• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ

ಪ್ರತಿಧ್ವನಿ by ಪ್ರತಿಧ್ವನಿ
September 1, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು :1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”.ಆ ವರ್ಷ ರಾಷ್ಟ್ರ್ರ ಪ್ರಶಸ್ತಿ ಸ್ಪರ್ಧೆಯಲ್ಲಿದ್ದ ಘಟಾನುಘಟಿ ಚಿತ್ರನಿರ್ದೇಶಕರುಗಳಾದ ಸತ್ಯಜಿತ್ ರೇ, ಮೃಣಾಲ್ ಸೆನ್, ಶ್ಯಾಮ್ ಬೆನೆಗಲ್, ಅಡೂರ್ ಗೋಫಾಲಕೃಷ್ಣನ್, ಅರವಿಂದನ್, ಜಾನ್ ಅಬ್ರಹಾಂ, ಗಿರೀಶ್‌ ಕಾರ್ನಾಡ್ ಅವರ ಚಿತ್ರಗಳ ಜೊತೆ ಸ್ಪರ್ಧಿಸಿ ಸ್ವರ್ಣಪದಕ ಪಡೆದ ಈ ಚಿತ್ರ ಗಿರೀಶ್ ಕಾಸರವಳ್ಳಿಯವರ ಪ್ರಥಮ ಚಿತ್ರವೂ ಹೌದು.ಅವರಿಗೆ ಕೇವಲ 26 ವರ್ಷವಾಗಿದ್ದಾಗ ನಿರ್ದೇಶಿಸಿದ ಈ ಚಿತ್ರವು ಅದರ ವಸ್ತುವಿಗೆ, ದೃಶ್ಯ ಸೌಷ್ಠವಕ್ಕೆ, ಸಿನಿಮಾತ್ಮಕ ಶಕ್ತಿಗಾಗಿ ಸ್ವತಹ, ರೇ, ಸೆನ್, ಅಡೂರ್ ಅವರಿಂದ ಪ್ರಶಂಸಿಸಲ್ಪಟ್ಟಿತ್ತು.

ADVERTISEMENT

ಕೇಂದ್ರ ಸರ್ಕಾರದ ಸಂಸ್ಥೆಯಾದ ಚಲನಚಿತ್ರ ನಿರ್ದೇಶನಾಲಯ 2009ರಲ್ಲಿ ಸಿನಿಮಾದ ಶತಮಾನೋತ್ಸವದ ನೆನಪಿಗಾಗಿ 100 ವರ್ಷದ ಸಿನಿಮಾ ಇತಿಹಾಸದಲ್ಲಿ ತಯಾರಾದ 20 ಭಾರತೀಯ ಶ್ರೇಷ್ಠ ಚಿತ್ರಗಳನ್ನು ಆಯ್ಕೆ ಮಾಡಿತ್ತು. ಅವುಗಳಲ್ಲಿ ಘಟಶ್ರಾದ್ಧವೂ ಒಂದು ಎಂದು ಭಾರತೀಯ ಸಿನಿಮಾ ವಿಮರ್ಶಕರು, ನಿರ್ದೇಶಕರು ಆರಿಸಿದ್ದರು.

ಚಿತ್ರ ನೋಡಿ ಮೆಚ್ಚಿದ್ದ ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕರುಗಳಾದ, ಟ್ಯಾಕ್ಸಿ ಡ್ರೈವರ್, ಡಿಪಾರ್ಟೆಡ್ ಚಿತ್ರ ಖ್ಯಾತಿಯ ಮಾರ್ಟಿನ್ ಸ್ಕಾರ್ಸೆಸ್ಸಿ ಹಾಗೂ ಸ್ಟಾರ್ ವಾರ್ಸ್ ಖ್ಯಾತಿಯ ಜಾರ್ಜ್ ಲ್ಯೂಕಾಸ್ ಈ ಚಿತ್ರದ ಪುನರ್ ರೂಪೀಕರಣಕ್ಕೆ ಮುಂದಾಗಿದ್ದರು. ಸೆಲ್ಯೂಲಾಯ್ದ್ ಮ್ಯಾನ್ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಭಾರತೀಯ ಚಿತ್ರ ನಿರ್ದೇಶಕ ಶಿವೇಂದ್ರ ಸಿಂಗ್ ದುಂಗಾರ್‌ಪುರ್ ಅವರ ಸಿನಿಮಾ ಪೌಂಡೇಶನ್ ಈ ಇಡೀ ಪುನರ್ ನವೀಕರಣದ ರೂವಾರಿಯಾಗಿದ್ದರು.

ಇದೀಗ ಆ ಚಿತ್ರಕ್ಕೆ ಇನ್ನೊಂದು ವಿಶೇಷ ಗರಿ ಸೇರುತ್ತಿದೆ. ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಅಗ್ರಸ್ಥಾನ ಪಡೆದ ವೆನಿಸ್ ಚಿತ್ರೋತ್ಸವದಲ್ಲಿ ಈ ಚಿತ್ರವನ್ನು ವಿಶ್ವ ಸಿನಿಮಾದ ಒಂದು ಕ್ಲಾಸಿಕ್ ಚಿತ್ರ ಎಂದು ಪರಿಗಣಿಸಿ ಪ್ರದರ್ಶಿಸುತ್ತಿದೆ.ಸಾಮಾನ್ಯವಾಗಿ ಚಿತ್ರೋತ್ಸವದಲ್ಲಿ ಒಂದು ಚಿತ್ರಕ್ಕೆ ಎರಡು ಪ್ರದರ್ಶನಗಳಿದ್ದರೆ ಈ ಚಿತ್ರದ ಮೂರು ಪ್ರದರ್ಶನಗಳಿವೆ. ಚಿತ್ರನಿರ್ದೇಶಕರಾದ ಗಿರೀಶ್ ಕಾಸರವಳ್ಳಿಯವರನ್ನು ವಿಶೇಷ ಆಹ್ವಾನ ನೀಡಿ ಕರೆಸಿಕೊಳ್ಳುತ್ತಿದೆ. ಇದು ವೆನಿಸ್ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಕನ್ನಡ ಚಿತ್ರ.

ರಾಷ್ಟ್ರ ಪತಿಗಳ ಸ್ವರ್ಣ ಪದಕವಲ್ಲದೇ ಕರ್ನಾಟಕ ರಾಜ್ಯ ಪ್ರಶಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಈ ಚಿತ್ರದ ನಿರ್ಮಾಪಕರು ಸದಾನಂದ ಸುವರ್ಣರು. ಡಾ. ಯು.ಆರ್.ಅನಂತಮೂರ್ತಿಯವರ ಸಣ್ಣಕತೆ ಆಧರಿಸಿ, ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದವರು ಗಿರೀಶ ಕಾಸರವಳ್ಳಿ. ಎಸ್.ರಾಮಚಂದ್ರರ ಛಾಯಾಗ್ರಹಣ ಇದ್ದ ಈ ಚಿತ್ರದ ಸಂಗೀತ ಬಿ.ವಿ.ಕಾರಂತರದ್ದಾಗಿದ್ದು ಕಲಾನಿರ್ದೇಶನ ಕೆ.ವಿ ಸುಬ್ಬಣ್ಣನವರದಾಗಿತ್ತು. ಎಲ್ಲ ಹೊಸ ಮುಖಗಳೇ ಇದ್ದ ಈ ಚಿತ್ರ 1978 ರಲ್ಲಿ ಬಿಡುಗಡೆಯಾಗಿ ರಾಜ್ಯಾದಂತ ಯಶಸ್ವಿಯಾಗಿ ಪ್ರದರ್ಶನಗೊಂಡಿತ್ತು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'FilmVeteran Director Girish Kasaravalli
Previous Post

ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

Next Post

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ:ಪ್ರಕಾಶ್‌ ಬೆಳವಾಡಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ:ಪ್ರಕಾಶ್‌ ಬೆಳವಾಡಿ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada