ಮೇಕೆದಾಟು ಯೋಜನೆ (Mekedatu padayatra) ಜಾರಿಗೆ ಆಗ್ರಹಿಸಿ ಇಂದಿನಿಂದ ಕಾಂಗ್ರೆಸ್ ಪಕ್ಷ (Congress Party) 2ನೇ ಹಂತದ ಪಾದಯಾತ್ರೆ (padayatra 2.0) ಆರಂಭಿಸಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal), ಹಿಜಾಬ್ (Hijab), ಶಿವಮೊಗ್ಗ ಹತ್ಯೆ (Shivamogga Murder) ಮರೆಮಾಚಲು ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಉದ್ಯೋಗ ಇಲ್ಲ. ಚುನಾವಣೆ ಸಲುವಾಗಿ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಚುನಾವಣೆಯ ಸಾಹಸವಾಗಿದೆ. ಈ ಹಿಂದೆ ಮೈತ್ರಿ ಸರ್ಕಾರದಲ್ಲಿ ಡಿಕೆಶಿ, ಎಂಬಿಪಿ ನೀರಾವರಿ ಸಚಿವರಿದ್ದರು. ಆವಾಗ ಯಾಕೆ ಮೇಕೆದಾಟು ಯೋಜನೆ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.