• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 22, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ: ಸಿಎಂ ಪ್ರಶ್ನೆ. ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ರಾಜ್ಯದ ಜನತೆ ಪ್ರಶ್ನಿಸಬೇಕು: ಸಿಎಂ ಕರೆ.. ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹೆದರಲ್ಲ: ಸೋಲಿಸುತ್ತೇನೆ

ADVERTISEMENT

ವರುಣಾ ಅ 22: ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು BJP-JDS ಷಡ್ಯಂತ್ರಕ್ಕೆ ಹರದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ನಾನು ಕ್ಷೇತ್ರದ ಮತದಾರರಿಗೆ ಅನಂತ ಅನಂತ ಧನ್ಯವಾದ ಅರ್ಪಿಸಿದರು.

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿದಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿ ಹೋದರು ಎಂದರು.

ಬಿಜೆಪಿ: ಸಾಮಾಜಿಕ ನ್ಯಾಯದ, ಬಡವರ ವಿರೋಧಿ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಹೇಳಿ ಅಂದರು.

ಕೇಂದ್ರದಿಂದ ರಾಜ್ಯಕ್ಕೆ ನಿರಂತರ ದ್ರೋಹ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಮೊನ್ನೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಭಯಾನಕ ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ. ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಮಾತನಾಡಬೇಕು ಎಂದು ಕರೆ ನೀಡಿದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು. ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದು ಗುಡುಗಿದರು.

ಲೋಕಸಭಾ ಯೋಜನೆ ಬಳಿಕ ನಮ್ಮ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತವೆ ಎಂದು ದೆಹಲಿಯ ಮೋದಿಯಿಂದ, ಇಲ್ಲಿನ ಆರ್.ಅಶೋಕ್ ವರೆಗೂ ಸುಳ್ಳುಗಳ ಮೇಲೆ ಸುಳ್ಳು ಹೇಳಿದರು. ಇದುವರೆಗೂ ಗ್ಯಾರಂಟಿಗಳು ನಿಂತಿಲ್ಲ. ನಿಲ್ಲುವುದೂ ಇಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ನಿಲ್ಲಲ್ಲ ಎಂದು ಘೋಷಿಸಿದರು.‌

ಸಿದ್ದರಾಮಯ್ಯ ಒಂದೇ ಒಂದು ರೂಪಾಯಿ ಲಂಚ ಪಡೆದ ಉದಾಹರಣೆ ಇದೆಯಾ: ನನ್ನ ಮೇಲಿನ ಸುಳ್ಳು ಆರೋಪ ಸಹಿಸ್ತೀರಾ ಎಂದು ಪ್ರಶ್ನಿಸಿದರು.

ನಾನು ಮಂತ್ರಿಯಾಗಿ 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೀನಿ. ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು. ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು.

ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.

ಬಿಜೆಪಿ-ಜೆಡಿಎಸ್ ನಾಯಕರ ಹೊಟ್ಟೆಕಿಚ್ಚಿನಿಂದ ನನ್ನ ವರ್ಚಸ್ಸು ಕಡಿಮೆ ಆಗಲ್ಲ. ನನ್ನ ವರ್ಚಸ್ಸು ವರುಣಾ ಜನತೆ, ನನ್ನ ವರ್ಚಸ್ಸು ರಾಜ್ಯದ ಜನತೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್,
ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್,
ವಿಧಾನಸಭೆ ಮತ್ತು ವಿಧಾನ‌ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPCongress PartyDK Shiva KumarMysoresiddaramaiahVarunaYatheendraಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಳೆ ಬಗ್ಗೆ ಸರ್ಕಾರ ಹೇಳಿದ್ದೇನು..? ವಿಪಕ್ಷಗಳ ಮಾತೇನು..?

Next Post

ಗಂಡನ ಮೇಲಿನ ಸಿಟ್ಟಿಗೆ ಮೂರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ!

Related Posts

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
0

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ...

Read moreDetails
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

November 2, 2025
ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿಗಳಿಂದ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 2, 2025
Next Post

ಗಂಡನ ಮೇಲಿನ ಸಿಟ್ಟಿಗೆ ಮೂರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ!

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.
Top Story

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

by ಪ್ರತಿಧ್ವನಿ
November 2, 2025
ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ
Top Story

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿ.ಎಂ ಘೋಷಣೆ

by ಪ್ರತಿಧ್ವನಿ
November 2, 2025
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ
Top Story

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನ್ನಡ ರಾಜ್ಯೋತ್ಸವ ಭಾಷಣ

by ಪ್ರತಿಧ್ವನಿ
November 2, 2025
ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!
Top Story

ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವದ ಕಲರವ!

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada