ಬೆಂಗಳೂರು : ಕೇರಳಂ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಹಲವು ದಿನಗಳ ಕಗ್ಗಂಟ್ಟಿನ ಬಳಿಕ ಕಾಂಗ್ರೆಸ್ ವಿ.ಡಿ. ಸತೀಶನ್ ಅವರನ್ನು ಕೇರಳದ ಮುಖ್ಯಮಂತ್ರಿಯಾಗಿ ಘೋಷಿಸಿದೆ.

ಇಂದು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ನಾಯಕರಾದ ಅಜಯ್ ಮಾಕೆನ್ ಮತ್ತು ದೀಪಾ ದಾಸ್ ಮುನ್ಶಿ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಕೇರಳ ಕಾಂಗ್ರೆಸ್ ನಾಯಕರಾದ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದ್ದವು.
ಆದರೆ ಈ ಪೈಕಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿರುವುದು ಕೇರಳ ಕಾಂಗ್ರೆಸ್ಗೆ ಇನ್ನಷ್ಟು ಬಲ ಬರಲಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಇದನ್ನೂ ಓದಿ : ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ
ಇನ್ನೂ ಪ್ರಮುಖವಾಗಿ ಕೇರಳಂ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಉತ್ತಮ ಪ್ರದರ್ಶನ ನೀಡಿತ್ತು. ಒಟ್ಟು 140 ವಿಧಾನಸಭಾ ಸ್ಥಾನಗಳಲ್ಲಿನ 102 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ಮೂಲಕ ಈ ಹಿಂದೆ ಆಡಳಿತದಲ್ಲಿದ್ದ ಮಾಜಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಕಂಡಿತ್ತು.
ಆದರೆ ಚುನಾವಣಾ ಫಲಿತಾಂಶ ಬಂದ ಬಳಿಕ ಎರಡು ವಾರಗಳ ಕಾಲದ ಪ್ರಹಸನದ ಮೂಲಕ ಇಂದು ಕಾಂಗ್ರೆಸ್ ಅಧಿಕೃತವಾಗಿ ಮುಖ್ಯಮಂತ್ರಿ ಹೆಸರು ಘೋಷಿಸಿದೆ.






