• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಜೊತೆ ನಾವಿದ್ದೇವೆ, ರಾಜೀನಾಮೆ ಕೊಡಲು ಬಿಡಲ್ಲ; ಜನಾಂದೋಲನ ಸಭೆಯಲ್ಲಿ ಮೊಳಗಿದ ಧ್ವನಿ

ಪ್ರತಿಧ್ವನಿ by ಪ್ರತಿಧ್ವನಿ
August 9, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸಿಎಂ ಜೊತೆ ನಾವಿದ್ದೇವೆ, ರಾಜೀನಾಮೆ ಕೊಡಲು ಬಿಡಲ್ಲ; ಜನಾಂದೋಲನ ಸಭೆಯಲ್ಲಿ ಮೊಳಗಿದ ಧ್ವನಿ
Share on WhatsAppShare on FacebookShare on Telegram

ಮೈಸೂರು ನಗರಾಭಿವೃದ್ಧಿ ಪಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌ ಮೈತ್ರಿಯಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ‘ಮೈಸೂರ ಚಲೋ’ ಪಾದಯಾತ್ರೆಗೆ ಕಾಂಗ್ರೆಸ್‌ ನಾಯಕರೆಲ್ಲರೂ ಒಕ್ಕೊರಲಿನಿಂದ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಂಡು ಕೌಂಟರ್‌ ಕೊಟ್ಟಿದ್ದಾರೆ.

ADVERTISEMENT

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಕಾಂಗ್ರೆಸ್‌ ಶಕ್ತಿ ಪ್ರದರ್ಶಿಸಲು ಮೈಸೂರಿನಲ್ಲಿ ಶುಕ್ರವಾರ (ಆ.9) ಆಯೋಜಿಸಿದ್ದ ಜನಾಂದೋಲನ ಸಭೆಯಲ್ಲಿ ಕಾಂಗ್ರೆಸ್‌ ನಾಯಕರು, “ಸಿಎಂ ಸಿದ್ದರಾಮಯ್ಯ ಜೊತೆ ನಿಂತಿದ್ದೇವೆ, ಅವರ ರಾಜೀನಾಮೆ ಕೊಡಲು ಬಿಡುವುದಿಲ್ಲ” ಎಂಬ ಸಂದೇಶ ಸಾರಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಉಸ್ತುವಾರಿ ಸಚಿವ ಕೆ ಎಚ್‌ ಮುನಿಯಪ್ಪ ಮೊದಲಿಗೆ ಮಾತನಾಡಿ, “ಸಿದ್ದರಾಮಯ್ಯ ಅವರ ಕೈ ಬಲಪಡಿಸುತ್ತೇವೆ. ಅವರ ಪರ ನಿಲ್ಲುತ್ತೇವೆ. ಅವರು ರಾಜೀನಾಮೆ‌ ಕೊಡಲು ನಾವು ಬಿಡುವುದಿಲ್ಲ” ಎಂದು ವಾಗ್ದಾನ ಮಾಡಿದರು.“ಬಜೆಟ್‌ನಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ.ಇದೀಗ ಬಿಜೆಪಿಯೇತರ ಸರ್ಕಾರಗಳು ಇರುವ ರಾಜ್ಯಗಳಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡಲಾಗುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಕಿಡಿಕಾರಿದರು.“ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಯಕತ್ವದಲ್ಲಿ ಜನಪ್ರಿಯ ಕಾರ್ಯಕ್ರಮ ಅನುಷ್ಠಾನಕ್ಕೆ ತರಲಾಗುತ್ತಿದೆ.

ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ಸಿಲುಕಿಸುವ ಯತ್ನ ನಡೆಸಲಾಗುತ್ತಿದೆ. ಶೋಷಿತರು, ಮಹಿಳೆಯರು ಹಾಗೂ ರೈತರ ಪರ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ” ಎಂದು ಹೇಳಿದರು.ಕಾಂಗ್ರೆಸ್ ಮುಖಂಡ ಬಿ ಕೆ ಹರಿಪ್ರಸಾದ್ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, “ಪ್ರಪಂಚದಲ್ಲೇ ಕುಖ್ಯಾತಿ ಪಡೆದಿರುವ ಯಡಿಯೂರಪ್ಪ ಅವರು ಆಪರೇಷನ್‌ ಕಮಲದ ಮೂಲಕ ಅಧಿಕಾರ ಪಡೆದುಕೊಂಡಿದ್ದರು.

ಈಗ ಮರಿ ಯಡಿಯೂರಪ್ಪ ಅಪ್ಪನನ್ನು ಹಾಳು ಮಾಡಿದರು. ಭ್ರಷ್ಟಾಚಾರ ಮಾಡಿದ್ದಾರೆ.ಸಿಎಂ ಸಹಿಯನ್ನು ಮಗನೇ ಮಾಡುತ್ತಿದ್ದನು. ಇದರ ಬಗ್ಗೆ ತನಿಖೆ ಆಗಬೇಕು.ನಕಲಿ ಸಹಿ ಮಾಡಲಾಗಿದೆ. ಹಗರಣದ ಪಿತಾಮಹ ಯಡಿಯೂರಪ್ಪ ಹಾಗೂ ಅವರ ಮಗ ವಿಜಯೇಂದ್ರ” ಎಂದು ಹರಿಹಾಯ್ದರು.“83 ವರ್ಷದ ಹಿಂದೆ ಮಹಾತ್ಮಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು.ಭಾರತ ಬಿಟ್ಟು ತೊಲಗಿ ಎಂಬ ಹೋರಾಟ ಮಾಡಿದರು.

ಇದೊಂದು ಪವಿತ್ರವಾದ ದಿನ.ಬಿಜೆಪಿ ವಿರುದ್ಧ ನಮ್ಮ ಹೋರಾಟ ಇದಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.ಸಚಿವ ಜಮೀರ್ ಅಹಮದ್ ಮಾತನಾಡಿ,”‘ಕಾಂಗ್ರೆಸ್ ಗ್ಯಾರಂಟಿಗಳನ್ನು ಜಾರಿಗೆ ತಂದಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಮುಡಾ ಪ್ರಕರಣ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಬಿಜೆಪಿ-ಜೆಡಿಎಸ್‌ ಪ್ರಯತ್ನಿಸುತ್ತಿದೆ. ಸಿದ್ದರಾಮಯ್ಯ ಅವರ ಬಾವೈದ ದಾನವಾಗಿ ಕೊಟ್ಟಿರುವ ಜಾಗವನ್ನೇ ಇದೀಗ ವಿವಾದ ಮಾಡಲಾಗಿದೆ.ಬಹುಮತ ಬಂದಿರುವ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಟೀಕಿಸಿದರು.

Tags: CM Siddaramaiah‌Congress PartyDCM DK ShivakumarEnergy Minister KJ GeorgeEnvironment Minister Eshwar Khandre
Previous Post

ಕಾರ್ಪೋರೇಟ್ ಕಂಪನಿಗಳು ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಸಿಎಸ್ ಆರ್ ಹಣ ವಿನಿಯೋಗಿಸಲಿ – ಸಚಿವ ದಿನೇಶ್ ಗುಂಡೂರಾವ್

Next Post

ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

ನನ್ನ ಬಿಡುಗಡೆ ಸರ್ವಾಧಿಕಾರಕ್ಕೆ ಕಪಾಳಮೋಕ್ಷ; ಜೈಲಿನಿಂದ ಹೊರಬಂದ ಮನೀಶ್ ಸಿಸೋಡಿಯಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada