• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story
0
ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Share on WhatsAppShare on FacebookShare on Telegram

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು ನಿರ್ಮಲ್ ಕುಮಾರ್ ಅವರನ್ನು ‘ಸಂಘಿ ಸಚಿವ’ ಎಂದು ಕರೆದಿದ್ದಕ್ಕೆ ಪ್ರತಿಯಾಗಿ, ನಿರ್ಮಲ್ ಕುಮಾರ್ ‘ಬಾತ್ರೂಮ್ ಲೀಡರ್’ ಎಂದು ವ್ಯಂಗ್ಯವಾಡಿದರು. ಬಳಿಕ ಉದಯನಿಧಿ ಸ್ಟಾಲಿನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು.

ADVERTISEMENT
DK Shivakumar : ಯಾವುದು ಡ್ಯಾಂ ಭರ್ತಿ ಆಗಿಲ್ಲ : ಸಿಎಂ ಡಿಕೆ ಶಿವಕುಮಾರ್‌..! #KRS #congress #pratidhvani

ನಟಿ ತ್ರಿಷಾ ಕುರಿತು ಈ ಹಿಂದೆ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆಯಲು ಅವರ ನಿವಾಸಕ್ಕೆ ತೆರಳಿದ್ದ ಘಟನೆಯನ್ನು ನಿರ್ಮಲ್ ಕುಮಾರ್ ಪ್ರಸ್ತಾಪಿಸಿ ‘ಬಾತ್ರೂಮ್ ಲೀಡರ್’ ಎಂಬ ಟೀಕೆ ಮಾಡಿದರು. ಪೊಲೀಸರು ಬಂದ ಸಂದರ್ಭದಲ್ಲಿ ಉದಯನಿಧಿ ಅವರ ಪತ್ನಿ ಕೃತಿಗಾ, ಅವರು ಶೌಚಾಲಯದಲ್ಲಿದ್ದಾರೆ, ಸ್ವಲ್ಪ ಸಮಯ ನೀಡಿ ಎಂದು ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

D. K. Shivakumar : ವಿಧಾನಸೌಧದಲ್ಲಿ ಮಾಧ್ಯಮ ಕಾರ್ಯದರ್ಶಿಗಳ ಕಚೇರಿಯನ್ನು ಉದ್ಘಾಟಿಸಿ ಡಿಕೆಶಿ..!

ತಮಿಳುನಾಡು ಶಾಸಕರಿಗೆ ಹೊಸ ವಾಹನ ಸೇರಿದಂತೆ ಹಲವು ಸೌಲಭ್ಯಗಳನ್ನು ಘೋಷಿಸಿದ್ದಕ್ಕೆ ಧನ್ಯವಾದ ಸಲ್ಲಿಸುವ ವೇಳೆ ಟಿವಿಕೆ ಶಾಸಕಿ ಕೆ. ಸಿಂಧು ಅವರು ಎಂಜಿಆರ್ ಅವರ ಜನಪ್ರಿಯ ಹಾಡನ್ನು ಹಾಡಿದ್ದರು. ಇದನ್ನು ಉಲ್ಲೇಖಿಸಿದ ಉದಯನಿಧಿ ಸ್ಟಾಲಿನ್, ವಿಧಾನಸಭೆಯ ಕಲಾಪವನ್ನು ‘ಸೂಪರ್ ಸಿಂಗರ್’ ಕಾರ್ಯಕ್ರಮದಂತೆ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಗುರಿಯಾಗಿಸಿಕೊಂಡು ಉದಯನಿಧಿ ಸ್ಟಾಲಿನ್ ವಾಗ್ದಾಳಿ ನಡೆಸಿದರು. ಹಿಂದಿನ ಡಿಎಂಕೆ ಸರ್ಕಾರದ ಭ್ರಷ್ಟಾಚಾರದ ಕಡತಗಳು ತಮ್ಮ ಮೇಜಿನ ಮೇಲಿವೆ ಎಂದು ಮುಖ್ಯಮಂತ್ರಿ ಹೇಳುತ್ತಿದ್ದರೆ, ಸಿನಿಮಾದ ಪಂಚ್ ಡೈಲಾಗ್‌ಗಳನ್ನು ಹೇಳುವುದನ್ನು ಬಿಟ್ಟು ಆ ದಾಖಲೆಗಳನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.‘ನಿಮ್ಮ ಬಳಿ ನಿಜವಾದ ಸಾಕ್ಷ್ಯಗಳಿದ್ದರೆ ತಕ್ಷಣ ಕ್ರಮ ಕೈಗೊಳ್ಳಿ. ಡಿಎಂಕೆ ಅದಕ್ಕೆ ಅಡ್ಡಿಪಡಿಸುವುದಿಲ್ಲ’ ಎಂದು ಉದಯನಿಧಿ ಹೇಳಿದ್ದಾರೆ.

B. Sriramulu : ಕಾಂಗ್ರೆಸ್ ಪಕ್ಷಕ್ಕೆ ಮಾನ ಮರ್ಯಾದೆ ಅನ್ನೋದೇ ಇಲ್ಲ..

ರಸ್ತೆ ಕಾಮಗಾರಿಗಳಲ್ಲಿನ ಅಕ್ರಮಗಳ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಡಿಎಂಕೆ ಸರ್ಕಾರದ ಭ್ರಷ್ಟಾಚಾರದ ಕಡತಗಳನ್ನು ಮೂರು ಇಲಾಖೆಗಳು ಪರಿಶೀಲಿಸಿದ್ದು, ಅವು ತಮ್ಮ ಮೇಜಿನ ಮೇಲಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಉದಯನಿಧಿ ಸ್ಟಾಲಿನ್ ಈ ಸವಾಲು ಹಾಕಿದ್ದಾರೆ.

ಇದಲ್ಲದೆ, ವಿಧಾನಸಭೆಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ ಎಂದು ಸಚಿವ ಆಧವ್ ಅರ್ಜುನ ಅವರನ್ನು ಉದಯನಿಧಿ ಪ್ರಶ್ನಿಸಿದರು. ಸಭಾಧ್ಯಕ್ಷರು ಅಧಿಕೃತ ದಾಖಲೆಯಿಂದ ತೆಗೆದುಹಾಕಿದ ಕೆಲವು ಪದಗಳು ಹಾಗೂ ಆಯ್ದ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.

 

 

Tags: Bathroom LeaderC T R Nirmal KumarDMKJoseph Vijaypolitical debateTamil Nadu Assemblytamil nadu newstamil nadu politicsTrisha ControversyTVKUdhayanidhi StalinUdhayanidhi Stalin News
Previous Post

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

Related Posts

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ
Top Story

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

by ಪ್ರತಿಧ್ವನಿ
August 21, 2026
0

ನವದೆಹಲಿ: ದೇಶದಲ್ಲಿ ಸಕ್ಕರೆ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ ನೀಡಲು ಕೇಂದ್ರ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹಬ್ಬದ ಋತುವಿನಲ್ಲಿ ಸಕ್ಕರೆ ಕೊರತೆಯಾಗದಂತೆ...

Read moreDetails
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

August 21, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada