• Home
  • About Us
  • ಕರ್ನಾಟಕ
Wednesday, November 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮತದಾನ ಹೆಚ್ಚಳ ಆಗಿರುವ ಲಾಭ ಕಾಂಗ್ರೆಸ್​​ಗೋ ಬಿಜೆಪಿಗೋ..?

ಪ್ರತಿಧ್ವನಿ by ಪ್ರತಿಧ್ವನಿ
May 8, 2024
in Top Story, ರಾಜಕೀಯ
0
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತಗಳು ಮುಕ್ತಾಯ ಆಗಿವೆ. ಮೊದಲ ಹಂತ ಏಪ್ರಿಲ್​ 26 ರಂದು ನಡೆದಿತ್ತು. ಆ ಬಳಿಕ ಮೇ 7ರಂದು ಎರಡನೇ ಹಂತದ ಚುನಾವಣೆಯೂ ನಡೆದಿದ್ದು, ಎರಡೂ ಹಂತದ ಚುನಾವಣೆಯಲ್ಲೂ ಉತ್ತಮ ಮತದಾನ ಆಗಿದೆ. ಎರಡೂ ಹಂತಗಳನ್ನು ಹೋಲಿಕೆ ಮಾಡಿ ನೋಡಿದಾಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ ಆಗಿದ್ದರೆ, ಬೆಂಗಳೂರು ಸೆಂಟ್ರಲ್​ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ನಡೆದಿದೆ. ಆದರೆ ರಾಜ್ಯಾದ್ಯಂತ ಲೆಕ್ಕಾಚಾರ ನೋಡಿದಾಗ ಮೊದಲ ಹಂತದಲ್ಲಿ ಶೇ. 69.56 ರಷ್ಟು ಹಾಗು ಎರಡನೇ ಹಂತದಲ್ಲಿ ಶೇ. 70.41ರಷ್ಟು ಮತದಾನ ಆಗಿದೆ. ರಾಜ್ಯದಲ್ಲಿ ಒಟ್ಟು ಸರಾಸರಿ ನೋಡಿದಾಗ ಶೇ. 69.96 ರಷ್ಟು ಮತದಾನ ಆಗಿದೆ ಎನ್ನುವುದು ಚುನಾವಣಾ ಆಯೋಗದ ಅಧಿಕೃತ ಮಾಹಿತಿ.

ADVERTISEMENT

ರಾಜ್ಯದಲ್ಲಿ ಶೇಕಡ 70ರಷ್ಟು ಜನರು ಪ್ರಜಾಪ್ರಭುತ್ವದ ಹಬ್ಬ, ಚುನಾವಣೆಯಲ್ಲಿ ಭಾಗಿಯಾಗಿದ್ದಾರೆ. ಅದರಲ್ಲೂ ಕಳೆದ ಮೂರು ಬಾರಿಯ ಸರಾಸರಿ ಅಂಕಿ ಅಂಶವನ್ನು ನೋಡಿದಾಗ ಈ ಬಾರಿಯ ಮತದಾನ ಹೆಚ್ಚಳ ಆಗಿರುವುದು ನಿಚ್ಚಳವಾಗಿದೆ. 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯಾದ್ಯಂತ ಶೇ. 67.20 ರಷ್ಟ ಮತದಾನ ಆಗಿತ್ತು. ಆ ಬಳಿಕ 2019ರಲ್ಲಿ ನಡೆದ ಚುನಾವಣೆಯಲ್ಲಿ ಅಲ್ಪ ಪ್ರಮಾಣದಲ್ಲಿ ಮತದಾನ ಏರಿಕೆ ಕಂಡಿತ್ತು. ಅಂದರೆ ಶೇ. 68.81ರಷ್ಟು ಮತದಾನ ನಡೆದಿತ್ತು. ಇದೀಗ ಶೇಕಡ 69.96 ರಷ್ಟು ಮತದಾನ ಆಗಿದೆ. ಕಳೆದ ಮೂರು ಬಾರಿಯ ಅಂಕಿ ಅಂಶಗಳನ್ನು ನೋಡಿದಾಗ ಮತದಾರ ಜಾಗೃತನಾಗುತ್ತಿದ್ದಾನೆ ಎನಿಸುತ್ತದೆ.

ಮತದಾನ ಹೆಚ್ಚಳ ಆದಷ್ಟು ಯಾರಿಗೆ ಲಾಭ..?

ಯಾವುದೇ ಒಂದು ಸರ್ಕಾರ ಅಧಿಕಾರದಲ್ಲಿ ಇದ್ದಾಗ ಮತದಾನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ ಎಂದರೆ ಅದು ಸರ್ಕಾರದ ವಿರುದ್ಧ ರೋಸಿಹೋಗಿ ಜನರು ಹಕ್ಕು ಚಲಾವಣೆ ಮಾಡಿದ್ದಾರೆ ಎಂದರ್ಥ. ಅಂದರೆ ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರ ಅಸ್ತಿತ್ವದಲ್ಲಿ ಇದ್ದರೆ ಆಳುವ ಸರ್ಕಾರದ ವಿರುದ್ಧ ಮತಚಲಾವಣೆ ಮಾಡಿದ್ದಾರೆ ಎಂದು ಅರ್ಥೈಸಬಹುದು. ಆದರೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಯಾವ ಸರ್ಕಾರದ ವಿರುದ್ಧ ಮತದಾರನ ಕಿಚ್ಚು ಮತದಾನದಲ್ಲಿ ಕಾಣಿಸಿದೆ ಎನ್ನುವುದನ್ನು ಮತ ಎಣಿಕೆ ದಿನ ಫಲಿತಾಂಶ ಪ್ರಕಟ ಆದಾಗ ಗೊತ್ತಾಗುತ್ತದೆ. ಆದರೆ ಈ ಬಾರಿ ಲೆಕ್ಕಾಚಾರ ಕಾಂಗ್ರೆಸ್​ಗೆ ಸಹಾಯ ಆಗಿರಬಹುದು ಅನ್ನೋದು ಕಾಂಗ್ರೆಸ್​ ಲೆಕ್ಕಾಚಾರ.

ಕಾಂಗ್ರೆಸ್​ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲೂ ಮಹಿಳೆಯರಿಗೆ ಗೃಹಲಕ್ಷ್ಮೀ ಹಾಗು ಶಕ್ತಿ ಯೋಜನೆಯನ್ನು ಕೊಟ್ಟಿರುವುದು ಕಾಂಗ್ರೆಸ್​ ವಿಶ್ವಾಸವನ್ನು ಹೆಚ್ಚಿಸಿದೆ. ಪ್ರತಿ ತಿಂಗಳು 2 ಸಾವಿರ ಪಡೆಯುತ್ತಿರುವ ಮಹಿಳಾ ಮತದಾರರು ಕಾಂಗ್ರೆಸ್​ನ ಹಸ್ತದ ಗುರುತಿಗೆ ಮನಸೋತು ಮತಹಾಕಿದ್ದಾರೆ ಎನ್ನುವುದು ಕಾಂಗ್ರೆಸ್ಸಿಗರ ನಂಬಿಕೆ. ಇನ್ನು ಮೋದಿ ಇಡೀ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಮನ್ನಣೆ ಗಳಿಸುವಂತೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಲೆಕ್ಕಕ್ಕಿಲ್ಲ. ಇದು ದೇಶದ ಚುನಾವಣೆ ಎನ್ನುವುದು ಬಿಜೆಪಿ ನಾಯಕರ ಮಾತು. ಮತದಾರನ ಮನದಾಳ ಇದೀಗ EVM ನಲ್ಲಿ ಭದ್ರವಾಗಿದೆ. ಯಾವ ಪಕ್ಷದ ನಂಬಿಕೆ ಗೆದ್ದಿದೆ ಎನ್ನುವುದು ಜೂನ್​ 4ರ ಮತ ಎಣಿಕೆ ದಿನ ಬಯಲಾಗಲಿದೆ.

ಕೃಷ್ಣಮಣಿ

Tags: #ashwathnarayan #educationminister #rangnath #lawer #psi #corruption #protest #police #bangalore #people #karnatakanews #newsupdate #basavarajbommai #politics #congress #bjp #pratidhvanidigital#CMSiddaramaiah #Congress#congressBJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಾಂಗ್ ಗ್ಯಾಪ್ ನಂತರ ಮತ್ತೆ ಎಂಟ್ರಿ ಕೊಟ್ಟ ಸಂತೋಷ್ ಬಾಲರಾಜ್ ! ಸತ್ಯಂ ಚಿತ್ರಕ್ಕೆ ಸೆನ್ಸಾರ್ ಮೆಚ್ಚುಗೆ ! 

Next Post

Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Related Posts

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ
Top Story

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

by ಪ್ರತಿಧ್ವನಿ
November 12, 2025
0

ಬೆಂಗಳೂರು: ಅಮೇರಿಕಾ ಹಾಗೂ ಇನ್ನಿತರೆ ದೇಶಗಳಲ್ಲಿ ಸ್ವಿಜರ್‌ಲ್ಯಾಂಡ್‌ನಲ್ಲಿರುವ ಕ್ವಾಂಟಮ್‌ ತಂತ್ರಜ್ಞಾನದ ಬಗ್ಗೆ ಸಮಗ್ರ ಮಾಹಿತಿಯನ್ನು ತಿಳಿಸಲು ಸಿದ್ಧಪಡಿಸಿರುವ ʼಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಮ್ಯಾಪ್‌ʼನ ಮಾದರಿಯಲ್ಲಿ, ʼಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌...

Read moreDetails
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

November 12, 2025
ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

November 12, 2025
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

November 12, 2025
Next Post
Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Hair care: ಬೇಸಿಗೆಯಲ್ಲಿ ಕಾಡುವ ಜಿಡ್ಡಿನ ಕೂದಲಿಗೆ ಇಲ್ಲಿದೆ ಸುಲಭದ ಪರಿಹಾರ!

Please login to join discussion

Recent News

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ
Top Story

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

by ಪ್ರತಿಧ್ವನಿ
November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
Top Story

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

by ಪ್ರತಿಧ್ವನಿ
November 12, 2025
ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ
Top Story

ಸಂತೋಷ್‌ ಲಾಡ್‌ V/S ವಿಜಯೇಂದ್ರ ವಾಕ್ಸಮರ: ಬಿಜೆಪಿ ನಾಯಕರ ವಿರುದ್ಧ ಗುಡುಗಿದ ಕಾಂಗ್ರೆಸ್‌ ಸಚಿವ

by ಪ್ರತಿಧ್ವನಿ
November 12, 2025
ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ
Top Story

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

by ಪ್ರತಿಧ್ವನಿ
November 12, 2025
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ
Top Story

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹ: ಕೇಂದ್ರಕ್ಕೆ ಪತ್ರ ಬರೆದ ಕಾಂಗ್ರೆಸ್ ಶಾಸಕ

by ಪ್ರತಿಧ್ವನಿ
November 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

ಕರ್ನಾಟಕ ಕ್ವಾಂಟಮ್‌ ಎಕೋಸಿಸ್ಟಮ್‌ ಮ್ಯಾಪ್‌ ತಯಾರಿಸಿ: ಅಧಿಕಾರಿಗಳಿಗೆ ಸಚಿವ ಎನ್‌.ಎಸ್‌ ಭೋಸರಾಜು ಸೂಚನೆ

November 12, 2025
ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಧರ್ಮಸ್ಥಳ ಕೇಸ್ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

November 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada