• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಕಿಡಿಕಾರಿದ ವಕ್ಫ್ ಬೋರ್ಡ್

ಕರ್ಣ by ಕರ್ಣ
August 7, 2022
in ಕರ್ನಾಟಕ, ರಾಜಕೀಯ
0
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಕಿಡಿಕಾರಿದ ವಕ್ಫ್ ಬೋರ್ಡ್
Share on WhatsAppShare on FacebookShare on Telegram

ಬಿಬಿಎಂಪಿ ಮೇಲೆ ತೂಗು ಕತ್ತಿಯಂತೆ ತೂಗುತ್ತಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆ ಮುಂದಿದೆ. ವಕ್ಫ್ ಬೋರ್ಡ್ ಖಾತ ಇಂಡೀಕರಣಕ್ಕೆ ಕೋರಿ ಸಲ್ಲಿಸಿದ ಅರ್ಜಿ ಬಿಬಿಎಂಪಿ ವಜಾಗೊಳಿಸಿ, ಇದು ವಕ್ಫ್ ಬೋರ್ಡ್ ಆಸ್ತಿಯೂ ಅಲ್ಲ, ಬಿಬಿಎಂಪಿಯದ್ದೂ ಅಲ್ಲ ಎಂದು ಹೇಳಿ ವಿವಾದಕ್ಕೆ ರೋಚಕ ಟ್ವಿಸ್ಟ್ ನೀಡಿದೆ. 

ADVERTISEMENT

ಕಳೆದ ಮೂರು ತಿಂಗಳಿನಿಂದ ವಿವಾದಕ್ಕೆ ಕಾರಣವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನ ಪ್ರಕರಣಕ್ಕೆ ಇದೀಗ ರೋಚಕ‌ ಟ್ವಿಸ್ಟ್ ಸಿಕ್ಕಿದೆ. ವಕ್ಫ್ ಬೋರ್ಡ್ ಖಾತ ಇಂಡೀಕರಣಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಬಿಬಿಎಂಪಿ ವಜಾಗೊಳಿಸಿ, ವಿವಾದಿತ ಸ್ವತ್ತು ಕಂದಾಯ ಇಲಾಖೆಯ ಅಧೀನಕ್ಕೆ ನೀಡಿದೆ. ಅಲ್ಲದೆ ಈ ಬಗ್ಗೆ ಆದೇಶ ಪತ್ರ ಹೊರಡಿಸಿದ್ದು, ಬಿಬಿಎಂಪಿ ನಿಯಮ 2020 ಕಲಂ 149 ಪ್ರಕಾರ ವಕ್ಫ್ ಬೋರ್ಡ್ ದಾಖಲೆ ಸಲ್ಲಿದ ಹಿನ್ನೆಲೆ ಖಾತ ಇಂಡೀಕರಣ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಲಾಗಿದೆ. ಅಲ್ಲದೆ ಈ ಪ್ರಸ್ತುತ ಮೈದಾನವನ್ನು ಕಂದಾಯ ಇಲಾಖೆಗೆ ನೀಡಿದ್ದು, ವಕ್ಫ್ ಬೋರ್ಡ್ ಮುಂದಕ್ಕೆ ದಾಖಲೆ ಸಲ್ಲಿಸಿ ವ್ಯವಹರಿಸಲು ಈ‌ ಆದೇಶ ಅಡ್ಡಿಯಾಗುವುದಿಲ್ಲ ಎಂದೂ ಹೇಳಿದೆ.

ಬಿಬಿಎಂಪಿಯ ಆದೇಶ ನ್ಯಾಯಾಂಗ ನಿಂದನೆ : ವಕ್ಫ್ ಬೋರ್ಡ್ ಕಿಡಿ

ಇದು ಕಂದಾಯ ಇಲಾಖೆಯ ಆಸ್ತಿ ಎಂದು‌ ಬಿಬಿಎಂಪಿ ಘೋಷಿಸಿದ ಬಿಬಿಎಂಪಿ ನಡೆಗೆ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸ‌ಅದಿ ಕಿಡಿ ಕಾರಿದ್ದಾರೆ. ಸುಪ್ರೀಂ ಕೋರ್ಟ್ 1965ರಲ್ಲಿ ಮೈದಾನ ವಕ್ಫ್ ಬೋರ್ಡ್ ದು ಅಂತ ತೀರ್ಪು ಕೊಟ್ಟಿದೆ. ಈಗ ಬಿಬಿಎಂಪಿ ಅವರದ್ದೇ ಒಂದು ಆದೇಶ ಹೊರಡಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದೆ. ನಾವು ಇದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡುತ್ತೇವೆ. ಬಿಬಿಎಂಪಿಯೇ ಒಂದು ಘಟ್ಟದಲ್ಲಿ ಇದು ನಮ್ಮ ಆಸ್ತಿಯಲ್ಲ ಎಂದು ಹೇಳಿತ್ತು. ಈಗ ರಾಜ್ಯ ಕಂದಾಯ ಇಲಾಖೆಗೆ ಎಂದು ಆದೇಶ ಮಾಡಿದೆ. ಈ ಬಗ್ಗೆ ನಾವು ಕಾನೂನು ತಜ್ಞರಲ್ಲಿ ಚರ್ಚೆ ಮಾಡಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಶಾಫಿ ಸ‌ಅದಿ‌ ತಿಳಿಸಿದ್ದಾರೆ.

ಈ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ವಿವಾದ ಒಂದು ಹಂತಕ್ಕೆ ತಾರ್ಕಿಕ ಅಂತ್ಯ ಕಂಡಿದೆ. ಅತ್ತ ಬಿಬಿಎಂಪಿ ಇದು ವಕ್ಫ್ ಬೋರ್ಡ್ ಆಸ್ತಿ ಅಲ್ಲ ಎಂದಿದ್ದೇ ತಡ ಇತ್ತ ಚಾಮರಾಜಪೇಟೆ ನಾಗರೀಕ ಒಕ್ಕೂಟ ಇದು ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿಕೊಂಡಿದೆ. ಈ ಬಗ್ಗೆ ಮಾತನಾಡಿದ ಚಾಮರಾಜಪೇಟೆ ನಾಗರೀಕ ಒಕ್ಕೂಟದ ಮುಖಂಡ ಲಹರಿ ವೇಲು, ಇವತ್ತು ನಮಗೆ ಹಬ್ಬದ ಸಂಭ್ರಮ. ಸತತವಾಗಿ 16 ವರ್ಷಗಳಿಂದ ಈ ಹೋರಾಟ ಮಾಡಿದ್ದೇವೆ. ಗಣೇಶೋತ್ಸವ, ಧ್ವಜಾರೋಹಣ ಮಾಡೋಕೆ‌ ಬಹಳ ಹೋರಾಟ ಮಾಡಿದ್ದೇವೆ. ಸತ್ಯ ಮೇವಾ ಜಯಹೇ… ಧರ್ಮೋ ರಕ್ಷಿತ ರಕ್ಷಿತಃ.. ಗೆಲವು ನಮ್ಮದಾಗಿದೆ. ಬಿಬಿಎಂಪಿ ಇದು ಕಂದಾಯ ಇಲಾಖೆದ್ದು ಅಂತ ಆದೇಶ ಮಾಡಿರೋದು ಸ್ವಾಗತಾರ್ಹ ಎಂದರು. 

ಮೈದಾನದ ಸುತ್ತ ಓಡಾಡಿ ಸಿಹಿ ಹಂಚಿ ಸಂಭ್ರಮಿಸಿದ ಚಾಮರಾಜಪೇಟೆ ನಾಗರೀಕ ಒಕ್ಕೂಟ

ಬಿಬಿಎಂಪಿ ಆದೇಶ ನೀಡ್ತಿದ್ದಂತೆ ಮೈದಾನಕ್ಕೆ ಖಾಕಿ ಸರ್ಪಗಾವಲು ಏರ್ಪಡಿಸಲಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣೆಯ ಪೊಲೀಸರು, ಹೋಮ್ ಗಾರ್ಡ್ ಗಳನ್ನು ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿಯೋಜನೆ ಮಾಡಲಾಗಿದೆ. ಇದೇ ವೇಳೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ವೇದಿಕಯ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಅಲ್ಲದೆ ಮೈದಾನದ ಪಕ್ಕದಲ್ಲೇ ಇರುವ ಮಲೆಮಹಾದೇಶ್ವರ ದೇವರಿಗೆ 101 ತೆಂಗಿನಕಾಯಿ ಒಡೆದು ಹರಕೆ ತೀರಿಸಿಕೊಂಡರು. ಬಳಿಕ ಚಾಮರಾಜಪೇಟೆ ನಾಗರೀಕ ಒಕ್ಕೂಟ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಬಿಬಿಎಂಪಿಯ ನಿರ್ಧಾರವನ್ನು ಸಂಭ್ರಮಿಸಿದರು.

ಒಟ್ಟಾರೆ ಹಲವು ದಿನಗಳಿಂದ ವಿವಾದಕ್ಕೆ ಕಾರಣವಾಗಿ ಜನರ ನೆಮ್ಮದಿ ಕೆಡಿಸಿದ್ದ ಈದ್ಗಾ ಮೈದಾನ ಇದೀಗ ಕಂದಾಯ ಇಲಾಖೆ ಕೈ ಸೇರಿದೆ. ಎಂದರೆ ಇನ್ನೇನಿದ್ದರೂ ಸರ್ಕಾರ ಈ ಬಗ್ಗೆ ತೀರ್ಮಾನ ಪ್ರಕಟಿಸಬೇಕಿದೆ. ಈ ಮೂಲಕ ತನ್ನ ಹೆಗಲ ಮೇಲಿದ್ದ ಹೊರೆಯನ್ನು ಬಿಬಿಎಂಪಿ ಅಧಿಕಾರಿಗಳು ಕೆಳಗಿಳಿಸಿದ್ದಾರೆ. ಜೊತೆಗೆ ಆಗಸ್ಟ್ 15ಕ್ಕೆ ಧ್ವಜಾರೋಹಣ ಮಾಡಲು ಅನುಮತಿ ಕೊಟ್ಟರೂ‌ ಕೊಡದಿದ್ದರೂ ನಾವು ತ್ರಿವರ್ಣ ಧ್ವಜ ಹಾರಿಸೇ ತೀರುತ್ತೇವೆ ಎಂಬ ಶಪಥ ಚಾಮರಾಜಪೇಟೆ ನಾಗರೀಕ ಒಕ್ಕೂಟ ಮಾಡಿಕೊಂಡಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೈಸೂರು; ನಾಡಹಬ್ಬಕ್ಕೆ ಮುನ್ನುಡಿ ಬರೆದ ಗಜಪಡೆ

Next Post

ಕಾಮನ್‌ವೆಲ್ತ್‌ ; ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚು ಗೆದ್ದ ಭಾರತದ ಮಹಿಳಾ ಹಾಕಿ ತಂಡ

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಕಾಮನ್‌ವೆಲ್ತ್‌ ; ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚು ಗೆದ್ದ ಭಾರತದ ಮಹಿಳಾ ಹಾಕಿ ತಂಡ

ಕಾಮನ್‌ವೆಲ್ತ್‌ ; ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಕಂಚು ಗೆದ್ದ ಭಾರತದ ಮಹಿಳಾ ಹಾಕಿ ತಂಡ

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada