• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಡಿ ಭಾಗದ ಸರ್ಕಾರಿ ಶಾಲೆಗೆ ಹೊಸ ಕಳೆ ಕೊಟ್ಟ ಶಿಕ್ಷಕ : ಕಲಿಕಾ ವಾತಾವರಣ ನಿರ್ಮಾಣ

ರಾಕೇಶ್ ಬಿಜಾಪುರ್ by ರಾಕೇಶ್ ಬಿಜಾಪುರ್
December 28, 2021
in ಕರ್ನಾಟಕ
0
ಗಡಿ ಭಾಗದ ಸರ್ಕಾರಿ ಶಾಲೆಗೆ ಹೊಸ ಕಳೆ ಕೊಟ್ಟ ಶಿಕ್ಷಕ : ಕಲಿಕಾ ವಾತಾವರಣ ನಿರ್ಮಾಣ
Share on WhatsAppShare on FacebookShare on Telegram
ADVERTISEMENT

ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿ ವಿಜಯಪುರ ಹಿಂದಿನಿಂದಲೂ ಗುರುತಿಸಿಕೊಂಡಿದೆ. ಅದರಲ್ಲೂ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಳ ತೀರದು. ಈ ಭಾಗದಲ್ಲಿ ಜನರು ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಕ್ಕೆ ಹೆಚ್ಚಾಗಿ ಗುಳೆ ಹೋಗುವುದರಿಂದ ಇಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಜೊತೆಗೆ ಇಲ್ಲಿರುವ ಮಕ್ಕಳು ಸಹ ಸರಿಯಾಗಿ ಶಾಲೆಗೆ ಬರುವುದಿಲ್ಲ. ಇದನ್ನೆಲ್ಲ ಅರಿತ ಶಿಕ್ಷರೊಬ್ಬರು ಈ ಸಮಸ್ಯೆಗಳನ್ನು ದೂರ ಮಾಡಲು ಪಣತೊಟ್ಟು ನಿಂತಿದ್ದಾರೆ.

ಹೌದು, ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಶಾಲೆಯ ಕಡೆ ಮುಖಮಾಡಿಸಲು ವಿಶಿಷ್ಟ ಕಾರ್ಯಯೋಜನೆ ಹಾಕಿಕೊಂಡು ಈಗ ಮಾದರಿ ಶಿಕ್ಷಕರಾಗಿ ಹೊರಹೊಮ್ಮಿದ್ದಾರೆ.

ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಮಹಾರಾಷ್ಟ್ರ ರಾಜ್ಯದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಘೋಣಸಗಿ ಎಲ್.ಟಿ.1 ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಪರಮೇಶ್ವರ ಎಸ್ ಗದ್ಯಾಳ ಈ ವಿಶಿಷ್ಟವಾದ ಕೆಲಸ ಮಾಡಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ.

ಶಾಲೆಗೆ ಹೊಸ ಭೌತಿಕ ರೂಪ

ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಮಾಡಲು ಶಿಕ್ಷಕರೊಬ್ಬರು ತಾವು ಕರ್ತವ್ಯ ನಿರ್ವಹಿಸುವ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪಣ ತೊಟ್ಟು ಶಾಲೆ ಅಂದವಾಗಿಸಲು 1 ಲಕ್ಷ ಖರ್ಚು ಮಾಡಿ ಶಾಲಾ ವಾತಾವರಣವನ್ನು ಅಂದವಾಗಿಸಿದ್ದಾರೆ.

ಭಾಷಾ ಸಮಸ್ಯೆಯಿಂದ ಕೂಡಿದ ಲಂಬಾಣಿ ತಾಂಡಾ ಜನವಸತಿ ಪ್ರದೇಶವಾಗಿರುವ ಘೋಣಸಗಿ ತಾಂಡಾದ ಶಾಲೆಯ ವಿದ್ಯಾರ್ಥಿಗಳು ಇದೀಗ ಖುಷಿಯಾಗಿದ್ದಾರೆ. ಮಕ್ಕಳಿಗೆ ನೈಜ ಕಲಿಕೆಗೆ ಒತ್ತು ಕೊಡುವ ಉದ್ದೇಶದಿಂದ ಶಿಕ್ಷಕ ಪರಮೇಶ್ವರ ಗದ್ಯಾಳ್, ಉತ್ತಮ ಗುಣಮಟ್ಟದ ಪೇಂಟ್ ಬಳಕೆ ಮಾಡಿ ವರ್ಗ ಕೋಣೆಗಳನ್ನು ಗೋಡೆ ಬರಹ ಮತ್ತು ಚಿತ್ತಾರಗಳಿಂದ ಆಕರ್ಷಣಿಯ ಮಾಡಿದ್ದಾರೆ. ಕೋಣೆಯಲ್ಲಿ ಪ್ರತಿಯೊಂದು ಗೋಡೆಯ ಮೇಲೆ ಒಂದೊಂದು ವಿಷಯದ ಕಲಿಕಾ ಬರವಣಿಗೆ ಮತ್ತು ಚಿತ್ರಗಳನ್ನು ಮೂಡಿಸಿದ್ದಾರೆ.

ಮೂಲಾಕ್ಷರಗಳು, ಗುಣಿತಾಕ್ಷರಗಳು, ಪ್ರಾಣಿಗಳು, ಪಕ್ಷಿಗಳು, ಹೂವಿನ ವಿಧಗಳು, ಪರಿಸರ ಕಲ್ಪನೆ, ಹಬ್ಬಗಳು, ಇಂಗ್ಲೀಷ ಅಕ್ಷರಗಳ ಪರಿಚಯ, ಕುಟುಂಬ ಕಲ್ಪನೆ, ಅಂಕಿಗಳ, ಮೂಲಕ್ರೀಯೆಗಳ ಕಲ್ಪನೆ, ತೂಕ, ಹಣ, ನೋಟು, ನೀರಿನ ಮೂಲಗಳು, ಶರೀರದ ಭಾಗಗಳು, ಸಸ್ಯಗಳ ಮಾಹಿತಿ, ಪೋಷಕಾಂಶಗಳು, ವ್ಯಾಕರಣ, ಸೌರವ್ಯೂಹ, ಚಂದ್ರಗ್ರಹಣ, ಸೂರ್ಯಗ್ರಹಣ, ಧಾನ್ಯಗಳ, ಸಸ್ಯಗಳ ಮಾಹಿತಿ ಹಾಗೂ ಹೊರಗಡೆ ತಾಲ್ಲೂಕ, ಜಿಲ್ಲೆ, ರಾಜ್ಯ, ರಾಷ್ಟ್ರ ನಕ್ಷೆ ಇತರೆ ಎಲ್ಲ ಮಾಹಿತಿಗಳನ್ನು ಮಗುವಿನ ಕಲಿಕೆಗೆ ನೈಜವಾಗಿ ಕಲ್ಪಿಸುವಂತೆ ಕಲಿಕಾ ವಾತಾವರಣ ನಿರ್ಮಾಣ ಮಾಡಿದ್ದಾರೆ.

ಕಂಪ್ಯೂಟರ್ ಕಲಿಕೆಗೆ ಒತ್ತು ನೀಡುವುದಕ್ಕಾಗಿ ವಿದ್ಯುತ್ ಸೌಲಭ್ಯ, ಶಾಲಾ ಮೇಲ್ಛಾವಣಿಯ ರಿಪೇರಿ, ಶೌಚಾಲಯ, ಅಡುಗೆ ಕೋಣೆಯ ರಿಪೇರಿ ಶಾಲೆಯ ಭೌತಿಕ ಸೌಲಭ್ಯಗಳ ಎಲ್ಲ ಸಣ್ಣ ಪುಟ್ಟ ರಿಪೇರಿ ಮಾಡಿಸಿ ಶಾಲೆಗೆ ಒಂದು ರೂಪ ಕೊಟ್ಟಿದ್ದಾರೆ.

ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದರಿಂದ ಮಕ್ಕಳ ಕಲಿಕೆ ಹಿಂದುಳಿದಿದೆ. ಗಡಿ ಭಾಗ, ಹಿಂದುಳಿದ ಪ್ರದೇಶ, ಬಡತನ ಕುಟುಂಬದಲ್ಲಿರುವ ಮಕ್ಕಳ ಕಲಿಕೆಗೆ ಅನೂಕೂಲವಾಗಲಿ ಅಂತಾ ಲಾಕಡೌನ ಸಮಯದಲ್ಲಿ ಕೆಲಸ ಆರಂಭಿಸಿ ಈಗ ಶಾಲೆಯಲ್ಲಿ ಕಲಿಕಾ ವಾತಾವರಣ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಪ್ರೇರಣೆ

2019 ರಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡದ ಅಂದಿನ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಈ ಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರು ಕಾಳಜಿ ತೋರಬೇಕು ಎಂದು ಸಲಹೆ ನೀಡಿದ್ದರು. ಅವರಿಂದ ಪ್ರಭಾವಿತರಾಗಿ ಶಾಲೆಗೆ ಏನಾದರೂ ಹೊಸದೊಂದು ಕಾರ್ಯ ಮಾಡಬೇಕು ಎಂಬ ಹಂಬಲದಿಂದ ಮಕ್ಕಳ ಕಲಿಕೆಗೆ ಅನೂಕೂಲವಾಗಿಸಲು ಪ್ರಯತ್ನಿಸಿದ್ದೇನೆ ಎನ್ನುತ್ತಾರೆ ಶಿಕ್ಷಕ ಪರಮೇಶ್ವರ ಗದ್ಯಾಳ.

ಗಡಿ ಭಾಗದ ಸರ್ಕಾರಿ ಶಾಲೆಗೆ ಹೊಸ ಕಳೆ ಕೊಟ್ಟ ಶಿಕ್ಷಕ : ಕಲಿಕಾ ವಾತಾವರಣ ನಿರ್ಮಾಣ / Teacher Parameshwara S Gadyal
Tags: ಅಭಿವೃದ್ಧಿಎಲ್.ಟಿ.1 ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಕಲಿಕಾ ವಾತಾವರಣತಿಕೋಟಾಭಾಷಾ ಸಮಸ್ಯೆಮಹಾರಾಷ್ಟ್ರಲಂಬಾಣಿ ತಾಂಡಾವಿಜಯಪುರವಿದ್ಯಾರ್ಥಿಗಳುಶಿಕ್ಷಕಶಿಕ್ಷಕ ಪರಮೇಶ್ವರ ಗದ್ಯಾಳ್ಸರ್ಕಾರಿ ಶಾಲೆಸಿದ್ದಲಿಂಗಯ್ಯ ಹಿರೇಮಠಹಿಂದುಳಿದ ಜಿಲ್ಲೆ
Previous Post

ಮೋದಿ ಸರ್ಕಾರವು ದೇಶದ ‘ಗರಿಷ್ಠ ಆಸ್ತಿ’ಯನ್ನು ‘ಮಾರಾಟ’ಕ್ಕೆ ಇಟ್ಟ ವರ್ಷ 2021

Next Post

ವಚನಗಳ ನಾಮಾಂಕಿತ ಗೊಂದಲಕ್ಕೆ ತೆರೆ ಎಳೆದ ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ: ಏನಿದು ವಿವಾದ?

Related Posts

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌
Top Story

ಕಾವೇರಿ ನೀರು ಹಂಚಿಕೆ ವಿವಾದ: ರೈತರ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್‌

by ಪ್ರತಿಧ್ವನಿ
July 30, 2026
0

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಸ್ಯಾಂಡಲ್‌ವುಡ್ ಕಲಾವಿದರು ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ...

Read moreDetails
ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

ಕಾವು ಹೆಚ್ಚಿಸಿದ ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ

July 30, 2026
BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

July 30, 2026
ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

July 30, 2026
Bengaluru: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲುತ್ತಿದ್ದ ಪಂಚರ್ ಅಂಗಡಿ ಮಾಲೀಕರ ಬಂಧನ

Bengaluru: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲುತ್ತಿದ್ದ ಪಂಚರ್ ಅಂಗಡಿ ಮಾಲೀಕರ ಬಂಧನ

July 30, 2026
Next Post
ವಚನಗಳ ನಾಮಾಂಕಿತ ಗೊಂದಲಕ್ಕೆ ತೆರೆ ಎಳೆದ ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ: ಏನಿದು ವಿವಾದ?

ವಚನಗಳ ನಾಮಾಂಕಿತ ಗೊಂದಲಕ್ಕೆ ತೆರೆ ಎಳೆದ ಬಸವ ಧಮ೯ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ: ಏನಿದು ವಿವಾದ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada