ಮೈಸೂರು ವಿಶ್ವವಿದ್ಯಾಲಯದ ನೂತನ ಕುಲಸಚಿವೆಯಾಗಿ ವಿ.ಆರ್.ಶೈಲಜಾ ಅಧಿಕಾರ ಸ್ವೀಕರಿಸಿದ್ದಾರೆ.
1998ರಲ್ಲಿ ಬಿ.ಎ ಪದವಿ, 1999ರಲ್ಲಿ ಬಿಎಡ್, 2001ರಲ್ಲಿ ಸ್ನಾತಕೋತ್ತರ ಪದವಿಯ ಮೈಸೂರು ವಿವಿ ವಿದ್ಯಾರ್ಥಿಯಾಗಿ ನಾನಾ ವಿಭಾಗಗಳಲ್ಲಿ ಚಿನ್ನದ ಪದಕ ಹಾಗೂ ನಗದು ಬಹುಮಾನಕ್ಕೆ ಭಾಜನರಾಗಿದ್ದ ಕೆಎಎಎಸ್ ಅಧಿಕಾರಿ ವಿ.ಆರ್.ಶೈಲಜಾ ಈಗ ತಾವು ಓದಿದ ವಿಶ್ವವಿದ್ಯಾಲಯದ ಕುಲಸಚಿವೆಯಾಗಿ ನೇಮಕಗೊಂಡಿದ್ದಾರೆ.
2006ರಲ್ಲಿ ಪ್ರೊಬೇಷನರಿ ಕೆಎಎಸ್ ಅಧಿಕಾರಿಯಾಗಿ ವೃತ್ತಿ ಆರಂಭಿಸಿದ ಶೈಲಜಾ ಮೈಸೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿಯೂ ಕೆಲಸ ಮಾಡಿದ್ದಾರೆ. ರಾಮನಗರದಲ್ಲಿ ಡಿಯುಡಿಸಿ ವಿಭಾಗದ ಯೋಜನಾ ನಿರ್ದೇಶಕಿಯಾಗಿ, ಕಾವೇರಿ ನೀರಾವರಿ ನಿಗಮದ ಮುಖ್ಯ ಆಡಳಿತಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪಾಂಡವಪುರ ಉಪವಿಭಾಗದ ಹೆಚ್ಚುವರಿ ಆಯುಕ್ತರಾಗಿಯೂ, ಮಂಡ್ಯ ಜಿಲ್ಲೆಯ ಎಡಿಸಿಯಾಗಿ ಕಾರ್ಯನಿರ್ವಹಿಸಿದ್ದಾರೆ.