• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೇಸಿಗೆಯ ಆರಂಭದಲ್ಲೇ ನೀರಿಗಾಗಿ ಹಾಹಾಕಾರ : ಕೊಳವೆ ಬಾವಿಯಿಂದ ಅಂತರ್ಜಲ ಮಟ್ಟ ಕುಸಿತ!

ಕರ್ಣ by ಕರ್ಣ
February 21, 2022
in ಕರ್ನಾಟಕ
0
ಬೇಸಿಗೆಯ ಆರಂಭದಲ್ಲೇ ನೀರಿಗಾಗಿ ಹಾಹಾಕಾರ : ಕೊಳವೆ ಬಾವಿಯಿಂದ ಅಂತರ್ಜಲ ಮಟ್ಟ ಕುಸಿತ!
Share on WhatsAppShare on FacebookShare on Telegram

ಬೇಸಿಗೆಯ ಬಿಸಿ ಬೇಗೆಗೆ ಭೂಮಿಯೇ ಬಾಯಿ ಬಿಟ್ಟು ನಿಲ್ಲುತ್ತೆ. ನಗರದಲ್ಲಿ ಬೇಸಿಗೆ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗಿದೆ. ಹೀಗಾಗಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುವ ಆತಂಕ ಕಾಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಲಕ್ಷಾಮ ಉಂಟಾಗುವ ಆತಂಕ ಎದುರಾಗಿದೆ. ಬೇಸಿಗೆ ಕಾಲ‌ದ ಆರಂಭದಲ್ಲೇ ಈ ಬಾರಿ ಅಂತರ್ಜಲದ ಪ್ರಮಾಣ ಇಳಿಕೆಯಾಗಿದೆ.‌

ADVERTISEMENT

ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟ ಇಳಿಕೆ : ಕೊಳವೆ ಬಾವಿಗಿಲ್ಲ ಅನುಮತಿ!

ಬೇಸಿಗೆ ಬಂದರೆ ಸಾಕು ಹನಿ ಜನಿ ನೀರಿಗೂ ಹಾಹಾಕಾರ ಶುರುವಾಗುತ್ತೆ. ಕಾವೇರಿ ನೀರು ಬರಲ್ಲ ಅಂತ ಜನ ಬೋರವೆಲ್ ಮೊರೆ ಹೋಗುತ್ತಾರೆ. ಹಾಗಾಗಿಯೇ ಅಂತರ್ಜಲ ಮಟ್ಟ ಕುಸಿತ ಕಾಣುತ್ತೆ. ನಗರದಲ್ಲಿ ಬೇಸಿಗೆ ಮುನ್ನವೇ ನೂರಾರು ಕೊಳವೆ ಬಾವಿಗಳು ಬತ್ತಿ ಹೋಗಿವೆ. 200ಕ್ಕೂ ಹೆಚ್ಚು ಕೊಳವೆ ಬಾವಿಗಳು ಈಗಾಗಲೇ ಬತ್ತಿದ್ದು, ಇನ್ನೂ ನೂರಾರು ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕುಸಿಯಲು ಆರಂಭಿಸಿವೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಲಮಂಡಳಿ ಅಂತರ್ಜಲ ಗುಣಮಟ್ಟ ಏರಿಸುವ ಹಿತದೃಷ್ಟಿಯಿಂದ ಕಾವೇರಿ ನೀರು ಪೂರೈಕೆಯಾಗ್ತಿರುವ ಪ್ರದೇಶದಲ್ಲಿ ಕೊಳವೆಬಾವಿ ಕೊರೆಯುವದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಹುತೇಕರು ಬೋರ್ ವೆಲ್ ಮೊರೆ ಹೋಗುತ್ತಿದ್ದಾರೆ. ಆದರೆ ಪ್ರತಿ ಬೋರ್‌ ವೆಲ್‌ಗೂ ಇಂತಿಷ್ಟು ಅಂತರವಿರಬೇಕು ಎನ್ನುವ ನಿಯಮಗಳಿವೆ. ಆದರೆ ಅದೆಲ್ಲವನ್ನೂ ಗಾಳಿಗೆ ತೂರಿ ಅಕ್ಕ ಪಕ್ಕದಲ್ಲೇ ಬೋರ್‌ ವೆಲ್ ಕೊರೆಯಲಾಗುತ್ತಿದೆ. ಕೊಳವೆ ಬಾವಿ ಕೊರೆಯಲು ಅವಕಾಶ ಕೋರಿ ಎಷ್ಟೇ ಅರ್ಜಿ ಬಂದರೂ, ಖುದ್ದು ಸ್ಥಳ ಪರಿಶೀಲನೆ ನಡೆಸಿ ಆ ಪ್ರದೇಶದಲ್ಲಿ ಕಾವೇರಿ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿದ್ದರೆ ಅವಕಾಶ ನೀಡದಿರಲು ಜಲಮಂಡಳಿ ತೀರ್ಮಾನಿಸಿದೆ. ಈ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಯೋಜನೆ ಹಾಕಿಕೊಂಡಿದೆ.

ಬೆಂಗೂರಿನಲ್ಲಿದೆ 4 ಲಕ್ಷಕ್ಕೂ ಅಧಿಕ ಕೊಳವೆ ಬಾವಿ!

ನಗರದಲ್ಲಿ ಸುಮಾರು 4 ಲಕ್ಷದಷ್ಟು ಕೊಳವೆ ಬಾವಿಗಳಿದ್ದು, ಇದರಲ್ಲಿ ಜಲಮಂಡಳಿಗೆ ಸೇರಿದ ಸುಮಾರು 9,300 ಸಾರ್ವಜನಿಕ ಕೊಳವೆ ಬಾವಿಗಳು ಮತ್ತು ಬಿಬಿಎಂಪಿಗೆ ಸೇರಿದ 1200ಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇದೀಗ ಹೊಸದಾಗಿ ಕೊರೆಯುವ ಬೋರ್ ವೆಲ್ ಗಳಿಗೆ ಬೇಸಿಗೆ ಮುಗಿಯುವರಿಗೆ ಅನುಮತಿ ನೀಡದಿರಲು ನಿರ್ಧರಿಸಲಾಗಿದೆ. ಯಾವದೇ ಬೋರ್ವೆಲ್ ಅನುಮತಿ ಇಲ್ಲದೆ ಕೊರೆದರೆ ಸೂಕ್ತ ಕ್ರಮ ಕೈಗೊಳ್ಳಲು ಈ ಬಾರಿ ಬೆಂಗಳೂರು ಜಲಮಂಡಳಿ ಮುಂದಾಗಿದೆ.

ಅವೈಜ್ಞಾನಿಕ ಬೋರ್ ವೆಲ್ ಗಳಿಂದ ಜಲಕ್ಷಾಮ!

ಇನ್ನೂ ಅವೈಜ್ಞಾನಿಕವಾಗಿ ಕೊರೆಯುವ ಕೊಳವೆ ಬಾವಿಗಳಿಂದಾಗಿ ಅಂತರ್ಜಲ ಮಟ್ಟ ಮತ್ತಷ್ಟು ಹದಗೆಡಲಿದೆ. ಅಂತರ್ಜಲ ಸುರಕ್ಷತೆ ದೃಷ್ಟಿಯಿಂದ ಈ ಬಾರಿಯ ಬೇಸಿಗೆ ಬರುವ ಮೊದಲೇ ಜಲಕ್ಷಾಮಕ್ಕೆ BWSSB ಹೊಸ ದಾರಿ ಈ ರೀತಿ‌ ಕಂಡುಕೊಂಡಿದೆ. ನಗರದ ಪ್ರತಿಯೊಬ್ಬ ಗ್ರಾಹಕರಿಗೂ ನೀರು ಸಮರ್ಪಕವಾಗಿ ಪೂರೈಕೆ ಮಾಡುವುದು ಜಲ ಮಂಡಳಿ ಜವಾಬ್ದಾರಿಯಾಗಿದೆ. ಇಲ್ಲವಾದರೆ ಗ್ರಾಹಕರು ಮಾತ್ರ ನೀರು ಇಲ್ಲದೆ ಪರಿತಪ್ಪಿಸಬೇಕಾಗುತ್ತೆ. ಇನ್ನು‌ ಹೀಗೆ ಮುಂದುವರೆದರೆ ದುಬಾರಿ ಬೆಲೆ ಕೊಟ್ಟರೂ ನೀರಿಗಾಗಿ ಪರದಾಡುವ ಸ್ಥಿತಿ ಎದುರಾದರೂ ಅಚ್ಚರಿಯಿಲ್ಲ.

Tags: ಅತರ್ಜಲ ಮಟ್ಟಕೊಳವೆ ಬಾವಿಜಲಮಂಡಳಿ ಅಂತರ್ಜಲನೀರಿಗಾಗಿ ಹಾಹಾಕಾರಬೇಸಿಗೆಬೋರವೆಲ್ ಮೊರೆ
Previous Post

15-18 ವರ್ಷ ವಯಸ್ಸಿನ ಮಕ್ಕಳಿಗೆ ತುರ್ತು ಬಳಕೆಗಾಗಿ Corbevax ಲಸಿಕೆ ಅನುಮೋದನೆ

Next Post

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

ಭರ್ಜರಿ ಜಯದೊಂದಿಗೆ ಸೆಮಿಫೈನಲ್ಸ್ ಗೆ ಎಂಟ್ರಿ ಕೊಟ್ಟ ಬೆಂಗಳೂರು ಬುಲ್ಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada