• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

Olympics:ವಿನೇಶ್ ಫೋಗಟ್ ಅನರ್ಹ.. ಹೊಟ್ಟೆಕಿಚ್ಚು, ರಾಜಕೀಯ ಶಂಕೆ.

ಕೃಷ್ಣ ಮಣಿ by ಕೃಷ್ಣ ಮಣಿ
August 7, 2024
in ಇದೀಗ, ಕ್ರೀಡೆ, ದೇಶ, ರಾಜಕೀಯ, ವಿಶೇಷ
0
Olympics:ವಿನೇಶ್ ಫೋಗಟ್ ಅನರ್ಹ.. ಹೊಟ್ಟೆಕಿಚ್ಚು, ರಾಜಕೀಯ ಶಂಕೆ.
Share on WhatsAppShare on FacebookShare on Telegram

ಒಲಿಂಪಿಕ್ಸ್​​ನಲ್ಲಿ ಫೈನಲ್‌ ಪ್ರವೇಶ ಮಾಡಿ ಚಿನ್ನದ ಪದಕದ ಭರವಸೆ ಮೂಡಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್(Wrestler Vinesh Phogat, who entered the finals in the Olympics and made a promise of a gold medal), ಫೈನಲ್‌ ಪಂದ್ಯಕ್ಕೂ ಮುನ್ನ ಸ್ಪರ್ಧೆಯಿಂದಲೇ ಹೊರಬಿದ್ದಿದ್ದಾರೆ. ಸ್ಪರ್ಧೆಯಿಂದ ಅನರ್ಹಗೊಂಡಿರುವ ವಿಚಾರವನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ವಿಷಾದದಿಂದ ಹಂಚಿಕೊಂಡಿದೆ. 50 ಕೆಜಿ ವಿಭಾಗದಲ್ಲಿ ಸ್ಪರ್ಧೆ ಮಾಡಿದ್ದ ವಿನಿಶ್‌ ಪೊಗಟ್‌ ತೂಕದಲ್ಲಿ 100 ಗ್ರಾಮ್ ಹೆಚ್ಚಾಗಿದ್ದರಿಂದ ಸ್ಪರ್ಧೆಯಿಂದ ಹೊರ ಹಾಕಲಾಗಿದೆ. ಈ ವಿಚಾರದಲ್ಲಿ ವಿನಿಶ್ ಪೊಗಟ್‌ ಖಾಸಗೀತನ ಗೌರವಿಸುವಂತೆ ಭಾರತೀಯ ತಂಡ ಮನವಿ ಮಾಡಿದೆ. ಆದರೆ ಚಿನ್ನದ ಪದಕದ ಭರವಸೆ ಮೂಡಿಸಿದ್ದ ವಿನಿಶ್ ಪೊಗಟ್ ಸ್ಪರ್ಧೆಯಿಂದ ಅನರ್ಹಗೊಂಡಿರುವ ವಿಚಾರ ರಾಜಕಾರಣ ನಡೆದಿರುವ ಅನುಮಾನ ಮೂಡಿಸಿದೆ.

ADVERTISEMENT

ಬಿಜೆಪಿ ನಾಯಕ ಬ್ರಿಜ್‌ ಭೂಷಣ್‌ (BJP Leader Brij Bhushan) ಲೈಂಗಿಕ ಕಿರುಕುಳದಿಂದ ಹೋರಾಟಕಕ್ಕೆ ಇಳಿದಿದ್ದ, 2023ರಲ್ಲಿ ದೊಡ್ಡ ಹೋರಾಟ ನಡೆದಿತ್ತು. ಈ ವೇಳೆ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕ್ರೀಡಾಪಟುಗಳು ನಿರಂತರ ಹೋರಾಟ ಮಾಡಿದ್ದರು. ಬಾಕ್ಸರ್‌ ವಿಜಯೇಂದ್ರ ಸಿಂಗ್‌(Boxer Vijayendra Singh), ವಿನೇಶ್ ಫೋಗಟ್ ಸೇರಿದಂತೆ ಮಹಿಳಾ ಕುಸ್ತಿಪಟುಗಳು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಪದಕಗಳನ್ನು ಬಿಸಾಡಿದ್ದರು. ಪ್ರಶಸ್ತಿ ಮಾಡುವ ಪ್ರಕ್ರಿಯೆಯೂ ನಡೆದಿತ್ತು. ಆದರೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಬ್ರಿಜ್‌ ಭೂಷನ್‌ ವಿರುದ್ಧ ಕ್ರಮವೇ ಆಗಲಿಲ್ಲ. ಹೋರಾಟ ತೀವ್ರವಾಯ್ತು, ದೆಹಲಿಯ ರಸ್ತೆಗಳಲ್ಲಿ ಕ್ರೀಡಾಪಟುಗಳನ್ನು ಎಳೆದಾಡಲಾಯ್ತು. ಆದರೂ ಮೋದಿ ಸರ್ಕಾರ ಕ್ರಮ ಜರುಗಿಸಲಿಲ್ಲ. ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸುವಂತೆ ಮಾಡಿ ಮತ್ತೆ ಅದೇ ಸ್ಥಾನಕ್ಕೆ ಮರು ನೇಮಕ ಮಾಡಲಾಯ್ತು.

ವಿನೇಶ್ ಫೋಗಟ್(Vinesh Phogat Enter to Final) ಫೈನಲ್‌ ಪ್ರವೇಶ ಮಾಡುತ್ತಿದ್ದಂತೆ ಭಾರತದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಕಳೆದ ವರ್ಷ ಇದೇ ಕೇಂದ್ರ ಸರ್ಕಾರ, ವಿನೇಶ್ ಫೋಗಟ್ ಸೇರಿದಂತೆ ಮಹಿಳಾ ಕುಸ್ತಿಪಟುಗಳನ್ನು ಯಾವ ರೀತಿ ನಡೆಸಿಕೊಂಡಿತ್ತು. ಇದೀಗ ಅದೇ ಹುಡುಗಿ ಎಂಥಹ ಸಾಧನೆ ಮಾಡಿದ್ದಾಳೆ ಎಂದು ಎರಡೂ ದೃಶ್ಯಗಳನ್ನು ಹೋಲಿಕೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಯ್ತು. ಇದೆಲ್ಲವೂ ಕ್ಷಣಿಕ ಎನ್ನುವಂತೆ ಕೆಲವೇ ಗಂಟೆಗಳಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟದಿಂದಲೇ ಹೊರಹಾಕಲಾಗಿದೆ. ಕೇವಲ 100 ಗ್ರಾಂ ತೂಕ ಹೆಚ್ಚಾಗಿದೆ(100gram more weight) ಅನ್ನೋ ಕಾರಣಕ್ಕೆ ಫೈನಲ್‌ ಪಂದ್ಯ ಆಡದಂತೆ ಹೊರ ಹಾಕಲಾಗಿದೆ. ಇದು ಉದ್ದೇಶ ಪೂರ್ವಕ. ಇಲ್ಲಿ ಏನೋ ಕುತಂತ್ರ ನಡೆದಿದೆ. ವಿನೇಶ್ ಫೋಗಟ್ (Vinesh Phogat) ಫೈನಲ್‌ನಲ್ಲಿ ಚಿನ್ನ ಗೆದ್ದು ಬಂದರೆ ಮತ್ತಷ್ಟು ಆಕ್ರೋಶ ಭುಗಿಲೇಳುತ್ತದೆ ಅನ್ನೋ ಕಾರಣಕ್ಕೆ ಹೀಗೆಲ್ಲಾ ಮಾಡಿದ್ದಾರೆ ಅನ್ನೋ ಚರ್ಚೆಗಳು ಶುರುವಾಗಿವೆ.

ತೂಕ ಇಳಿಸಲು ನಿರಂತರ ಸೈಕ್ಲಿಂಗ್(Cycling), ಜಾಗಿಂಗ್(Jogging) ಕಸರತ್ತು ಮಾಡಿ ದಣಿದಿರುವ ವಿನೇಶ್ ಪೋಗಟ್​ ನಿರ್ಜಲೀಕರಣದಿಂದ ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ. ವಿನೇಶ್‌ ಫೋಗಟ್‌ ಪಂದ್ಯದಿಂದ ಅನರ್ಹಗೊಂಡ ಬಗ್ಗೆ ವಿನೇಶ್‌ ಫೋಗಟ್ ಚಿಕ್ಕಪ್ಪ ಮಹಾವೀರ್ ಫೋಗಟ್‌ (Mahaveer Poghat) ಬೇಸರ ವ್ಯಕ್ತಪಡಿಸಿದ್ದಾರೆ.. ಈ ಬಗ್ಗೆ ಮಾತನಾಡಿದ ಮಹಾವೀರ್ ಫೋಗಟ್‌, ನಾನು ಹೇಳಲು ಏನು ಇಲ್ಲ, ಜನರೇ ಹತಾಶರಾಗಬೇಡಿ, ಒಂದಲ್ಲ ಒಂದು ದಿನ ಅವಳು ಖಂಡಿತವಾಗಿಯೂ ಪದಕವನ್ನ ಗೆಲ್ಲುತ್ತಾಳೆ ಎಂದಿದ್ದಾರೆ.. ಪ್ರಧಾನಿ ನರೇಂದ್ರ ಮೋದಿ (PM Narendra Modi) ಧೈರ್ಯ ತುಂಬಿದ್ದು, ನೀವು ಚಾಂಪಿಯನ್‌ಗಳ ಚಾಂಪಿಯನ್. ನೀವು ಭಾರತದ ಹೆಮ್ಮೆ. ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ನಿಮ್ಮ ಹಿನ್ನಡೆ ನೋವು ತಂದಿದೆ. ಧೈರ್ಯವಾಗಿ ಹೊರ ಬನ್ನಿ. ನಿಮ್ಮೊಂದಿಗೆ ನಾವಿದ್ದೇವೆ ಎಂದಿದ್ದಾರೆ.

ಕೃಷ್ಣಮಣಿ

Tags: AthleticsBJPBrij BhushanCentral GovtCongress PartyNarendra ModiOlympic medal winning wrestlerOlympics GamesRahul GandhiVijayendra Singhwrestlers Vinesh Phogatನರೇಂದ್ರ ಮೋದಿಬಿಜೆಪಿ
Previous Post

ಮೋದಿ, ನಿರ್ಮಲಾ ವಿರುದ್ಧ ಮಹುವಾ ವಾಗ್ದಾಳಿ..!

Next Post

ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರ ಬೇಡಿಕೆ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada