• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೈಕೋರ್ಟ್‌ನಲ್ಲಿ ಭವಿಷ್ಯ ಪಣಕ್ಕಿಟ್ಟ ಮಾಜಿ ಸಚಿವ ವಿನಯ್‌ ಕುಲಕರ್ಣಿ..!

ಪ್ರತಿಧ್ವನಿ by ಪ್ರತಿಧ್ವನಿ
April 21, 2023
in Top Story, ಕರ್ನಾಟಕ, ರಾಜಕೀಯ
0
ಹೈಕೋರ್ಟ್‌ನಲ್ಲಿ ಭವಿಷ್ಯ ಪಣಕ್ಕಿಟ್ಟ ಮಾಜಿ ಸಚಿವ ವಿನಯ್‌ ಕುಲಕರ್ಣಿ..!
Share on WhatsAppShare on FacebookShare on Telegram

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತ ಯೋಗೀಶ್‌ ಗೌಡ ಕೊಲೆ ಪ್ರಕರಣದ ಆರೋಪಿ ಆಗಿರುವ ಮಾಜಿ ಸಚಿವ ವಿನಯ್‌ ಕುಲಕರ್ಣಿ ಮತ್ತೊಮ್ಮೆ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಅರ್ಜಿ ವಜಾ ಮಾಡಿದ ಬೆನ್ನಲ್ಲೇ ಹೈಕೋರ್ಟ್‌ ಮೆಟ್ಟಿಲೇರಿರುವ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಲಕರ್ಣಿ, ಧಾರವಾಡ ಜಿಲ್ಲೆಗೆ ಪ್ರವೇಶ ನೀಡುವಂತೆ ಕೋಟಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿ, ಎಲ್ಲಿಯೂ ಜಾಮೀನು ಸಿಗದಿದ್ದಾಗ ಅಂತಿಮವಾಗಿ ಸರ್ವೋಚ್ಛ ನ್ಯಾಯಾಲಯದ ಬಾಗಿಲು ಬಡಿದು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಅಂತಿಮವಾಗಿ ಜಾಮೀನು ಕೂಡ ಸಿಕ್ಕಿತ್ತು. ಆದರೆ ಧಾರವಾಡ ಜಿಲ್ಲೆಗೆ ಪ್ರವೇಶವನ್ನು ನಿರಾಕರಿಸಿತ್ತು ಸುಪ್ರೀಂ ಕೋರ್ಟ್‌. ಇದೀಗ ಚುನಾವಣೆಗೆ ಸ್ಪರ್ಧೆ ಮಾಡಿರುವ ಕಾರಣಕ್ಕೆ ಕೆಲವು ದಿನಗಳ ಕಾಲ ಧಾರವಾಡ ಕ್ಷೇತ್ರದಲ್ಲಿ ಇರುವುದಕ್ಕೆ ಅವಕಾಶ ಕೋರಿದ್ದಾರೆ.

ADVERTISEMENT

ಬಂಡಾಯದ ಅಖಾಡದಲ್ಲಿ ವಿನಯ್‌ಗೆ ಗೆಲ್ಲುವ ಅವಕಾಶ..!

ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಈಗಾಗಲೇ ಪತ್ನಿ ಮೂಲಕ ನಾಮಪತ್ರ ಸಲ್ಲಿಕೆ ಮಾಡಿರುವ ಮಾಜಿ ಸಚಿವರು ಗೆದ್ದು ಬೀಗುವ ವಿಶ್ವಾಸದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಅಮೃತ ದೇಸಾಯಿ ವಿರುದ್ಧ 21 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದ ವಿನಯ್‌ ಕುಲಕರ್ಣಿ, ಈ ಬಾರಿ ಬಿಜೆಪಿ ಬಂಡಾಯದಿಂದಲೇ ಗೆಲ್ಲುವ ಸಾಧ್ಯತೆ ನಿಚ್ಚಳವಾಗ್ತಿದೆ. ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ತವನಪ್ಪ ಅಷ್ಟಗಿ ಹಾಗು ಬಸವರಾಜ ಕೊರವರ ಇಬ್ಬರು ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದು, ವಿನಯ್‌ ಕುಲಕರ್ಣಿ ಗೆಲುವಿನ ಹಾದಿ ಸುಗಮ ಆದಂತಿದೆ. ಆದರೂ ಕ್ಷೇತ್ರದಲ್ಲಿ ಪ್ರಚಾರ ಮಾಡಿದಾಗ ಗೆಲುವು ಇನ್ನೂ ಸರಳ ಆಗುವ ನಿರೀಕ್ಷೆಯಿಂದ ಹೈಕೋರ್ಟ್‌ನಿಂದ ವಿನಾಯ್ತಿ ಕೇಳಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಅರ್ಜಿ ತಿರಸ್ಕಾರ ಮಾಡಿದ ಬಳಿಕ ಹೈಕೋರ್ಟ್‌ ಮೊರೆ ಹೋಗಲಾಗಿದೆ. ಇದೀಗ ಹೈಕೋರ್ಟ್​ ಸಿಬಿಐಗೆ ನೋಟಿಸ್​ ನೀಡಿದ್ದು, ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ ಕೆಂಡದಂತಹ ಕೋಪ..!

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ನಾನು ಭಾಗಿ ಇಲ್ಲದೇ ಇದ್ದರೂ ಉದ್ದೇಶಪೂರ್ವಕವಾಗಿ ನನ್ನನ್ನು ಸಿಲುಕಿಸಲಾಯ್ತು ಅನ್ನೋದು ವಿನಯ್‌ ಕುಲಕರ್ಣಿ ಕೋಪಕ್ಕೆ ಕಾರಣ. ಅದರಲ್ಲೂ ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾಗಿದ್ದ ವೇಳೆ ರಾಜಕೀಯ ಕಾರಣಕ್ಕಾಗಿ ನನ್ನನ್ನು ಸಿಲುಕಿಸಿ, ಬಿಜೆಪಿಗೆ ಲಾಭ ಆಗುವಂತೆ ಮಾಡಿದರು. ಪಂಚಮಸಾಲಿ ಸಮುದಾಯಕ್ಕೆ ಸೇರಿದ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿದವರಿಗೆ ನನ್ನ ಕ್ಷೇತ್ರದ ಜನರು ಹಾಗು ರಾಜ್ಯದ ಇತರೆ ಕಡೆ ವಾಸ ಮಾಡ್ತಿರೋ ಪಂಚಮಸಾಲಿ ಸಮುದಾಯ ಉತ್ತರ ಕೊಡಲಿದೆ ಎನ್ನುವ ವಿಶ್ವಾಸದಲ್ಲಿ ವಿನಯ್‌ ಕುಲಕರ್ಣಿ ಇದ್ದಾರೆ. ಇದೀಗ ಹೈಕೋರ್ಟ್‌ನಲ್ಲಿ 30 ದಿನಗಳ ವಿನಾಯ್ತಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದು, ಕೋರ್ಟ್‌ ಅವಕಾಶ ಕೊಟ್ಟರೆ ಧಾರವಾಡ ಗ್ರಾಮೀಣ ಕ್ಷೇತ್ರ ಅಷ್ಟೇ ಅಲ್ಲದೆ ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್​ ಕೈ ಮೇಲಾಗುವಂತೆ ಮಾಡುವ ಚಿಂತನೆಯಲ್ಲಿದ್ದಾರೆ.

ನಾನು ವಿನಯ್‌ ಕುಲಕರ್ಣಿ ಅಭಿಯಾನ ಶುರು..!

ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕೋರ್ಟ್​ ಅನುಮತಿ ನೀಡದಿದ್ದರೆ ಪ್ರತಿಯೊಂದು ಗ್ರಾಮದಲ್ಲೂ ವಿನಯ್​ ಕುಲಕರ್ಣಿ ಹೆಸರಲ್ಲಿ ಅಭಿಯಾನ ಮಾಡಲು ನಿರ್ಧಾರ ಮಾಡಿದ್ದಾರೆ. ದಾವಣಗೆರೆ, ಹಾವೇರಿ ಸೇರಿದಂತೆ ಧಾರವಾಡ ಜಿಲ್ಲೆ ಗಡಿಭಾಗದಲ್ಲಿ ವಿನಯ್​ ಕುಲಕರ್ಣಿ ಪ್ರಚಾರ ಮಾಡಲು ತಯಾರಿ ಮಾಡಿದ್ದಾರೆ. ಡಿಜಿಟಲ್​ ಮೂಲಕ ಪ್ರತಿಯೊಂದು ಗ್ರಾಮದಲ್ಲೂ ವಿನಯ್​ ಕುಲಕರ್ಣಿ ಭಾಷಣೆ ಆಲಿಸುವಂತೆ ಮಾಡುವ ತಯಾರಿಗಳೂ ನಡೆದಿವೆ. ಹೈಕೋರ್ಟ್​ನಲ್ಲಿ ವಿಚಾರಣೆ ನಡೆದು ವಿನಯ್​​ ಕುಲಕಕರ್ಣಿಗೆ ಅವಕಾಶ ಕೊಟ್ಟರೆ ಎಲ್ಲವೂ ಸುಗಮ. ಒಂದು ವೇಳೆ ಅವಕಾಶ ಕೊಡದಿದ್ದರೆ ಮತ್ತೊಂದು ರೀತಿಯಲ್ಲಿ ಚುನಾವಣೆ ಮಾಡಲು ವಿನಯ್​ ಕುಲಕರ್ಣಿ ಕೂಡ ಮಾನಸಿಕವಾಗಿ ಸಜ್ಜಾಗಿದ್ದಾರೆ. ಎಲ್ಲವೂ ಧಾರವಾಡ ಗ್ರಾಮೀಣ ಕ್ಷೇತ್ರದ ಜನರ ಕೈಲಿದ್ದು, ಮೇ 10ಕ್ಕೆ ಜನರು ವಿನಯ್​ ಕುಲಕರ್ಣಿ ಭವಿಷ್ಯ ಬರೆಯಲಿದ್ದಾರೆ.

Previous Post

ಆರಾಧ್ಯ ಬಚ್ಚನ್‌ ಬಗ್ಗೆ ತಪ್ಪು ಮಾಹಿತಿ ಪ್ರಕಟ: ವಿಡಿಯೋ ತೆಗೆದು ಹಾಕಲು ಹೈಕೋರ್ಟ್‌ ಸೂಚನೆ

Next Post

ಮರೆತುಹೋಗಿರುವ ನೆಹರೂ ಅವರಲ್ಲಿದ್ದ ಹಿಂದೂ ಲಕ್ಷಣಗಳು

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಮರೆತುಹೋಗಿರುವ ನೆಹರೂ ಅವರಲ್ಲಿದ್ದ ಹಿಂದೂ ಲಕ್ಷಣಗಳು

ಮರೆತುಹೋಗಿರುವ ನೆಹರೂ ಅವರಲ್ಲಿದ್ದ ಹಿಂದೂ ಲಕ್ಷಣಗಳು

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada