Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ವಿನೋದ್ ಪ್ರಭಾಕರ್ ಅಭಿನಯದ ಫೈಟರ್ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ

ಪ್ರತಿಧ್ವನಿ

ಪ್ರತಿಧ್ವನಿ

September 15, 2023
Share on FacebookShare on Twitter

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ “ಫೈಟರ್” ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ “ಐ ವಾನ ಫಾಲೋ ಯು” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ(ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ , ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ಕೆ.ಎನ್.ನಾಗೇಶ್ ಕುಮಾರ್ ಮುಂತಾದ ಗಣ್ಯರು “ಐ ವಾನ ಫಾಲೋ ಯು” ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಹೆಚ್ಚು ಓದಿದ ಸ್ಟೋರಿಗಳು

ಮೈಸೂರು ಸುತ್ತಮುತ್ತ “ಭಗೀರಥ” ಚಿತ್ರಕ್ಕೆ ಬಿರುಸಿನ ಚಿತ್ರೀಕರಣ

ಕನ್ನಡತಿ’ ಆದಿ ಈಗ ಹೀರೋ…ಸ್ಮೈಲ್ ಗುರು ರಕ್ಷಿತ್ ಚೊಚ್ಚಲ ಹೆಜ್ಜೆಗೆ ಅರಸು ಡೈರೆಕ್ಷರ್ ಮಹೇಶ್ ಬಾಬು ಸಾರಥಿ

ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ನಂಬರ್ ಗೆ ಹೆಜ್ಜೆ ಹಾಕಿದ ರಾಗಿಣಿ

ಈ ಹಾಡಿನ ಮೊದಲ ಪದ “ಐ ವಾನ ಫಾಲೋ” ಎಂಬುದನ್ನು ನಿರ್ದೇಶಕರು ಹೇಳಿದಾಗ “ಫಾಲೋ” ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.

ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ “ಫಾಲೋ ಯು” ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ದೇಶಕ ನೂತನ್ ಉಮೇಶ್.

ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನೆಯುತ್ತಾ ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಈ “ಫೈಟರ್” ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ “ಫೈಟರ್”. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ ,ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್ ನಲ್ಲಿ ಪಾಂಡಿಚೇರಿಯಲ್ಲಿ ಚಿತ್ರೀಕರಣವಾಗಿದ್ದು, ಅಲ್ಲಿನ ಬಿಸಿಲು ತಡೆಯುವುದು ಕಷ್ಟ. ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.

ಇಡೀ ಚಿತ್ರತಂಡದ ಶ್ರಮದಿಂದ ” ಫೈಟರ್ ” ಚಿತ್ರ ಉತ್ತಮವಾಗಿ ಮೂಡಿಬಂದಿದೆ. ‌ಇಂದು ಹಾಡು ಬಿಡುಗಡೆಯಾಗಿದೆ. ಚಿತ್ರತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ.

ಹಾಡು ಬರೆದಿರುವ ಕವಿರಾಜ್, ಹಾಡಿರುವ ಚೈತ್ರ ಹಾಗೂ ನಾಯಕಿ ಲೇಖಾ ಚಂದ್ರ ” ಫಾಲೋ ಯು” ಹಾಡಿನ ಬಗ್ಗೆ ಮಾತನಾಡಿದರು.

RS 500
RS 1500

SCAN HERE

Pratidhvani Youtube

«
Prev
1
/
5600
Next
»
loading
play
Jaipur’s ‘Money Heist’ moment as mask man throws notes in air Ascene #latestnews #viral #viralshorts
play
Shivaraj Tangadagi :ಚುನಾವಣೆ ಹತ್ತಿರ ಬಂದ ತಕ್ಷಣ ಬಿಜೆಪಿಯವರಿಗೆ ಹಿಂದೂಗಳು ನೆನಪಾಗ್ತಾರಾ?
«
Prev
1
/
5600
Next
»
loading

don't miss it !

ಗೃಹಸಚಿವ ಪರಮೇಶ್ವರ್ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆಯ ಸುರಿಮಳೆ!
Top Story

ಗೃಹಸಚಿವ ಪರಮೇಶ್ವರ್ ವಿರುದ್ಧ ಶೋಭಾ ಕರಂದ್ಲಾಜೆ ಟೀಕೆಯ ಸುರಿಮಳೆ!

by ಪ್ರತಿಧ್ವನಿ
October 3, 2023
ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್
Top Story

ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್

by ಪ್ರತಿಧ್ವನಿ
October 2, 2023
ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ  ವಾಗ್ದಾಳಿ
Top Story

ಸಿಎಂ ಸೀಟಿನಲ್ಲಿ ಕೂತರೂ ಸಿದ್ದ ಸುಳ್ಳುಗಳಿಗೆ ಕಮ್ಮಿಯೇನು ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​ಡಿಕೆ ವಾಗ್ದಾಳಿ

by ಪ್ರತಿಧ್ವನಿ
September 30, 2023
“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ
Top Story

“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ: ಬಹು ನಿರೀಕ್ಷಿತ ‘ಗರಡಿ’ ಚಿತ್ರ ನವೆಂಬರ್ 10 ರಂದು ತೆರೆಗೆ

by ಪ್ರತಿಧ್ವನಿ
September 27, 2023
ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ: ಸಚಿವ ದುರೈಮುರುಗನ್
Top Story

ಕಾವೇರಿ ನದಿಯಿಂದ ಮತ್ತೆ 5 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಒತ್ತಾಯ: ಸಚಿವ ದುರೈಮುರುಗನ್

by ಪ್ರತಿಧ್ವನಿ
September 29, 2023
Next Post
ಕಾನೂನು ಸುವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ಆ ರಾಜ್ಯ ಅಭಿವೃದ್ಧಿಯಾಗುತ್ತದೆ ; ಮುಖ್ಯಮಂತ್ರಿ‌ ಸಿದ್ದರಾಮಯ್ಯ

ಕರ್ನಾಟಕ ಮಾಡೆಲ್​ ದೇಶಾದ್ಯಂತ ವಿಸ್ತರಣೆ.. ಚುನಾವಣೆ ಗೆಲ್ಲಲು ತಂತ್ರಗಾರಿಕೆ..

ಲೈವ್ ರಿಪೋರ್ಟಿಂಗ್ ವೇಳೆ ಪತ್ರಕರ್ತೆಯ ಜೊತೆ ಅನುಚಿತ ವರ್ತನೆ

ಲೈವ್ ರಿಪೋರ್ಟಿಂಗ್ ವೇಳೆ ಪತ್ರಕರ್ತೆಯ ಜೊತೆ ಅನುಚಿತ ವರ್ತನೆ

ವಿದ್ಯಾರ್ಥಿಗಳ ಮೇಲೆ ಪೊಲೀಸ್​ ಲಾಠಿ ಚಾರ್ಜ್: ಕಾಲೇಜಿನಲ್ಲಿ ಉದ್ವಿಗ್ನತೆ!

ವಿದ್ಯಾರ್ಥಿಗಳ ಮೇಲೆ ಪೊಲೀಸ್​ ಲಾಠಿ ಚಾರ್ಜ್: ಕಾಲೇಜಿನಲ್ಲಿ ಉದ್ವಿಗ್ನತೆ!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist