• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಾದಯಾತ್ರೆ ಪಾಲಿಟಿಕ್ಸ್ : ಕಾಂಗ್ರೆಸಿಗೆ ಒಂದು ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
January 6, 2022
in ಇದೀಗ
0
ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?
Share on WhatsAppShare on FacebookShare on Telegram

ಮೇಕೆದಾಟು ಯೋಜನೆಗಾಗಿ ಬೃಹತ್ ಪಾದಯಾತ್ರೆ ರೂಪಿಸಿದ್ದ ಕಾಂಗ್ರೆಸ್ನ ಹತ್ತಿಕ್ಕಲ್ಲೆಂದೇ ರಾಜ್ಯ ಸರ್ಕಾರ ಕರೋನಾ ಕಠಿಣ ಕ್ರಮ ಆದೇಶ ಮಾಡಿದೆ ಎಂದು ವಿಪಕ್ಷಗಳು ಕಿಡಿಕಾರುತ್ತಿದ್ದು ಇದಕ್ಕೆ ಬಿಜೆಪಿ ಮಂತ್ರಿಗಳು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ಗೆ ರಾಜ್ಯದಲ್ಲಿ ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರೆ, ಬೆಂಗಳೂರಲ್ಲೇ ಕರೋನಾ ವೇಗವಾಗಿ ಹಬ್ಬುತ್ತಿದೆ ಹಾಗಾಗಿ ಪಕ್ಷದ ಕಾರ್ಯಕರ್ತರ ಸ್ವಾಸ್ಥ್ಯದ ಹಿತದೃಷ್ಟಿಯಿಂದಾದರೂ ಕೈ ಬಿಡಬೇಕು ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ,, ಸರ್ಕಾರದ ನಿರ್ದೇಶನ ಜಾರಿಯಾಗಿದೆ ಎಲ್ಲರೂ ಪಾಲನೆ ಮಾಡಬೇಕು, ಇಂತಹ ಜೀವನ್ಮರಣ ಹೋರಾಟದ ನಡುವೆಯೂ ನಾನು ರಾಜಕಾರಣದ ದಾರಿ ಹುಡುಕುತ್ತಿದ್ದೇನೆ ಎಂದರೆ ಆ ಪಕ್ಷದ ಮನಸ್ಥಿತಿ ಏನಿದೆ ಎಂದು ಗೊತ್ತಾಗುತ್ತೆ. ಯಾವುದೇ ಪಾದಯಾತ್ರೆ, ಸಭೆ ಸಮಾರಂಭಗಳನ್ನ ನಡೆಸೋ ಹಾಗಿಲ್ಲ ಎಂದು ಹೇಳಲಾಗಿದೆ. ಅವರಿಗೆ ಅಂತ ಪ್ರತ್ಯೇಖವೇನಿಲ್ಲ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸಹ ನಿರ್ದೇಶನ ನೀಡಿದೆ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಎಲ್ಲದನ್ನೂ ರಾಜಕೀಯ ಲೆಕ್ಕಾಚಾರದಲ್ಲಿ ನೋಡಿದರೆ ಸರಿ ಹೋಗದು. ತಜ್ಞರ ವರದಿ ಆಧಾರದ ಮೇಲೆ ಈ ನಿಯಮಾವಳಿಗಳನ್ನ ರೂಪಿಸಲಾಗಿದೆ ಎಂದು ಹೇಳಿದರು.

ಇನ್ನು ಸಚಿವ ಕೆಎಸ್ ಈಶ್ವರಪ್ಪ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅಧಿಕಾರ ನಡೆಸಿ ಅನುಭವ ಇರುವವರು. ಇಂಥವರು ಸರ್ಕಾರಕ್ಕೆ ಕರೋನಾ ತಡೆ ನಿಟ್ಟಿನಲ್ಲಿ ಸಲಹೆ ನೀಡಬೇಕು. ಆದರೆ ಬೆಂಗಳೂರಿನಲ್ಲಿ ಇಷ್ಟೊಂದು ಕರೋನಾ ಉಲ್ಭಣ ಇರೋ ಸಂದರ್ಭದಲ್ಲಿ ಪಾದಯಾತ್ರೆ ಎಲ್ಲಿಂದ ಆರಂಭ ಮಾಡ್ತೀರಿ..? ಆ ಪಾದಯಾತ್ರೆ ಆರಂಭ ಮಾಡುವಾಗ ಎಷ್ಟು ಜನ ಸೇರ್ತಾರೆ, ಆ ಸ್ಥಳಗಳಲ್ಲಿ ಕರೋನಾ ಸೋಂಕು ಹೇಗಿದೆ ಎಂಬುದನ್ನ ತಿಳಿದುಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರೇ ಕರೋನಾ ಸೋಂಕಿಗೆ ಬಲಿಯಾಗ್ತಾರೆ. ಕಾಂಗ್ರೆಸ್ ಮುಖಂಡರು ಇದನ್ನ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಮೇಕೆದಾಟು ಹೋರಾಟಕ್ಕೆ ಖಂಡಿತಾ ನನ್ನ ಬೆಂಬಲ ಇದೆ. ವಿರೋಧ ಪಕ್ಷವೇನು ಹೋರಾಟ ಮಾಡಬೇಕೋ ಅದನ್ನ ಮಾಡಲಿ. ಆದರೆ ಬೆಂಗಳೂರಲ್ಲೇ ಕರೋನಾ ಹೆಚ್ಚುತ್ತಿದೆ ಎಂದು ಸರ್ಕಾರ ಬಿಗಿ ಕಾನೂನುಗಳನ್ನ ತರಲು ಹೊರಟ ಸಂದರ್ಭದಲ್ಲಿ ಈ ತರಹ ರಾಜಕೀಯ ಮಾಡೋದು ಸರಿ ಅಲ್ಲ. ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆ ಕೂತು ಚರ್ಚೆ ಮಾಡಲಿ. ಸಿದ್ದರಾಮಯ್ಯ ಸಿಎಂ ಆಗಿದ್ದವರು ಇದರಲ್ಲಿ ರಾಜಕೀಯ ಮಾಡಬಾರದು ಎಂದಿದ್ದಾರೆ.

ಪಾದಯಾತ್ರೆ ಪಾಲಿಟಿಕ್ಸ್:  ಕಾಂಗ್ರೆಸಿಗೆ ಒಂದು ರೂಲ್ಸ್ ಮಾಡಕ್ಕೆ ಆಗಲ್ಲ- ಆರಗ ಜ್ಞಾನೇಂದ್ರ | Padayatra Politics

ಮುಂದುವರೆದು, ಸಾವಿರಾರು ಜನರು ಮೇಕೆದಾಟು ಪಾದಯಾತ್ರೆಗೆ ತೆರಳಿದರೆ ಆತಂಕ ಖಂಡಿತಾ. ಇದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕರ್ಫ್ಯೂ ಎಂದು ಕರೆಯುವುದು ಬಾಲಿಶ. ಕೊರೋನಾಕ್ಕೆ ಎಲ್ಲರೂ ಬಲಿಯಾಗಿದ್ದಾರೆ. ಹರೆಯದವರೇ ಮೃತರಾಗಿರೋದನ್ನ ಕಂಡರೆ ಕಣ್ಣೀರು ಬರುತ್ತದೆ. ಎಲ್ಲೆಲ್ಲಿ ಉಲ್ಭಣವಾಗುತ್ತಿದೆಯೋ ಅಲ್ಲೆಲ್ಲಾ ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳಬೇಕು. ಈ ಮಾತನ್ನ ಸಿದ್ದರಾಮಯ್ಯಗೂ ಹೇಳ್ತೀನಿ, ಡಿಕೆ ಶಿವಕುಮಾರ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಗಮನಕ್ಕೂ ತರುತ್ತೇನೆ ಎಂದು ಈಶ್ವರಪ್ಪ ಹೇಳಿದರು.

Tags: Congress PartyCovid 19ಆರಗ ಜ್ಞಾನೇಂದ್ರಕರೋನಾಕಾಂಗ್ರೆಸ್ ಪಕ್ಷಕೋವಿಡ್-19ತ್ಯೇಕ ನಿಯಮಪಾದಯಾತ್ರೆ ಪಾಲಿಟಿಕ್ಸ್
Previous Post

ಪ್ರಧಾನಿ ಪ್ರಯಾಣದ ವೇಳೆ ನಿಜಕ್ಕೂ ನಡೆದದ್ದು ಏನು? ಭದ್ರತಾ ಲೋಪವೋ? ರ್‍ಯಾಲಿ ರದ್ದು ಮಾಡಲು ನೆಪವೋ?

Next Post

ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

Related Posts

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…
Top Story

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

by ಪ್ರತಿಧ್ವನಿ
March 4, 2026
0

ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌  ಇಂದು ವಿಕಾಸಸೌಧದಲ್ಲಿ ಕಾರ್ಮಿಕ ಇಲಾಖೆ ಹಾಗೂ ಇತರೆ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

Read moreDetails
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada