Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ನಾಳೆ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲಿರುವ ಕೋಲಾರದ ಒಕ್ಕಲಿಗ ಸಮುದಾಯ..! VOkkaliga Community

ಪ್ರತಿಧ್ವನಿ

ಪ್ರತಿಧ್ವನಿ

March 20, 2023
Share on FacebookShare on Twitter

ಕೋಲಾರ: ಮಾ.20: ಮಾಜಿ ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎನ್ನುವುದು‌ ಕ್ಷೇತ್ರದ ಮತದಾರರ ಒತ್ತಾಯವಾಗಿದ್ದು ಮಂಗಳವಾರ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಬೆಂಗಳೂರಿಗೆ ತೆರಳಲು ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಮುಖಂಡರು ನಿರ್ಧರಿಸಿದರು.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

ನಗರದ ಹೊರವಲಯದ ಆರಾಧ್ಯ ಹೋಟಲ್ ನಲ್ಲಿ ಸಭೆ ನಡೆಸಿದ ಅವರು ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರ ಮನೆಯ ಮುಂದೆ ಸೇರಬೇಕು ಕೋಲಾರ ಕ್ಷೇತ್ರದ  ಪ್ರತಿಯೊಂದು ಬೂಟ್ ಮಟ್ಟದಿಂದ ಕನಿಷ್ಠ 25 ಜನರಂತೆ ಐದು ಸಾವಿರಕ್ಕೂ ಹೆಚ್ಚು ಜನ ಸೇರಬೇಕು ಎಂದು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಮಾತನಾಡಿ ಸಿದ್ದರಾಮಯ್ಯ ನಾಲ್ಕು ಬಾರಿ ಕೋಲಾರಕ್ಕೆ ಆಗಮಿಸಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿ ಹೋಗಿದ್ದರು ಆದರೆ ವಿರೋಧ ಪಕ್ಷದವರ ತಾಳಕ್ಕೆ ತಕ್ಕಂತೆ ಕೆಲವು ವರದಿಯನ್ನು ತಯಾರಿಸಿ ಸುಳ್ಳು ಮಾಹಿತಿ ನೀಡಲು ಹೊರಟಿದ್ದಾರೆ. ಈ ವರದಿಯು ಸುಮಾರು ಎರಡು ತಿಂಗಳ ಹಿಂದೆಯೇ ತಯಾರಿಸಲಾಗಿದೆ  ಪ್ರಸ್ತುತ ಇವತ್ತಿನ ವರದಿಯನ್ನು ಗಮನಿಸಿದರೆ ಗ್ರಾಮೀಣ ಪ್ರದೇಶಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಸಿದ್ದರಾಮಯ್ಯ ಅವರನ್ನು ಕೋಲಾರದಲ್ಲಿ ಸ್ಪರ್ಧೆ ಮಾಡಲೇಬೇಕು ಎಂಬುದು ನಮ್ಮೆಲ್ಲರ ಉದ್ದೇಶವಾಗಿದೆ ಒಕ್ಕಲಿಗ ಸಮುದಾಯವು ಸಿದ್ದರಾಮಯ್ಯ ಅವರನ್ನು ಬೆಂಬಲಿಸಲಿದೆ ಎಂಬುದನ್ನು ಸೂಚಿಸಲು ನಮ್ಮ ಶಕ್ತಿ ಪ್ರದರ್ಶನ ಮಾಡಬೇಕು ಎಂದರು.

ಒಕ್ಕಲಿಗ ಸಮುದಾಯ ಸಿದ್ದರಾಮಯ್ಯ ಪರವಾಗಿದೆ..!

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗದ್ದೆಕಣ್ಣೂರು ದಯಾನಂದ್ ಮಾತನಾಡಿ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರಿಗೆ ನೀಡಿರುವ ವರದಿಯು ಸುಳ್ಳು ಎಂದು ಸಾಬೀತು ಪಡಿಸಬೇಕು ಸಿದ್ದರಾಮಯ್ಯ ನವರ ಪರ ಒಕ್ಕಲಿಗ ಸಮುದಾಯ ಇದೆ ಎಂಬುದನ್ನು ತೋರಿಸಬೇಕು. ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ಮೂಲಕ ನೀರು ನೀಡಿ ಒಕ್ಕಲಿಗ ಸಮುದಾಯ ನೆಮ್ಮದಿಯ ಜೀವನ ನಡೆಸಲು ಕಾರಣಕರ್ತರಾದ ಸಿದ್ದರಾಮಯ್ಯ ಅವರಿಗೆ ಬೆಂಬಲಿಸಬೇಕು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಿಂದ ಒಕ್ಕಲಿಗ ಜನಾಂಗಕ್ಕೆ ಪ್ರಯೋಜನ ಆಗಿಲ್ಲ.  ಐದರಿಂದ ಹತ್ತು ಸಾವಿರ ಜನ ಜಿಲ್ಲೆಯಿಂದ ಬೆಂಗಳೂರಿಗೆ ಹೋಗುವ ತೀರ್ಮಾನವನ್ನು ಒಬ್ಬರಿಗೊಬ್ಬರು ಮಾಹಿತಿ ತಿಳಿಸಬೇಕು ಎಂದರು.

ಸಿದ್ದರಾಮಯ್ಯ ಅವರ ಬಗ್ಗೆ ವಿರೋಧ ಪಕ್ಷಗಳಿಂದ ಒಳಸಂಚು..!

ನಗರಸಭೆ ಸದಸ್ಯ ಮುರಳಿಗೌಡ ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಗೆಲ್ಲುತ್ತಾರೆ ಎಂಬುದನ್ನೂ ಗಮನಿಸಿ ವಿರೋಧ ಪಕ್ಷಗಳು ಸುಳ್ಳಿನ ಒಳಸಂಚು ಮಾಡಲು ಹೊರಟಿದ್ದಾರೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಲುವುದು ಗ್ಯಾರೆಂಟಿಯಾಗುತ್ತದೆ ಇದನ್ನು ಅರ್ಥಮಾಡಿಕೊಂಡು ಹೈಕಮಾಂಡ್ ಕೋಲಾರದಲ್ಲಿ  ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಒಪ್ಪಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಒಕ್ಕಲಿಗ ಸಮುದಾಯವು ಒಂದೇ ಪಕ್ಷದ ಪರವಾಗಿ ಇಲ್ಲ ಎಲ್ಲಾ ಪಕ್ಷಗಳೊಂದಿಗೆ ನಮ್ಮ ಸಮುದಾಯವು ಇದ್ದು ಹೆಚ್ಚಾಗಿ ಸಿದ್ದರಾಮಯ್ಯ ಬೆಂಬಲವಾಗಿ ನಿಂತಿದ್ದಾರೆ ಅದಂತೆ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು, ದಲಿತರು, ಒಕ್ಕಲಿಗ ಸಮುದಾಯ ಒಟ್ಟಾಗಿ ಸಿದ್ದರಾಮಯ್ಯ ನವರ ಪರ ಇದೆ ಎಂಬುದನ್ನು ಸಾಬೀತು ಪಡಿಸಬೇಕು ಅನಿಟ್ಟಿನಲ್ಲಿ ಒತ್ತಾಯಿಸಲು ಸಮುದಾಯದ ಮುಖಂಡರು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರಿಗೆ ಅಗಮಿಸಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ನಿರ್ದೇಶಕ ರಾಮಕೃಷ್ಣೇಗೌಡ, ಪರ್ಜೇನಹಳ್ಳಿ ನಾಗೇಶ್, ಪೆಮ್ಮಶೆಟ್ಟಿಹಳ್ಳಿ ಸುರೇಶ್, ತಿಪ್ಪೇನಹಳ್ಳಿ ನಾಗೇಶ್, ವಕ್ಕಲೇರಿ ಲೋಕೇಶ್, ಸತೀಶ್, ಶ್ರೀನಿವಾಸ್, ಅರಹಳ್ಳಿ ಗೋಪಾಲಕೃಷ್ಣ, ರಘು, ಶ್ರೀಧರ್, ಅಂಬರೀಶ್, ಪ್ರಕಾಶ್, ಚಂದ್ರಶೇಖರ್, ಮುಂತಾದವರ ಇದ್ದರು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಸಬ್ಕಾ ಸಾಥ್ˌ ಸಿರ್ಫ್ ದೋ ಕಾ ವಿಕಾಸ್
ಅಂಕಣ

ಸಬ್ಕಾ ಸಾಥ್ˌ ಸಿರ್ಫ್ ದೋ ಕಾ ವಿಕಾಸ್

by ಡಾ | ಜೆ.ಎಸ್ ಪಾಟೀಲ
May 26, 2023
Contaminated water : ಲಿಂಗಸುಗೂರು ತಾಲೂಕಿನಲ್ಲಿ ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನ ಅಸ್ವಸ್ಥ..!
Top Story

Contaminated water : ಲಿಂಗಸುಗೂರು ತಾಲೂಕಿನಲ್ಲಿ ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು ಜನ ಅಸ್ವಸ್ಥ..!

by ಪ್ರತಿಧ್ವನಿ
May 28, 2023
GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?
Top Story

GH Nayak : ಮರೆಯಾದ ಕನ್ನಡದ ಖ್ಯಾತ ವಿಮರ್ಶಕ ಜಿ.ಎಚ್.ನಾಯಕ, ಅವರ ಸಾಹಿತ್ಯ ಸೇವೆ ಹೇಗಿತ್ತು ಗೊತ್ತಾ?

by ಪ್ರತಿಧ್ವನಿ
May 26, 2023
ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!
Uncategorized

ಕಾಂಗ್ರೆಸ್‌ಗೆ ಗ್ಯಾರಂಟಿಯೇ ಸವಾಲು.. ಸಮಯವಿದೆ.. ಸಂಕಷ್ಟ ಗ್ಯಾರಂಟಿ..!

by ಪ್ರತಿಧ್ವನಿ
May 26, 2023
New Parliament building : ಹೊಸ ಸಂಸತ್‌ ಭವನದ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಮೋದಿ..!
Top Story

New Parliament building : ಹೊಸ ಸಂಸತ್‌ ಭವನದ ವಿಡಿಯೋ ಶೇರ್‌ ಮಾಡಿದ ಪ್ರಧಾನಿ ಮೋದಿ..!

by ಪ್ರತಿಧ್ವನಿ
May 26, 2023
Next Post
Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI

Rahul Gandhi in karnataka : ಕರ್ನಾಟಕಕ್ಕೆ ರಾ. ಗಾ ..! ಯುವ ಕ್ರಾಂತಿ ಸಮಾವೇಶ #PRATIDHVANI

BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni

BIDAR POLICE | ₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು #pratidhavni

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!

Auto drivers protest | ವೈಟ್‌ ಬೋರ್ಡ್‌ ರ‍್ಯಾಪಿಡೋ ಬಂದ್‌ ಮಾಡಿ.. ಇಲ್ಲಅಂದ್ರೆ ನಮ್ಗೂ ವೈಟ್‌ ಬೋರ್ಡ್‌ ಕೊಡಿ..!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist