• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತದಾನ ಹೆಚ್ಚಳ ಆಗಿರುವ ಲಾಭ ಕಾಂಗ್ರೆಸ್​​ಗೋ ಬಿಜೆಪಿಗೋ..?

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತಗಳು ಮುಕ್ತಾಯ ಆಗಿವೆ. ಮೊದಲ ಹಂತ ಏಪ್ರಿಲ್​ 26 ರಂದು ನಡೆದಿತ್ತು. ಆ ಬಳಿಕ ಮೇ 7ರಂದು ಎರಡನೇ ಹಂತದ ಚುನಾವಣೆಯೂ ನಡೆದಿದ್ದು, ಎರಡೂ ಹಂತದ ಚುನಾವಣೆಯಲ್ಲೂ ಉತ್ತಮ ಮತದಾನ ಆಗಿದೆ. ಎರಡೂ ಹಂತಗಳನ್ನು ಹೋಲಿಕೆ ಮಾಡಿ ನೋಡಿದಾಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ ಆಗಿದ್ದರೆ, ಬೆಂಗಳೂರು ಸೆಂಟ್ರಲ್​ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ನಡೆದಿದೆ. ಆದರೆ ರಾಜ್ಯಾದ್ಯಂತ ಲೆಕ್ಕಾಚಾರ ನೋಡಿದಾಗ ಮೊದಲ ಹಂತದಲ್ಲಿ ಶೇ. 69.56 ರಷ್ಟು ಹಾಗು ಎರಡನೇ ಹಂತದಲ್ಲಿ ಶೇ. 70.41ರಷ್ಟು ಮತದಾನ ಆಗಿದೆ. ರಾಜ್ಯದಲ್ಲಿ ಒಟ್ಟು ಸರಾಸರಿ ನೋಡಿದಾಗ ಶೇ. 69.96 ರಷ್ಟು ಮತದಾನ ಆಗಿದೆ ಎನ್ನುವುದು ಚುನಾವಣಾ ಆಯೋಗದ ಅಧಿಕೃತ ಮಾಹಿತಿ.

ADVERTISEMENT

ರಾಜ್ಯದಲ್ಲಿ ಶೇಕಡ 70ರಷ್ಟು ಜನರು ಪ್ರಜಾಪ್ರಭುತ್ವದ ಹಬ್ಬ, ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ. ಅದರಲ್ಲೂ ಕಳೆದ ಮೂರು ಬಾರಿಯ ಸರಾಸರಿ ಅಂಕಿ ಅಂಶವನ್ನು ನೋಡಿದಾಗ ಈ ಬಾರಿಯ ಮತದಾನ ಹೆಚ್ಚಳ ಆಗಿರುವುದು ನಿಚ್ಚಳವಾಗಿದೆ. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಶೇ. 67.20 ರಷ್ಟ ಮತದಾನ ಆಗಿತ್ತು. ಆ ಬಳಿಕ 2019ರಲ್ಲಿ ನಡೆದ ಚುನಾವಣೆಯಲ್ಲಿ ಅಲ್ಪ ಪ್ರಮಾಣದಲ್ಲಿ ಮತದಾನ ಏರಿಕೆ ಕಂಡಿತ್ತು. ಅಂದರೆ ಶೇ. 68.81ರಷ್ಟು ಮತದಾನ ನಡೆದಿತ್ತು. ಇದೀಗ ಶೇಕಡ 69.96 ರಷ್ಟು ಮತದಾನ ಆಗಿದೆ. ಕಳೆದ ಮೂರು ಬಾರಿಯ ಅಂಕಿ ಅಂಶಗಳನ್ನು ನೋಡಿದಾಗ ಮತದಾರ ಜಾಗೃತನಾಗುತ್ತಿದ್ದಾನೆ ಎನಿಸುತ್ತದೆ.

ಮತದಾನ ಹೆಚ್ಚಳ ಆದಷ್ಟು ಯಾರಿಗೆ ಲಾಭ..?

ಯಾವುದೇ ಒಂದು ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮತದಾನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ ಎಂದರೆ ಅದು ಸರ್ಕಾರದ ವಿರುದ್ಧ ರೋಸಿಹೋಗಿ ಜನರು ಹಕ್ಕು ಚಲಾವಣೆ ಮಾಡಿದ್ದಾರೆ ಎಂದರ್ಥ. ಅಂದರೆ ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಸ್ತಿತ್ವದಲ್ಲಿ ಇದ್ದರೆ ಆಳುವ ಸರ್ಕಾರದ ವಿರುದ್ಧ ಮತಚಲಾವಣೆ ಮಾಡಿದ್ದಾರೆ ಎಂದು ಅರ್ಥೈಸಬಹುದು. ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಯಾವ ಸರ್ಕಾರದ ವಿರುದ್ಧ ಮತದಾರನ ಕಿಚ್ಚು ಮತದಾನದಲ್ಲಿ ಕಾಣಿಸಿದೆ ಎನ್ನುವುದನ್ನು ಮತ ಎಣಿಕೆ ದಿನ ಫಲಿತಾಂಶ ಪ್ರಕಟ ಆದಾಗ ಗೊತ್ತಾಗುತ್ತದೆ. ಆದರೆ ಈ ಬಾರಿ ಲೆಕ್ಕಾಚಾರ ಕಾಂಗ್ರೆಸ್​ಗೆ ಸಹಾಯ ಆಗಿರಬಹುದು ಅನ್ನೋದು ಕಾಂಗ್ರೆಸ್​ ಲೆಕ್ಕಾಚಾರ.

ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲೂ ಮಹಿಳೆಯರಿಗೆ ಗೃಹಲಕ್ಷ್ಮೀ ಹಾಗು ಶಕ್ತಿ ಯೋಜನೆಯನ್ನು ಕೊಟ್ಟಿರುವುದು ಕಾಂಗ್ರೆಸ್​ ವಿಶ್ವಾಸವನ್ನು ಹೆಚ್ಚಿಸಿದೆ. ಪ್ರತಿ ತಿಂಗಳು 2 ಸಾವಿರ ಪಡೆಯುತ್ತಿರುವ ಮಹಿಳಾ ಮತದಾರರು ಕಾಂಗ್ರೆಸ್​ನ ಹಸ್ತದ ಗುರುತಿಗೆ ಮನಸೋತು ಮತಹಾಕಿದ್ದಾರೆ ಎನ್ನುವುದು ಕಾಂಗ್ರೆಸ್ಸಿಗರ ನಂಬಿಕೆ. ಇನ್ನು ಮೋದಿ ಇಡೀ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಮನ್ನಣೆ ಗಳಿಸುವಂತೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಲೆಕ್ಕಕ್ಕಿಲ್ಲ. ಇದು ದೇಶದ ಚುನಾವಣೆ ಎನ್ನುವುದು ಬಿಜೆಪಿ ನಾಯಕರ ಮಾತು. ಮತದಾರನ ಮನದಾಳ ಇದೀಗ EVM ನಲ್ಲಿ ಭದ್ರವಾಗಿದೆ. ಯಾವ ಪಕ್ಷದ ನಂಬಿಕೆ ಗೆದ್ದಿದೆ ಎನ್ನುವುದು ಜೂನ್​ 4ರ ಮತ ಎಣಿಕೆ ದಿನ ಬಯಲಾಗಲಿದೆ.

ಕೃಷ್ಣಮಣಿ

Tags: #ashwathnarayan #educationminister #rangnath #lawer #psi #corruption #protest #police #bangalore #people #karnatakanews #newsupdate #basavarajbommai #politics #congress #bjp #pratidhvanidigital#CMSiddaramaiah #Congress#congressBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಾಂಗ್ ಗ್ಯಾಪ್ ನಂತರ ಮತ್ತೆ ಎಂಟ್ರಿ ಕೊಟ್ಟ ಸಂತೋಷ್ ಬಾಲರಾಜ್ ! ಸತ್ಯಂ ಚಿತ್ರಕ್ಕೆ ಸೆನ್ಸಾರ್ ಮೆಚ್ಚುಗೆ ! 

Next Post

Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post
Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada