• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜುಲೈ 1ರಿಂದ ಗ್ರಾಮ ಪಂಚಾಯತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಭಿಮತ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ 30 ದಿನಗಳ ಒಳಗೆ ಜನನ-ಮರಣ ಘಟನೆಗಳನ್ನು ನೋಂದಾಯಿಸುವ ಸಲುವಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ(Deputy Registrar of Births and Deaths) ನೇಮಕ ಮಾಡಲಾಗಿದ್ದು ಜುಲೈ 1 (July 1)ರಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ(Rural Development and Panchayat Raj and Information Technology Minister Priyank Kharge) ತಿಳಿಸಿದ್ದಾರೆ.

ಪೂರ್ವಭಾವಿಯಾಗಿ ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು, 21 ದಿನಗಳ ತರುವಾಯ ಮತ್ತು 30 ದಿನಗಳ ಒಳಗಿನ ಘಟನೆಗಳನ್ನು ನಿಯಮಗಳಂತೆ 2ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು, 30 ದಿನಗಳ ತರುವಾಯ ಒಂದು ವರ್ಷದೊಳಗೆ ವರದಿಯಾಗುವ ಜನನ, ಮರಣಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. ಒಂದು ವರ್ಷ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ (Presidency Magistrate) ಅವರ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಾವಣೆ ಮಾಡಲಾಗುವುದು ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ADVERTISEMENT


ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ(Bapuji Seva Kendra) ಈಗ 72 ಸೇವೆಗಳು ಲಭ್ಯವಿದ್ದು, ಜನನ, ಮರಣ (Birth & Death) ನೋಂದಣಿ 73ನೆ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಇದೂ ಸೇರಿ ಒಟ್ಟು 9 ಸೇವೆಗಳನ್ನು ಜನನ, ಮರಣ ನೋಂದಣಿಗೆ ಸೇರಿದಂತೆ ಒದಗಿಸಲಾಗುತ್ತಿದೆ. ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ.


ಜನನ, ಮರಣ ನೋಂದಣಿ ಸಂಬಂಧದಲ್ಲಿ ಸಂದೇಹ/ಸ್ಪಷ್ಟೀಕರಣ ಅವಶ್ಯಕತೆಯಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್‌ crbdkar@gmail.com/ejanmahelpdesk@gmail.com ಮತ್ತು ಇ-ಜನ್ಮ ಸಹಾಯವಾಣಿ 1800-425-6578 ಸಂಖ್ಯೆಗೆ ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.

Tags: BJPCongress PartyPriyanka Khargeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೋಡ್ ರೇಜ್ ಮಾಡುವವರಿಗೆ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸರು..!!

Next Post

ಸಾಹುಕಾರನ್ನ ಮತ್ತೆ ಕೆಣಕಿದ ಲಕ್ಷ್ಮಿ..!

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post

ಸಾಹುಕಾರನ್ನ ಮತ್ತೆ ಕೆಣಕಿದ ಲಕ್ಷ್ಮಿ..!

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada