ಅರಣ್ಯ ಪ್ರದೇಶದಲ್ಲಿ ಮರ ಕಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸಂಸದ ಪ್ರತಾಪ್ ಸಿಂಹ (MP Pratap Simha) ಸೋದರ ವಿಕ್ರಮ್ ಸಿಂಹ (Vikram Simha) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಆರೋಗ್ಯ ತಪಾಸಣೆಗಾಗಿ (Medical Checkup) ಹಾಸನದ ಹಿಮ್ಸ್ ಆಸ್ಪತ್ರೆಗೆ ವಿಕ್ರಮ್ ಸಿಂಹರನ್ನ ಕರೆದುಕೊಂಡು ಬರಲಾಗಿತ್ತು. ಆಸ್ಪತ್ರೆಗೆ ಒಳಗೆ ಹೋಗುತ್ತಿರುವ ಸಂದರ್ಭದಲ್ಲಿ ತುಂಬಾ ವಿಷಯಗಿಳಿವೆ ಕಾಲ ಬರಲಿ ಎಲ್ಲಾ ಹೇಳ್ತೇನೆ.

ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನೋದನ್ನ ಬಹಿರಂಗವಾಗಿಯೇ ಹೇಳ್ತೀನಿ ಎಂದು ಆಕ್ರೋಶ ಹೊರ ಹಾಕಿದರು. ಯಾರನ್ನ ನೀವು ನಿಷ್ಟಾವಂತ ಅಧಿಕಾರಿ ಎನ್ನುತ್ತಿದ್ದೀರಿ. ಅವರ ನಿಷ್ಟೆ ಯಾರಿಗೆ ಅನ್ನೋದನ್ನೂ ಹೇಳುತ್ತೇನೆ ಎಂದು ಪರೋಕ್ಷವಾಗಿ ಬೇಲೂರು ತಹಶೀಲ್ದಾರ್ ಮಮತಾ ವಿರೋಧ ವ್ಯಕ್ತಪಡಿಸಿದ್ದಾರೆ.






