ತಮಿಳುನಾಡಿನ ತಿರಪತ್ತೂರು ಜಿಲ್ಲೆಯ ಸರ್ಕಾರಿ ಪಿಯು ಕಾಲೇಜೊಂದರಲ್ಲಿ ಮೂವರು ವಿದ್ಯಾರ್ಥಿಾಗಳು ಶಿಕ್ಷಕರ ಮೇಲೆ ಹಲ್ಲೆ ನಡೆಸಲು ಮುಂದಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.
ತಿರುಪತ್ತೂರು ಜಿಲ್ಲೆಯ ಮಾದನೂರ್ ಎಂಬ ಗ್ರಾಮದ ಸರ್ಕಾರಿ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಸಂಜಯ್ ಗಾಂಧಿ ಎಂಬ ಶಿಕ್ಷಕರೊಬ್ಬರು ಎಂದಿನಂತೆ ಮಕ್ಕಳಿಗೆ ತರಗತಿಯಲ್ಲಿ ಪಾಠ ಮಾಡುತ್ತಿದ್ದರು ಈ ವೇಳೆ ಮಾರಿ ಎಂಬ ವಿದ್ಯಾರ್ಥಿಯೂ ನಿದ್ದೆ ಮಾಡುತ್ತಿರುವುದನ್ನು ಗಮನಿಸಿದ ರಾಜೀವ್ ಅದನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಕುಪಿತಗೊಂಡ ಮಾರಿ ಹಾಗೂ ಆತನ ಇಬ್ಬರು ಸ್ನೇಹಿತರು ತರಗತಿಯಲ್ಲೇ ಶರ್ಟ್ ಬಿಚ್ಚಿ ಶಿಕ್ಷಕನಿಗೆ ಧಮ್ಕಿ ಹಾಕಿದಲ್ಲದೆ ಹಲ್ಲೆಗೂ ಮುಂದಾಗಿದ್ದಾರೆ.
ಘಟನೆ ಬಳಕಿಗೆ ಬರುತ್ತಿದ್ದಂತೆ ಆಂಬೂರು ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಅಸಭ್ಯವಾಗಿ ವರ್ತಿಸಿದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಅಮಾನತು ಮಾಡುವಂತೆ ಪ್ರಾಂಶುಪಾಲರಿಗೆ ಮನವಿ ಮಾಡಿದ್ದಾರೆ. ಅದರಂತೆ ದುವರ್ತನೆ ತೋರಿದ ಮೂವರು ವಿದ್ಯಾರ್ಥಿಗಳನ್ನು ಶಾಶ್ವತವಾಗಿ ಅಮಾನತು ಮಾಡಲಾಗಿದೆ.
![](https://pratidhvani.com/wp-content/uploads/2022/04/251650872675-1-1024x821.jpg)