• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ವಿ.ಸೋಮಣ್ಣರ ಕೈ ಹಿಡಿದ ಬಿಜೆಪಿ ಹೈಕಮಾಂಡ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in Uncategorized, ರಾಜಕೀಯ
0
Share on WhatsAppShare on FacebookShare on Telegram

ತುಮಕೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ.ಸೋಮಣ್ಣ ಈಗ ಕೇಂದ್ರದ ಎನ್‌ಡಿಎ ಸರ್ಕಾರದ ಅಂಗ. ಅಂದರೆ, ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿ ನಿನ್ನೆಯೆಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ 2023 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಸ್ಪರ್ಧೆಗೀಳಿದು, ಹೈಕಮಾಂಡ್ ನಾಯಕರ ಅಣತಿಯಂತೆ ನಡೆದಿದ್ದ ಸೋಮಣ್ಣರಿಗೆ ಎರಡು ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದ್ದು ಇಂದು ಇತಿಹಾಸ. ಇದಾದ ಕೇವಲ 11 ತಿಂಗಳಲ್ಲಿ, ಫಿನಿಕ್ಸ್ ಹಕ್ಕಿಯಂತೆ ವಿ‌.ಸೋಮಣ್ಣ ರಾಜಕೀಯವಾಗಿ ಎದ್ದು ಬಂದಿದ್ದು, ರಾಷ್ಟ್ರದ ಬಿಜೆಪಿ ನಾಯಕರ ಮಾರ್ಗದರ್ಶನ ಹಾಗೂ ಸೂಚನೆಯನ್ನು ಪಾಲಿಸಿದ್ದಕ್ಕೆ ಅವರಿಗೆ ಇಂದು ಮಹತ್ವದ ಸ್ಥಾನ ಒಲಿದು ಬಂದಿದೆ.

ADVERTISEMENT

ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ವಿ.ಸೋಮಣ್ಣ ಸಚಿವರಾಗಿದ್ದಾರೆ. ಇನ್ನು ವಿ. ಸೋಮಣ್ಣರ, ಕೈ ಹಿಡಿದಿದ್ದು ರಾಷ್ಟ್ರದ ಯಾವೆಲ್ಲಾ ನಾಯಕರುಗಳು ಎಂಬುದನ್ನು ಸೂಕ್ಷ್ಮವಾಗಿ ಅವಲೋಕಿಸುವುದಾದ್ರೆ, ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಜೊತೆಗೆ ಬಿಜೆಪಿ ರಾಷ್ಟ್ರೀಯ ಸಂಘಟ‌ನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್.

ಹೌದು, ವಿ.ಸೋಮಣ್ಣ ಸೋಲುಂಡ ಬಳಿಕ ಅವರಿಂದ ರಾಜ್ಯದ ಎಲ್ಲಾ ಬಿಜೆಪಿ ನಾಯಕರು ಅಂತರ ಕಾಯ್ದುಕೊಳ್ಳುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕರು ಸೋಮಣ್ಣರ ಬೆನ್ನಿಗೆ ನಿಂತಿದ್ರು. ಅದರಲ್ಲೂ 2024 ರ ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ವಿ. ಸೋಮಣ್ಣರಿಗೆ ಶತಾಯಗತಾಯ ತುಮಕೂರು ಕ್ಷೇತ್ರದ ಟಿಕೆಟ್ ನೀಡಿಯೇ ತೀರುತ್ತೇವೆ ಎಂದು ಅವರೆಲ್ಲಾ ಪಣ ತೊಟ್ಟಿದ್ರು.

ಇದರ ಮುಂದುವರೆದ ಭಾಗವಾಗಿ, ವಿ.ಸೋಮಣ್ಣ, ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು 1.75 ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದೇ ತಡ, ಜೆಡಿಎಸ್‌‌‌‌ ನಾಯಕರ ಸಹಕಾರದೊಂದಿಗೆ ಕೇಂದ್ರದಲ್ಲಿ ಸಚಿವನಾಗುವ ಹಾದಿಯನ್ನು ಸುಲಭ ಮಾಡಿಕೊಂಡರು.

ಬಿಜೆಪಿಯಿಂದ 9 ಮಂದಿಯ ಪೈಕಿ, 5 ಸಂಸದರು, ಅದರಲ್ಲಿ ಸೋಮಣ್ಣ ಮಿನಿಸ್ಟರ್!

ಇನ್ನು 2024 ರ ಲೋಕಸಭಾ ಚುನಾವಣೆಯಲ್ಲಿ 9 ಮಂದಿ ಪ್ರಬಲ ವೀರಶೈವ-ಲಿಂಗಾಯತ ಸಮುದಾಯದ ನಾಯಕರಿಗೆ ಬಿಜೆಪಿ ಅಭ್ಯರ್ಥಿಯನ್ನಾಗಿಸಿ ಕಣಕ್ಕಿಳಿಸಿತ್ತು. ಅದರ ಪೈಕಿ ಚಿಕ್ಕೋಡಿಯ ಅಣ್ಣಾಸಾಹೇಬ್ ಜೊಲ್ಲೆ, ದಾವಣಗೆರೆಯ ಗಾಯಿತ್ರಿ ಸಿದ್ದೇಶ್ವರ್, ಬೀದರ್‌ನ ಭಗವಮನತ ಖೂಬಾ ಹಾಗೂ ಕೊಪ್ಪಳದ ಡಾ. ಬಸವರಾಜ ಕ್ಯಾವಟರ್ ಪರಾಭವಗೊಂಡರೆ, ಇತ್ತ ತುಮಕೂರಿನ ವಿ.ಸೋಮಣ್ಣ, ಹಾವೇರಿ-ಗದಗದ ಬಸವರಾಜ ಬೊಮ್ಮಾಯಿ, ಬೆಳಗಾವಿಯ ಜಗದೀಶ್ ಶೆಟ್ಟರ್, ಶಿವಮೊಗ್ಗದ ಬಿ.ವೈ.ರಾಘವೇಂದ್ರ ಹಾಗೂ ಬಾಗಲಕೋಟೆಯ ಪಿ.ಸಿ. ಗದ್ದೀಗೌಡರ್ ಸಂಸದರಾಗಿ ಆಯ್ಕೆಯಾದ್ರು.

ಇತ್ತ ಈ ಐವರ ಪೈಕಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಈಗಾಗಲೇ ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವದಿಂದ, ಬಿ.ವೈ. ರಾಘವೇಂದ್ರರ ಕುಟುಂಬದಲ್ಲಿ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ, ತಂದೆ ಬಿ. ಎಸ್.ಯಡಿಯೂರಪ್ಪ ಕೇಂದ್ರ ಬಿಜೆಪಿಯಲ್ಲಿ ಮಹತ್ವದ ಸ್ಥಾನದಲ್ಲಿರುವ ಕಾರಣ ಕ್ಯಾಬಿನೆಟ್ ಸಚಿವರಾಗುವುದರಲ್ಲಿ ಅವರು ಹಿನ್ನಡೆ ಅನುಭವಿಸಿದಂತಾಗಿದೆ. ಇನ್ನು ಪಿ‌.ಸಿ‌.ಗದ್ದೀಗೌಡರ್‌ ಅವರಿಗೆ ಪ್ರಾಂತ್ಯಾಧಾರದ ಮೇಲೆ ಸಚಿವ ಸ್ಥಾನ ಕೈ ತಪ್ಪಿದೆ. ಇತ್ತ ತುಮಕೂರಿನ ವಿ.ಸೋಮಣ್ಣರಿಗೆ ಜಾಕ್‌ಪಾಟ್ ಹೊಡೆದಿದೆ.

ಇತ್ತ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದು, ಕೇಂದ್ರದಲ್ಲಿ ಮಂತ್ರಿ ಸ್ಥಾನ ಲಾಭಿಸಿದೆ.

Tags: Congress PartyV somannaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ರಾಜ್ಯದ 7 ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

Next Post

ಕೃಷಿ ಇಲಾಖೆ ಬೇಡ ಖಾತೆ ಬದಲಾವಣೆ ಮಾಡಿಕೊಡಿ ಎಂದ್ರಾ ಸಚಿವ ಚೆಲುವರಾಯಸ್ವಾಮಿ ?!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಬಿಜೆಪಿ-ಜೆಡಿಎಸ್ ನಡುವೆ ಗೊಂದಲ..HDK ಗೆ ಮೈತ್ರಿ ತೃಪ್ತಿ ತಂದಿಲ್ಲ.. : ಸಚಿವ ಚೆಲುವರಾಯ ಸ್ವಾಮಿ ಕಿಡಿ

ಕೃಷಿ ಇಲಾಖೆ ಬೇಡ ಖಾತೆ ಬದಲಾವಣೆ ಮಾಡಿಕೊಡಿ ಎಂದ್ರಾ ಸಚಿವ ಚೆಲುವರಾಯಸ್ವಾಮಿ ?!

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada