• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೆಟ್ಟ ಆಲೋಚನೆಗಳು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ : ವೀರಪ್ಪ ಮೊಯ್ಲಿ

ಪ್ರತಿಧ್ವನಿ by ಪ್ರತಿಧ್ವನಿ
November 14, 2022
in ಕರ್ನಾಟಕ, ರಾಜಕೀಯ
0
ಕೆಟ್ಟ ಆಲೋಚನೆಗಳು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ : ವೀರಪ್ಪ ಮೊಯ್ಲಿ
Share on WhatsAppShare on FacebookShare on Telegram

ದೇಶದಾದ್ಯಂತ ಪಂಡಿತ್ ನೆಹರೂರವರ ಜನ್ಮದಿನ ಆಚರಿಸಲಾಗುತ್ತಿದ್ದು, ಬಿಜೆಪಿಯವರಿಗೆ ಇದರ ಸುಳಿವೂ ಇಲ್ಲವಾಗಿದೆ. 133 ವರ್ಷಗಳ ಹಿಂದೆ ನೆಹರೂ ಅವರು ಜನಿಸಿ ದೇಶದ ಪ್ರಧಾನಿಯಾಗಿ ಕೆಲಸ ಮಾಡಿದ್ದಾರೆ. ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಸ್ವಾತಂತ್ರ್ಯ ಸಮರಕ್ಕೆ ಧುಮುಕಿ ತಮ್ಮ ಜೀವನವನ್ನೇ ತ್ಯಾಗ ಬಲಿದಾನ ಮಾಡಿದ್ದಾರೆ. ಪಂಡಿತ್ ನೆಹರೂ, ಕಮಲಾ ನೆಹರೂ ಅವರು ಕೂಡ ಸೆರೆ ವಾಸ ಅನುಭವಿಸಿದ್ದರು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ADVERTISEMENT

ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಅವರು ಕೂಡ ಚಿಕ್ಕ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ ಇಂದಿರಾ ಬ್ರಿಗೇಡ್ ಸ್ಥಾಪನೆ ಮಾಡಿ ಸೆರೆವಾಸ ಅನುಭವಿಸಿದ್ದರು. ಈ ಇತಿಹಾಸ ಅಜರಾಮರವಾಗಿ ಉಳಿಯುತ್ತದೆ. ಯಾರೂ ಅಳಿಸಿಹಾಕಲು ಸಾಧ್ಯವಿಲ್ಲ. ನೆಹರೂ ಅವರು ದಾರ್ಶನಿಕರಾಗಿದ್ದು, ಸುಂದರ ಭಾರತ ನಿರ್ಮಾಣದ ಚಿಂತನೆ ಮಾಡಿ ಪಂಚವಾರ್ಷಿಕ ಯೋಜನೆ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಯೋಜನೆ ರೂಪಿಸಿದರು ಎಂದಿದ್ದಾರೆ.

ಕೆಟ್ಟ ಆಲೋಚನೆಗಳನ್ನು ಬೆಳೆಯಲು ಬಿಟ್ಟರೆ ಅದು ಇಡೀ ವ್ಯವಸ್ಥೆಯನ್ನು ನಾಶ ಮಾಡಲಿದೆ ಎಂದು ಹೇಳಿದ್ದರು. ಅದರಂತೆ ಇಂದು ಮೋದಿ ಸರ್ಕಾರ ಇಡೀ ದೇಶವನ್ನೇ ನಾಶ ಮಾಡುತ್ತಿದೆ. ನೆಹರೂ ಅವರು ವೈಜ್ಞಾನಿಕವಾಗಿ ಆಲೋಚನೆ ಮಾಡಬೇಕು ಎಂದು ವಿಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರು. ದೇಶದ ಬಡತನ, ಹಸಿವಿನ ಬಾದೆ ನೀಗಿಸಲು ಇರುವ ಅಸ್ತ್ರ ವಿಜ್ಞಾನ ಎಂದು ಹೇಳಿದ್ದಾರೆ.

ಮೂಡನಂಬಿಕೆ, ಅನಕ್ಷರತೆ, ಬಡತನ ನಿರ್ಮೂಲನೆ ಆಗಬೇಕಾದರೆ ಅದು ವಿಜ್ಞಾನದಿಂದ ಮಾತ್ರ ಸಾಧ್ಯ ಎಂಬ ಸಂದೇಶ ಕೊಟ್ಟರು. ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದಲ್ಲಿ ಅಂದಕಾರ, ಜಾತಿ, ಮತೀಯ ಕಂದಬಾಹುಗಳನ್ನು ಪಸರಿಸಿ ದೇಶ ನಾಶ ಮಾಡುತ್ತಿದ್ದಾರೆ. ಸಂಸ್ಕೃತಿ ಎಂಬುದು ನಮ್ಮ ಆಲೋಚನೆ ಮನೋಭಾವವನ್ನು ವಿಸ್ತಾರಗೊಳಿಸುವುದಾಗಿದೆ ಎಂದು ಹೇಳಿದ್ದರು. ಈಗ ಸಂಸ್ಕೃತಿಯ ಅರ್ಥವನ್ನೇ ಬದಲಿಸಲಾಗುತ್ತಿದೆ.

ರಾಜಕೀಯದ ಜತೆ ಧರ್ಮ ಸೇರಿಸುವುದು ಅಪ್ರಸ್ತುತ. ಆದರೆ ಭಾರತದಲ್ಲಿ ಇಂದು 800 ವರ್ಷಗಳ ಹಿಂದೆ ಹೋಗಿ ಧರ್ಮವೇ ಆಡಳಿತ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ಮತದ ಹೆಸರಲ್ಲಿ ಕೈ ಎತ್ತಿದರೆ ನಾನು ನನ್ನ ಮರಣದ ತನಕ ಹೋರಾಟ ಮಾಡುತ್ತೇನೆ ಎಂದು ಪಣ ತೊಟ್ಟಿದ್ದರು. ಅಜ್ಞಾನ ಪರಿವರ್ತನೆಗೆ ಹೆದರುತ್ತದೆ.

ನಮ್ಮ ದೇಶ ಸ್ವಾತಂತ್ರ್ಯ ಪಡೆದಾಗ ಸಾಕ್ಷರತೆ ಪ್ರಮಾಣ ಶೇ.14ರಷ್ಟಿತ್ತು. ಅದನ್ನು ಈಗ ಶೇ.76ರವರೆಗೆ ತಂದು ನಿಲ್ಲಿಸಲಾಗಿದೆ. ಮತ್ತೆ ದೇಶದ ಜನರನ್ನು ಅಜ್ಞಾನದ ಕೂಪಕ್ಕೆ ತಳ್ಳಿ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಹೀಗೆ ನೆಹರೂ ಅವರ ತತ್ವ ಸಿದ್ಧಾಂತ ಇಂದಿಗೂ ಪ್ರಸ್ತುತವಾಗಿದೆ.

ಈ ದೇಶ ಕಟ್ಟಿ ಸ್ವಾತಂತ್ರ್ಯದ ಜ್ಯೋತಿ ಬೆಳಗಿಸಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋದ ಮಹತ್ಮಾ ಗಾಂಧಿ ಅವರು ಈ ದೇಶವನ್ನು ಮುನ್ನಡೆಸಲು ಏಕೈಕ ನಾಯಕ ನೆಹರೂ ಅವರು. ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಬಂದಾಗ ಇರಲಿಲ್ಲ. ಅವರು ನೆಹರೂ ಅವರಿಗೆ ನಿಕಟ ಸ್ನೇಹಿತರಾಗಿದ್ದರು. ಅದೇ ರೀತಿ ವಲ್ಲಭಾಯಿ ಪಟೇಲರು ಕೂಡ ನೆಹರೂ ಅವರು ಪ್ರಧಾನಿ ಆಗಬೇಕು ಎಂದು ಗಾಂಧಿ ಅವರಿಗೆ ಹೆಸರು ಪ್ರಸ್ತಾಪಿಸಿದರು. ಎಲ್ಲ ಪ್ರಾಂಥೀಯ ರಾಜ್ಯಗಳನ್ನು ಒಂದುಗೂಡಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಾಲಕಿಯ ರೇಪ್‌ & ಮರ್ಡರ್‌ ಪ್ರಕರಣ; ಕರ್ತವ್ಯ ಲೋಪ ಆರೋಪದಲ್ಲಿ ಮ್ಯಾಜಿಸ್ಟ್ರೇಟ್‌ ಬಂಧನ

Next Post

D BOSS | ಎಲ್ಲ ಮುದ್ದು ಮಕ್ಕಳ ಜೊತೆ ಡಿ ಬಾಸ್ | Pratidhvani |

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
D BOSS | ಎಲ್ಲ ಮುದ್ದು ಮಕ್ಕಳ ಜೊತೆ ಡಿ ಬಾಸ್ | Pratidhvani |

D BOSS | ಎಲ್ಲ ಮುದ್ದು ಮಕ್ಕಳ ಜೊತೆ ಡಿ ಬಾಸ್ | Pratidhvani |

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada