• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಸುನಾಮಿಯಲ್ಲಿ ಕೊಚ್ಚಿ ಹೋಗಿದ್ದ ಕಾಂಗ್ರೆಸಿಗೆ ಹುಲ್ಲು ಕಡ್ಡಿಯಾದ ಹಾನಗಲ್ : ಕೆ.ಎಸ್.ಈಶ್ವರಪ್ಪ

Any Mind by Any Mind
November 3, 2021
in ಕರ್ನಾಟಕ, ರಾಜಕೀಯ
0
ಬಿಜೆಪಿ ಸುನಾಮಿಯಲ್ಲಿ ಕೊಚ್ಚಿ ಹೋಗಿದ್ದ ಕಾಂಗ್ರೆಸಿಗೆ ಹುಲ್ಲು ಕಡ್ಡಿಯಾದ ಹಾನಗಲ್ : ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram

ಬಿಜೆಪಿ ಸುನಾಮಿಯಲ್ಲಿ ಕೊಚ್ಚಿ ಹೋಗಿದ್ದ ಕಾಂಗ್ರೆಸ್ಗೆ ಹಾನಗಲ್ನ ಜನ ಹುಲ್ಲುಕಡ್ಡಿಯ ರೂಪದಲ್ಲಿ ಕೃಪೆ ತೋರಿದ್ದಾರೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ADVERTISEMENT

2023ರ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳನ್ನ ಪಡೆದು ಮತ್ತೆ ಅಧಿಕಾರಕ್ಕೇರಲಿದೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಜಾತಿ ರಾಜಕಾರಣ, ಅಲ್ಪಸಂಖ್ಯಾತರ ಓಲೈಕೆ, ಜಾತಿಗಳ ನಡುವೆ ಒಡಕು ಮೂಡಿಸುವುದು ಮತ್ತಿತ್ತರ ಕಾರಣಗಳಿಂದಾಗಿ ಸಿಂಧಗಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನುಭವಿಸಿದೆ ಎಂದು ಟೀಕಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸುನಾಮಿಗೆ ಬಿಜೆಪಿ ಕೊಚ್ಚಿ ಹೋಗಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ಹಾನಗಲ್ನಲ್ಲಿ ಗೆದ್ದಿರುವುದನ್ನೇ ದೊಡ್ಡ ಸಾಧನೆ ಎಂದು ಹೇಳಿಕೊಂಡು ಕಾಂಗ್ರೆಸ್ನವರು ಓಡಾಡುತ್ತಿದ್ದಾರೆ. ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿ ಬಿಜೆಪಿ ಸೋತಿರುವುದರಿಂದ ಸರ್ಕಾರಕ್ಕೆ ಯಾವುದೇ ರೀತಿಯ ಹಿನ್ನಡೆ ಆಗುವುದಿಲ್ಲ.

ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಳನ್ನು ಉಲೇಖಿಸಿ ಮಾತಡಿದ ಕೆ.ಎಸ್.ಈಶ್ವರಪ್ಪ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದ ಮೇಲೆ ಪರಿಣಾಮವನ್ನ ಬೀರುತ್ತಿರುವ ಆಂತರಿಕ ಸಮಸ್ಯೆಗಳನ್ನು ಪರಿಹರಿಸುವತ್ತ ಮೊದಲು ಗಮನಹರಿಸಬೇಕು ಎಂದು ಸಲಹೆಯನ್ನ ನೀಡಿದ್ದಾರೆ.

ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಜೆ.ಹೆಚ್.ಪಟೇಲ್ ಮತ್ತು ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲೇ ಸೋತಿದ್ದರು ಒಂದು ಕ್ಷೇತ್ರದಲ್ಲಿ ಪಕ್ಷ ಸೋತರೆ ಅದು ಎಂದಿಗೂ ನಿರ್ಣಾಯಕ ಎನ್ನಿಸುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಶುರುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಕಾರಣಕ್ಕೆ ಹಾನಗಲ್ನ ಜನರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿದ್ದಾರೆ ಎಂದು ಸಿದ್ದರಾಮಯ್ಯನವರ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ನಡೆದ ಎರಡು ಉಪಚುನಾವಣೆಯಲ್ಲಿ ಬಿಜೆಪಿ ಒಂದರಲ್ಲಿ ಸೋತಿದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ದ ಆಡಳಿತ ವಿರೋಧಿ ಅಲೆ ಇದೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ಉಪಚುಣಾವಣೆ ನಡೆದ 30 ಕ್ಷೇತ್ರಗಳ ಪೈಕಿ ಬಿಜೆಪಿ 25ರಲ್ಲಿ ಜಯ ಸಾಧಿಸಿದೆ ಎಂದು ಹೇಳಿದ್ದಾರೆ. ಹಾನಗಲ್ ಮುಖ್ಯಮಂತ್ರಿಯವರ ತವರು ಕ್ಷೇತ್ರವಾದ ಕಾರಣ ಬಿಜೆಪಿ ಕ್ಷೇತ್ರವನ್ನ ಕಳೆದುಕೊಳ್ಳಬಾರದಿತ್ತು ಎಂದು ಪ್ರತಿಪಾದಿಸಿದ್ದಾರೆ. ಸಿಂಧಗಿಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ 31,185 ಮತಗಳ ಅಂತರದಲ್ಲಿ ಜಯ ಸಾಧಿಸಿರುವುದು ನಮ್ಮಗೆ ಸಂತಸವಾಗಿದೆ ಎಂದು ಹೇಳಿದ್ದಾರೆ

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕೆ.ಎಸ್.ಈಶ್ವರಪ್ಪಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಪ್ಪು ಸಮಾಧಿ ಬಳಿಗೆ ಆಗಮಿಸಿದ ರಾಘವೇಂದ್ರ ರಾಜ್ ಕುಮಾರ್

Next Post

ತಮಿಳು ನಟ ವಿಜಯ್‌ ಸೇತುಪತಿ ಮೇಲೆ ಹಲ್ಲೆಗೆ ಯತ್ನ

Related Posts

ಕೋಗಿಲು ಒತ್ತುವರಿ ತೆರವು ವಿವಾದ: ಸಿಎಂ ಸಿದ್ದರಾಮಯ್ಯಗೆ ಸುದೀರ್ಘ ಪತ್ರ ಬರೆದ ಎನ್.ಆರ್ ರಮೇಶ್
Top Story

GBA Election 2026: ಟಿಕೆಟ್ ಆಕಾಂಕ್ಷಿಗಳ ದಿಕ್ಕು ತಪ್ಪಿಸದಿರಿ: ಸಿಎಂಗೆ ಎನ್‌.ಆರ್ ರಮೇಶ್‌ ಪತ್ರ

by ಪ್ರತಿಧ್ವನಿ
February 11, 2026
0

ಬೆಂಗಳೂರು :  ಬೆಂಗಳೂರು ಮಹಾನಗರ ಪಾಲಿಕೆಗಳ ಆಡಳಿತ ವ್ಯವಸ್ಥೆಗೆ ಅತ್ಯವಶ್ಯಕವಿರುವ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಟ್ಟ ನಂತರವಷ್ಟೇ ಮಹಾನಗರದ ಐದು ಪಾಲಿಕೆಗಳಿಗೆ ಚುನಾವಣೆ ನಡೆಸಲು ಸಾಧ್ಯ...

Read moreDetails
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ತಮಿಳು ನಟ ವಿಜಯ್‌ ಸೇತುಪತಿ ಮೇಲೆ ಹಲ್ಲೆಗೆ ಯತ್ನ

ತಮಿಳು ನಟ ವಿಜಯ್‌ ಸೇತುಪತಿ ಮೇಲೆ ಹಲ್ಲೆಗೆ ಯತ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada