• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಪುರದಲ್ಲಿ ಖಾಸಗಿಯವರದ್ದೇ ಕಾರುಬಾರು ; ಸರ್ಕಾರ ವೈಜ್ಞಾನಿಕ ಬೆಲೆ ನೀಡಿ ತೊಗರಿ ಬೆಳೆಗಾರರ ನೆರವಿಗೆ ಬರುತ್ತಾ?

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
January 29, 2022
in ಕರ್ನಾಟಕ
0
ವಿಜಯಪುರದಲ್ಲಿ ಖಾಸಗಿಯವರದ್ದೇ ಕಾರುಬಾರು ; ಸರ್ಕಾರ ವೈಜ್ಞಾನಿಕ ಬೆಲೆ ನೀಡಿ ತೊಗರಿ ಬೆಳೆಗಾರರ ನೆರವಿಗೆ ಬರುತ್ತಾ?
Share on WhatsAppShare on FacebookShare on Telegram

ಸರಕಾರ ರೈತಾಪಿ ವರ್ಗಕ್ಕೆ ಸಹಾಯಕವಾಗಲಿ ಎಂದು ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದ ರೈತರಿಗೆ ಹೆಚ್ಚಿನ ಹಣ ಸಿಗಲಿ ಅನ್ನುವ ಕಾರಣದಿಂದಾ ಪಿ ಕೆ ಪಿ ಎಸ್ ಮೂಲಕ, ಖದೀರಿ ಕೇಂದ್ರದ ಮೂಲಕ ಬೆಳೆಯನ್ನು ಖರೀದಿಸುತ್ತದೆ. ಆದರೆ ಈ ವರ್ಷ ತೊಗರಿ ಬೆಳೆದ ಬೆಳೆಗಾರರಿಗೆ ಸರಕಾರ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರಗಳನ್ನು ಆರಂಭಿಸಿದೆ. ಆದರೆ ಸರ್ಕಾರದ ನಿಯಮಗಳಲ್ಲೆ ಲೋಪದೋಷ ಕಂಡು ಬಂದ ಕಾರಣ ಹಾಗೂ ಖರೀದಿ ಕೇಂದ್ರದ ಸಿಬ್ಬಂದಿಗಳ ವರ್ತನೆ ರೈತನ್ನು ಖರೀದಿ ಕೇಂದ್ರದಿಂದ ದೂರವಿರಿಸಿದೆ. ಇದರ ಪರಿಣಾಮವಾಗಿ ಜಿಲ್ಲೆಯ ತೊಗರಿ ಖರೀದಿ ಕೇಂದ್ರಗಳು ಖಾಲಿ ಖಾಲಿಯಾಗಿದ್ದು, ರೈತರು ಖಾಸಗಿ ವ್ಯಕ್ತಿಗಳ ಮೊರೆ ಹೋಗಿದ್ದಾರೆ.

ADVERTISEMENT

ರಾಜ್ಯದಲ್ಲಿ ಕಲಬುರ್ಗಿ ಜಿಲ್ಲೆ ಬಿಟ್ಟರೆ ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚು ರೈತರು ತೊಗರಿ ಬೆಳೆಯುತ್ತಾರೆ. ಎರಡನೇ ತೊಗರಿ ಕಣಜ ಅಂತ ವಿಜಯಪುರ ಜಿಲ್ಲೆ ಹೆಸರು ವಾಸಿಯಾಗಿದೆ. ಸರ್ಕಾರ ಬೆಂಬಲ ಬೆಲೆಯಲ್ಲಿ ತೊಗರಿ ಕಾಳು ಖರೀದಿ ಕೇಂದ್ರ ತೆರೆದಿದೆ. ಆದ್ರೆ ವಿಜಯಪುರ ಜಿಲ್ಲೆಯಲ್ಲಿ ರೈತರು ಮಾತ್ರ ತೊಗರಿ ಕೇಂದ್ರದತ್ತ ಸುಳಿಯುತ್ತಿಲ್ಲ. ಇದಕ್ಕೆ ಕಾರಣ ಸರ್ಕಾರ ಘೋಷಿಸಿರೋ ಬೆಂಬಲ ಬೆಲೆ ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಒಂದೇ ಆಗಿದೆ ಅನ್ನೋದು. ಸರ್ಕಾರ ಪ್ರತಿ ಕ್ವಿಂಟಾಲ್ ತೊಗರಿಗೆ 6300 ಬೆಂಬಲ ಬೆಲೆ ನಿಗದಿ ಮಾಡಿದೆ. ಮುಕ್ತ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರು ಪ್ರತಿ ಕ್ವಿಂಟಾಲ್ ತೊಗರಿಗೆ 6200 ಗೆ ಖರೀದಿ ಮಾಡುತ್ತಿದ್ದಾರೆ, ಹೀಗಾಗಿ ರೈತರು ಸರ್ಕಾರ ತೆರೆದಿರೋ ತೊಗರಿ ಕಾಳು ಖರೀದಿ ಕೇಂದ್ರದತ್ತ ಬರ್ತಿಲ್ಲ.

ವಿಜಯಪುರ ಜಿಲ್ಲೆಯಲ್ಲಿ 4.76ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿತ್ತು, ಅಂದಾಜು 30 ಲಕ್ಷ ಕ್ವಿಂಟಾಲ್ ತೊಗರಿ ಬೆಳೆ ನಿರೀಕ್ಷೆಯಿದೆ. ಜಿಲ್ಲೆಯಲ್ಲಿ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಜಿಲ್ಲಾಡಳಿತ 145 ತೊಗರಿ ಕಾಳು ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ರೆ. ಅದರಲ್ಲಿ 127 ಕೇಂದ್ರದಲ್ಲಿ 27444 ರೈತರು ನೊಂದಣಿ ಮಾಡಿಸಿದ್ದಾರೆ. ಮೂರು ವರ್ಷಗಳಿಂದ ರಾಜ್ಯ ಸರ್ಕಾರ ತೊಗರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಘೋಷಿಸಿರೋ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲಾಗ್ತಿದೆ. ರಾಜ್ಯ ಸರ್ಕಾರ ತೊಗರಿಗೆ ಪ್ರತಿ ಕ್ವಿಂಟಾಲ್ ಗೆ ಐದುನೂರು ಸಹಾಯಧನದ ಜೊತೆಗೆ 8 ಸಾವಿರ ಬೆಂಬಲ ಬೆಲೆ ನೀಡಲಿ ಅಂತಿದ್ದಾರೆ ರೈತ ಮುಖಂಡರು.

ವಿಜಯಪುರದಲ್ಲಿ ಸದ್ಯ 18 ತೊಗರಿ ಖರೀದಿ ಕೇಂದ್ರದಲ್ಲಿ ಈವರೆಗೆ ಕೇವಲ 540 ರೈತರು 6933 ಕ್ವಿಂಟಾಲ್ ತೊಗರಿ ಮಾರಾಟ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ಕ್ವಿಂಟಾಲ್ ಗೆ 6100 ರಂತೆ 2019-2020 ರಲ್ಲಿ 8 ಲಕ್ಷ 16 ಸಾವಿರ ಕ್ವಿಂಟಾಲ್ ತೊಗರಿಯನ್ನು ಖರೀದಿಸಿದ್ರೆ, 2020-21 ರಲ್ಲಿ 58 ಸಾವಿರ ಕ್ವಿಂಟಾಲ್ ತೊಗರಿ ಖರೀದಿಸಲಾಗಿದೆ. ಅಂದ್ರೆ ವರ್ಷದಿಂದ ವರ್ಷಕ್ಕೆ ರೈತರು ಸರ್ಕಾರ ತೆರೆದಿರೋ ತೊಗರಿ ಖರೀದಿ ಕೇಂದ್ರಕ್ಕೆ ಮಾರಾಟ ಮಾಡೋ ಪ್ರಮಾಣ ಇಳಿಕೆಯಾಗ್ತಿದೆ. ನಾಮಕಾವಸ್ತೆ ತೊಗರಿ ಖರೀದಿ ಕೇಂದ್ರ ತೆರೆಲಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಸರ್ಕಾರ ಬೆಂಬಲ ಬೆಲೆ ನೀಡಿ ತೊಗರಿ ಖರೀದಿ ಕೇಂದ್ರಕ್ಕೆ ಬೆಲೆ ನಿಗದಿ ಮಾಡಿದರೆ ಅಷ್ಟೇ ಪ್ರಮಾಣದಲ್ಲಿ ಹಣ ನೀಡಿ ಖಾಸಗಿ ಅವರು ಖರೀದಿ ಮಾಡುತ್ತಿರುವ ಹಿನ್ನಲೆ ರೈತರು ತೊಗರಿ ಖರೀದಿ ಕೇಂದ್ರದತ್ತ ಸುಳಿಯುತ್ತಿಲ್ಲ, ಸರ್ಕಾರ ವೈಜ್ಞಾನಿಕ ಬೆಲೆ ನೀಡಿ ತೊಗರಿ ಬೆಳೆಗಾರರ ನೆರವಿಗೆ ಬರಬೇಕಿದೆ.

Tags: ಖಾಸಗಿ ಲಾಭಿತೊಗರಿ ಬೆಳೆಗಾರವಿಜಯಪುರವೈಜ್ಞಾನಿಕ ಬೆಲೆ
Previous Post

PRESS | ಅಂಕಣ ಬರೆಹ | ʼತುಂಗಾ ಉಳಿಸಿ’ ಅಭಿಯಾನ : ಇನ್ನಷ್ಟು ಧೈರ್ಯ ಕಾಣಿಸಬೇಕಿದೆ ಶಿವಮೊಗ್ಗದ ‘ವಿಜಯ ಕರ್ನಾಟಕ’

Next Post

ಪೇಗಾಸಸ್ ಬೇಹುಗಾರಿಕೆ ಬಳಸಿ ದೇಶವನ್ನೇ ‘ಬಿಗ್ ಬಾಸ್ ಶೋ’ ಮಾಡಿದರೆ ಮೋದಿ?

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಪೇಗಾಸಸ್ ಬೇಹುಗಾರಿಕೆ ಬಳಸಿ ದೇಶವನ್ನೇ ‘ಬಿಗ್ ಬಾಸ್ ಶೋ’ ಮಾಡಿದರೆ ಮೋದಿ?

ಪೇಗಾಸಸ್ ಬೇಹುಗಾರಿಕೆ ಬಳಸಿ ದೇಶವನ್ನೇ ‘ಬಿಗ್ ಬಾಸ್ ಶೋ’ ಮಾಡಿದರೆ ಮೋದಿ?

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada