ಮತ ಚಲಾಯಿಸುವುದರ ಮೂಲಕ ಪ್ರತಿಯೊಬ್ಬರೂ ಈ ಹಬ್ಬದಲ್ಲಿ ಭಾಗವಹಿಸಿ ಎಂದು ಕ್ರೇಜಿಸ್ಟಾರ್ ರವಿಚಂದ್ರನ್ ಮನವಿ ಮಾಡಿದ್ದಾರೆ.

ರವಿಚಂದ್ರನ್ ರಾಜಾಜಿನಗರದ ಠಾಗೂರು ಸ್ಕೂಲ್ ನಲ್ಲಿ ಮತದಾನ (Voting) ಮಾಡಿದ್ದಾರೆ. ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ರವಿಚಂದ್ರನ್, ನನ್ನ ಹಕ್ಕು, ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ಬಂದು ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.

ಈಗಾಗಲೇ ಹಲವು ಸೆಲೆಬ್ರಿಟಿಗಳು ಬಂದು ಮತದಾನ ಮಾಡಿದ್ದಾರೆ. ಡಾಲಿ ಧನಂಜಯ್ ಅರಸಿಕೆರೆಗೆ ತೆರಳಿ ಮತದಾನ ಮಾಡಿದ್ದಾರೆ. ಕುಟುಂಬದೊಂದಿಗೆ ತೆರಳಿ ಅವರು ಹಕ್ಕು ಚಲಾಯಿಸಿದ್ದಾರೆ. ದೊಡ್ಮನೆ ಸದಸ್ಯರು ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಘೀರ ಸಿನಿಮಾದ ಶೂಟಿಂಗ್ ವೇಳೆ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶ್ರೀಮುರುಳಿ ಕೂಡ ಮನೆಯಲ್ಲಿ ರೆಸ್ಟ್ ನಲ್ಲಿದ್ದರೂ ಮತದಾನ ಮಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ ಪತ್ನಿಯೊಂದಿಗೆ ಬಂದು ಮತದಾನ ಮಾಡಿದ್ದಾರೆ. ನಟಿ ಅಮೂಲ್ಯ ತಮ್ಮ ಪತಿಯೊಂದಿಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಸಪ್ತಮಿಗೌಡ ಕೂಡ ಹಕ್ಕು ಚಲಾಯಿಸಿ ಎಲ್ಲರಿಗೂ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನುಳಿದಂತೆ ಹಲವಾರು ಸೆಲೆಬ್ರಿಟಿಗಳು ಬೆಂಗಳೂರಿನಲ್ಲಿ ಮತದಾನ ಮಾಡಿದ್ದಾರೆ.