• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?

Any Mind by Any Mind
November 29, 2021
in ದೇಶ, ವಿದೇಶ
0
ಲಸಿಕೆ ಸಾವು ಪ್ರಕರಣ: ಬಿಲ್ ಗೇಟ್ಸ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಮನವಿ?
Share on WhatsAppShare on FacebookShare on Telegram

ಕೋವಿಶೀಲ್ಡ್ ಲಸಿಕೆ ಪಡೆದ ವೈದ್ಯೆ ಡಾ ಸ್ನೇಹಾಲ್ ಲುನಾವತ್ ಅವರ ಸಾವಿಗೆ ಲಸಿಕೆಯ ಅಡ್ಡಪರಿಣಾಮವೇ ಕಾರಣ ಎಂಬುದು ನ್ಯಾಷನಲ್ ಅಡ್ವರ್ಸ್ ಈವೆಂಟ್ಸ್ ಫಾಲೋಯಿಂಗ್ ಇಮ್ಯುನೈಸೇಷನ್(AEFI) ವರದಿಯಲ್ಲಿ ಖಚಿತವಾದ ಬೆನ್ನಲ್ಲೇ ಲಸಿಕೆ ತಯಾರಿಸಿದ ಆಸ್ಟ್ರಾಜೆನೆಕಾ ಕಂಪನಿಯ ಮುಖ್ಯಸ್ಥ ಬಿಲ್ ಗೇಟ್ಸ್ ಮತ್ತು ಸಂಸ್ಥೆಯ ಭಾರತೀಯ ಪಾಲುದಾರ ಆಧಾರ್ ಪೂನಾವಾಲಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ಈ ಕುರಿತು ಇಂಡಿಯನ್ ಬಾರ್ ಅಸೋಸಿಯೇಷನ್ ಎಂಬ ಜಾಲತಾಣದಲ್ಲಿ ಪ್ರಕರಣದ ಸಂಖ್ಯೆಯೊಂದಿಗೆ [Kiran Yadav Vs. State and ors.Criminal Writ Petition (St.) 18017 of 2021] ಮಾಹಿತಿ ಪ್ರಕಟಿಸಿದ್ದು, ಹಲವು ವಿದೇಶಿ ಜಾಲತಾಣ ಮಾಧ್ಯಮಗಳಲ್ಲಿ ವರದಿಯಾಗಿದೆ.

ಮಹಾರಾಷ್ಟ್ರ ಮೂಲದ 33 ವರ್ಷದ ಡಾ ಸ್ನೇಹಾಲ್, ಗುರುಗ್ರಾಮದಲ್ಲಿ ವೃತ್ತಿನಿರತರಾಗಿದ್ದರು. ಜನವರಿ 28ರಂದು ಮಹಾರಾಷ್ಟ್ರದ ನಾಸಿಕ್ ನಲ್ಲಿ ಮೊದಲ ಡೋಸ್ ಲಸಿಕೆ ಪಡೆದಿದ್ದ ಅವರಿಗೆ ಫೆಬ್ರವರಿ 3ರಿಂದ ತೀವ್ರತರನಾದ ತಲೆನೋವು ಕಾಣಿಸಿಕೊಂಡಿತ್ತು, ಬಳಿಕ ಅವರು ಕೆಲಸ ಮಾಡುತ್ತಿದ್ದ ಉತ್ತರಪ್ರದೇಶದ ಗುರುಗ್ರಾಮಕ್ಕೆ ತೆರಳಿದ ಬಳಿಕ ಅಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅಲ್ಲಿ ಅವರಿಗೆ ನರಸಂಬಂಧಿತ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು. ಆದರೂ ಪರಿಸ್ಥಿತಿ ಬಿಗಡಾಯಿಸಿದ್ದರಿಂದ ಔರಂಗಾಬಾದ್ ಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವಾಗ ಮಾರ್ಚ್ 1ರಂದು ಮಾರ್ಗಮಧ್ಯೆ ಸಾವು ಕಂಡಿದ್ದರು. ಲಸಿಕೆ ಪಡೆದ ಬಳಿಕ ವೈದ್ಯೆಯ ದಿಢೀರ್ ಅನಾರೋಗ್ಯದ ಕುರಿತು ಲಸಿಕೆ ತಯಾರಿಕಾ ಸಂಸ್ಥೆ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ, ಕೇಂದ್ರ ಆರೋಗ್ಯ ಸಚಿವಾಲಯ ಸೇರಿದಂತೆ ಹಲವರ ಮೊರೆ ಹೋಗಿದ್ದರೂ, ಕುಟುಂಬಕ್ಕೆ ಯಾವುದೇ ನೆರವು ಅಥವಾ ಸ್ಪಂದನೆ ಸಿಕ್ಕಿರಲಿಲ್ಲ.

ಬಳಿಕ ವೈದ್ಯೆಯ ಸಾವಿನ ಹಿನ್ನೆಲೆಯಲ್ಲಿ ಅವರ ಕುಟುಂಬ ನ್ಯಾಷನಲ್ ಅಡ್ವರ್ಸ್ ಈವೆಂಟ್ಸ್ ಫಾಲೋಯಿಂಗ್ ಇಮ್ಯುನೈಸೇಷನ್(AEFI) ಮತ್ತು ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ದೂರು ನೀಡಿದ್ದರು. ಪ್ರಕರಣದ ಪರಿಶೀಲನೆ ನಡೆಸಿದ್ದ ಎಇಎಫ್ ಐ, ಕಳೆದ ಅಕ್ಟೋಬರಿನಲ್ಲಿ ಸಾವಿಗೆ ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮವೇ ಕಾರಣ ಎಂಬುದನ್ನು ಅಧಿಕೃತವಾಗಿ ಒಪ್ಪಿಕೊಂಡಿತ್ತು. ಈ ನಡುವೆ ವೈದ್ಯೆಯ ಕುಟುಂಬ ಆಲ್ ಇಂಡಿಯಾ ಡ್ರಗ್ಸ್ ನೆಟ್ವರ್ಕ್(ಎಐಡಿಎನ್) ಸಂಘಟನೆಯ ನೆರವಿನೊಂದಿಗೆ ವಿಶ್ವ ಆರೋಗ್ಯ ಸಂಸ್ಥೆ(WHO) ಗೂ ಮೊರೆ ಹೋಗಿತ್ತು. WHO ಕೂಡ ಪ್ರಕರಣದ ಕುರಿತು ತನಿಖೆ ಆರಂಭಿಸಿತ್ತು. ಅಲ್ಲದೆ, ಘಟನೆ ನಡೆದು ಏಳು ತಿಂಗಳು ಕಳೆದರೂ ಲಸಿಕೆ ಸಾವಿನ ಕುರಿತು ಅಧಿಕೃತ ವರದಿ ನೀಡದ ಎಇಎಫ್ ಐ ಮೇಲೆ ಮಾಹಿತಿ ಹಕ್ಕು ಅರ್ಜಿಯ ಮೂಲಕವೂ ಒತ್ತಡ ಹಾಕಲಾಗಿತ್ತು.

ಇದೀಗ ಎಇಎಫ್ ಐ ಅಧಿಕೃತವಾಗಿ ವೈದ್ಯೆಯ ಸಾವಿಗೆ ಕೋವಿಶೀಲ್ಡ್ ಲಸಿಕೆಯೇ ಕಾರಣ ಎಂಬುದನ್ನು ಒಪ್ಪಿಕೊಂಡ ಬಳಿಕ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದು, ಕೋವಿಶೀಲ್ಡ್ ಲಸಿಕೆ ತಯಾರಕ ಸಂಸ್ಥೆ ಆಸ್ಟ್ರಾ ಜೆನೆಕಾದ ಬಿಲ್ ಗೇಟ್ಸ್, ಆ ಕಂಪನಿಯ ಭಾರತೀಯ ಪಾಲುದಾರ ಸಂಸ್ಥೆ ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಆಧಾರ್ ಪೂನಾವಾಲಾ ಹಾಗೂ ಆ ಲಸಿಕೆ ಸುರಕ್ಷಿತ ಮತ್ತು ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಜನರನ್ನು ನಂಬಿಸಿದ ಭಾರತ ಸರ್ಕಾರದ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ ಎಂದು ಇಂಡಿಯನ್ ಬಾರ್ ಅಸೋಷಿಯೇಷನ್ ವರದಿ ಮಾಡಿದೆ.

ಆ ವರದಿಯ ಪ್ರಕಾರ, ತಮ್ಮ ಮಗಳ ಸಾವಿಗೆ ಕಾರಣವಾದ ಈ ಲಸಿಕೆ ಅತ್ಯಂತ ಸುರಕ್ಷಿತ ಎಂದು ಹೇಳಿ ಹಾದಿತಪ್ಪಿಸಿದ ಹಿನ್ನೆಲೆಯಲ್ಲಿ ಬಿಲ್ ಗೇಟ್ಸ್ ಸೇರಿದಂತೆ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ, ಸಿಬಿಐ ತನಿಖೆ ನಡೆಸಬೇಕು. ಆರೋಪಿಗಳನ್ನು ಸುಳ್ಳು ಪತ್ತೆ ಮತ್ತು ನಾರ್ಕೋ ಅನಾಲಿಸಿಸ್ ಪರೀಕ್ಷೆಗೆ ಒಳಪಡಿಸಬೇಕು. ಅಲ್ಲದೆ 1000 ಕೋಟಿ ರೂ. ಪರಿಹಾರಕ್ಕೆ ಅಹವಾಲು ಸಲ್ಲಿಸಿರುವ ಅರ್ಜಿದಾರರು, ತತಕ್ಷಣಕ್ಕೆ ಮಧ್ಯಂತರ ಪರಿಹಾರವಾಗಿ ನೂರು ಕೋಟಿ ರೂಪಾಯಿಗಳನ್ನು ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡುವಂತೆಯೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಬಿಲ್ ಗೇಟ್ಸ್ ಮತ್ತು ಆಧಾರ್ ಪೂನಾವಾಲಾ ಅವರನ್ನು ಕೂಡಲೇ ಸಿಬಿಐ ವಶಕ್ಕೆ ಪಡೆದು ತನಿಖೆ ನಡೆಸಬೇಕು. ಆ ಮೂಲಕ ಕೋಟ್ಯಂತರ ಮಂದಿ ಭಾರತೀಯರ ಪ್ರಾಣದ ಜೊತೆ ಆಟವಾಡಿರುವ ಅವರು ಭಾರತೀಯರ ವಿರುದ್ಧ ನಡೆಸಿರುವ ಸಂಚಿನ ಕುರಿತು ಸಮಗ್ರ ಮಾಹಿತಿ ಹೊರತೆಗೆಯಬೇಕು ಎಂದೂ ಅರ್ಜಿಯಲ್ಲಿ ಕೋರಿದ್ದಾರೆ ಎಂದು ಇಂಡಿಯನ್ ಬಾರ್ ಅಸೋಸಿಯೇಷನ್ ಹೇಳಿದೆ.

Tags: BJPCovid 19ಆಧಾರ್ ಪೂನಾವಾಲಾಆಸ್ಟ್ರಾಜೆನೆಕಾಕೋವಿಡ್-19ಕೋವಿಶೀಲ್ಡ್ಡಾ ಸ್ನೇಹಾಲ್ ಲೂನಾವತ್ಬಿಲ್ ಗೇಟ್ಸ್ಸೀರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ
Previous Post

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದು ಸ್ವಾಗತಾರ್ಹ, ಆದರೆ ಚರ್ಚೆ ಮಾಡಲು ನಿರಾಕರಿಸಿದ ಸರ್ಕಾರ ಭಯಬೀತವಾಗಿದೆ

Next Post

ನಮ್ಮ ಹಿಂದೂ ರಾಷ್ಟ್ರ ನಿರ್ಮಾಣ ಹೋರಾಟಕ್ಕೆ ಬಿಜೆಪಿ, RSS ಬೆಂಬಲಿಸುತ್ತಿಲ್ಲ: ಪ್ರಮೋದ್ ಮುತಾಲಿಕ್ ಕಿಡಿ

Related Posts

Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
0

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ್ದನ್ನು ವಿರೋಧಿಸಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಗೋಪಿನಾಥನ್ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ ಆರು ವರ್ಷಗಳ ನಂತರ ಕಣ್ಣನ್ ಗೋಪಿನಾಥನ್...

Read moreDetails

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
Next Post
ನಮ್ಮ ಹಿಂದೂ ರಾಷ್ಟ್ರ ನಿರ್ಮಾಣ ಹೋರಾಟಕ್ಕೆ ಬಿಜೆಪಿ, RSS ಬೆಂಬಲಿಸುತ್ತಿಲ್ಲ: ಪ್ರಮೋದ್ ಮುತಾಲಿಕ್ ಕಿಡಿ

ನಮ್ಮ ಹಿಂದೂ ರಾಷ್ಟ್ರ ನಿರ್ಮಾಣ ಹೋರಾಟಕ್ಕೆ ಬಿಜೆಪಿ, RSS ಬೆಂಬಲಿಸುತ್ತಿಲ್ಲ: ಪ್ರಮೋದ್ ಮುತಾಲಿಕ್ ಕಿಡಿ

Please login to join discussion

Recent News

Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada