• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಮಹತ್ವದ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 18, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ. ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎಂದು ನಾವು ಅರಿತುಕೊಳ್ಳಬೇಕು: ಸಿ.ಎಂ ಕರೆ

ADVERTISEMENT

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು.

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

Tags: CM SiddaramaiahDCM DK Shivakumardk shivakumar & siddaramaiahDr B R AmbedkarIASIPSKarnatakaMadiwala CommunityMadiwala MachidevarusiddaramaiahStudentsVidyasiri Scheme
Previous Post

ಜಾತಿ ಜನಗಣತಿ ಸಂಘರ್ಷ.. ಮುನಿಯಪ್ಪ ಮನೆಯಲ್ಲಿ ಬ್ರೇಕ್​ ಫಾಸ್ಟ್​ ಮೀಟಿಂಗ್​​

Next Post

ಜನಿವಾರ ಗಲಾಟೆ.. ಬ್ರಾಹ್ಮಣರ ಆಕ್ರೋಶ.. ಪ್ರತಿಭಟನೆ.. ಅಧಿಕಾರಿ ಸಸ್ಪೆಂಡ್​..

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
Next Post
ಜನಿವಾರ ಗಲಾಟೆ.. ಬ್ರಾಹ್ಮಣರ ಆಕ್ರೋಶ.. ಪ್ರತಿಭಟನೆ.. ಅಧಿಕಾರಿ ಸಸ್ಪೆಂಡ್​..

ಜನಿವಾರ ಗಲಾಟೆ.. ಬ್ರಾಹ್ಮಣರ ಆಕ್ರೋಶ.. ಪ್ರತಿಭಟನೆ.. ಅಧಿಕಾರಿ ಸಸ್ಪೆಂಡ್​..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada