಥವಾ ಡಿಪ್ಲೊಮಾ ಮುಗಿಸಿದ ಯುವಕ, ಯುವತಿಯರು ಮುಂದಿನ 180 ದಿನಗಳಲ್ಲಿ ಕೆಲಸ ಪಡೆಯಲು ಸಾಧ್ಯವಾಗದಿದ್ದರೆ ಅಂತಹ ಯುವಕರಿಗೆ 2 ವರ್ಷಗಳ ಕಾಲ ಸಹಾಯಧನ ಕೊಡಲಾಗುತ್ತದೆ. ಜೊತೆಗೆ ತರಬೇತಿ ಕೊಟ್ಟು ಕೆಲಸ ಪಡೆಯುವಂತೆ ಮಾಡುವ ಯೋಜನೆ ಜಾರಿ ಮಾಡಬೇಕಿದೆ. ಇದಕ್ಕೆ ಸೂಕ್ತ ಕಾಲಾವಕಾಶ ಬೇಕಿದೆ. ಇನ್ನು ಇದೀಗ ಪದವಿ ಮುಗಿಸಿ ಹೊರ ಬಂದಿರುವ ಯುವ ಜನಾಂಗ 180 ದಿನಗಳನ್ನು ಕಳೆಯಬೇಕಿದೆ. ಆ ಬಳಿಕವಷ್ಟೇ ಯೋಜನೆ ಜಾರಿ ಮಾಡಲಾಗುತ್ತದೆ. ಇನ್ನು ಯುವ ಜನಾಂಗಕ್ಕೆ ತರಬೇತಿ ಕೊಡುವಾಗ ಅವರನ್ನು ಹೇಗೆ ಕರೆಸಬೇಕು. ತರಬೇತಿ ಹೊಣೆಯನ್ನು ಯಾವ ಇಲಾಖೆಗೆ ವಹಿಸಬೇಕು ಅನ್ನೋ ಬಗ್ಗೆಯೂ ಚರ್ಚೆ ನಡೀತಿದೆ. ಇದೇ ಕಾರಣಕ್ಕೆ 2 ಯೋಜನೆಗಳ ಜಾರಿಗೆ ಕೊಂಚ ಸಮಯಾವಕಾಶ ಕೇಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಕೃಷ್ಣಮಣಿ

Tags: BJPbrekingnewscmsiddaramiahCongress GuaranteeCongress PartyDCM DK ShivakumarDKShivakumarKarnataka GovernmentMallikarjun KhargePM ModiRahul Gandhisiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

India Is Not Developed Country : ಮೋದಿ ಆಡಳಿತದಲ್ಲಿ ಮುಗ್ಗರಿಸುತ್ತಿರುವ ಭಾರತ..!

Next Post

ಬಂಡವಾಳಶಾಹಿ ಆರ್ಥಿಕತೆಯೂ ಶ್ರೀಸಾಮಾನ್ಯನ ಸಂಕಷ್ಟಗಳೂ..ಸಮಾಜದ ತಳಮಟ್ಟದ ಜನತೆಗೆ ತಲುಪದ ಆರ್ಥಿಕ ಅನುಕೂಲತೆಗಳಿಗೆ ಪರ್ಯಾಯವೇ ಉಚಿತಗಳು

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಬಂಡವಾಳಶಾಹಿ ಆರ್ಥಿಕತೆಯೂ ಶ್ರೀಸಾಮಾನ್ಯನ ಸಂಕಷ್ಟಗಳೂ..ಸಮಾಜದ ತಳಮಟ್ಟದ ಜನತೆಗೆ ತಲುಪದ ಆರ್ಥಿಕ ಅನುಕೂಲತೆಗಳಿಗೆ ಪರ್ಯಾಯವೇ ಉಚಿತಗಳು

ಬಂಡವಾಳಶಾಹಿ ಆರ್ಥಿಕತೆಯೂ ಶ್ರೀಸಾಮಾನ್ಯನ ಸಂಕಷ್ಟಗಳೂ..ಸಮಾಜದ ತಳಮಟ್ಟದ ಜನತೆಗೆ ತಲುಪದ ಆರ್ಥಿಕ ಅನುಕೂಲತೆಗಳಿಗೆ ಪರ್ಯಾಯವೇ ಉಚಿತಗಳು

Please login to join discussion

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada