ಭಾರತದ ಕಲಾತ್ಮಕ ಬ್ಯಾಟ್ಸ್ ಮನ್ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ತಾತ್ಕಾಲಿಕ ಕೋಚ್ ಆಗಿ ನೇಮಕ ಮಾಡಲಾಗಿದೆ.
ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೋವಿಡ್ ಸೋಂಕಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ನೇಮಿಸಿ ಬಿಸಿಸಿಐ ಆದೇಶ ಹೊರಡಿಸಿದೆ.