• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಪಾದಯಾತ್ರೆ ಪಾಲಿಟಿಕ್ಸ್ : ಕಾಂಗ್ರೆಸಿಗೆ ಒಂದು ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ

ಪ್ರತಿಧ್ವನಿ by ಪ್ರತಿಧ್ವನಿ
January 6, 2022
in ಇದೀಗ
0
ರಾಜಕೀಯ ರ್ಯಾಲಿಗಳಿಗೆ ಬ್ರೇಕ್ ಹಾಕದೆ ಲಾಕ್ ಡೌನ್ ಬೆದರಿಕೆ ಹಾಕುವುದು ಎಷ್ಟು ಸರಿ ಗೃಹ ಸಚಿವರೇ?
Share on WhatsAppShare on FacebookShare on Telegram

ಮೇಕೆದಾಟು ಯೋಜನೆಗಾಗಿ ಬೃಹತ್ ಪಾದಯಾತ್ರೆ ರೂಪಿಸಿದ್ದ ಕಾಂಗ್ರೆಸ್ನ ಹತ್ತಿಕ್ಕಲ್ಲೆಂದೇ ರಾಜ್ಯ ಸರ್ಕಾರ ಕರೋನಾ ಕಠಿಣ ಕ್ರಮ ಆದೇಶ ಮಾಡಿದೆ ಎಂದು ವಿಪಕ್ಷಗಳು ಕಿಡಿಕಾರುತ್ತಿದ್ದು ಇದಕ್ಕೆ ಬಿಜೆಪಿ ಮಂತ್ರಿಗಳು ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ಗೆ ರಾಜ್ಯದಲ್ಲಿ ಪ್ರತ್ಯೇಕ ನಿಯಮ ಮಾಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರೆ, ಬೆಂಗಳೂರಲ್ಲೇ ಕರೋನಾ ವೇಗವಾಗಿ ಹಬ್ಬುತ್ತಿದೆ ಹಾಗಾಗಿ ಪಕ್ಷದ ಕಾರ್ಯಕರ್ತರ ಸ್ವಾಸ್ಥ್ಯದ ಹಿತದೃಷ್ಟಿಯಿಂದಾದರೂ ಕೈ ಬಿಡಬೇಕು ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದ್ದಾರೆ.

ADVERTISEMENT

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ,, ಸರ್ಕಾರದ ನಿರ್ದೇಶನ ಜಾರಿಯಾಗಿದೆ ಎಲ್ಲರೂ ಪಾಲನೆ ಮಾಡಬೇಕು, ಇಂತಹ ಜೀವನ್ಮರಣ ಹೋರಾಟದ ನಡುವೆಯೂ ನಾನು ರಾಜಕಾರಣದ ದಾರಿ ಹುಡುಕುತ್ತಿದ್ದೇನೆ ಎಂದರೆ ಆ ಪಕ್ಷದ ಮನಸ್ಥಿತಿ ಏನಿದೆ ಎಂದು ಗೊತ್ತಾಗುತ್ತೆ. ಯಾವುದೇ ಪಾದಯಾತ್ರೆ, ಸಭೆ ಸಮಾರಂಭಗಳನ್ನ ನಡೆಸೋ ಹಾಗಿಲ್ಲ ಎಂದು ಹೇಳಲಾಗಿದೆ. ಅವರಿಗೆ ಅಂತ ಪ್ರತ್ಯೇಖವೇನಿಲ್ಲ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಸಹ ನಿರ್ದೇಶನ ನೀಡಿದೆ. ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಎಲ್ಲದನ್ನೂ ರಾಜಕೀಯ ಲೆಕ್ಕಾಚಾರದಲ್ಲಿ ನೋಡಿದರೆ ಸರಿ ಹೋಗದು. ತಜ್ಞರ ವರದಿ ಆಧಾರದ ಮೇಲೆ ಈ ನಿಯಮಾವಳಿಗಳನ್ನ ರೂಪಿಸಲಾಗಿದೆ ಎಂದು ಹೇಳಿದರು.

ಇನ್ನು ಸಚಿವ ಕೆಎಸ್ ಈಶ್ವರಪ್ಪ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅಧಿಕಾರ ನಡೆಸಿ ಅನುಭವ ಇರುವವರು. ಇಂಥವರು ಸರ್ಕಾರಕ್ಕೆ ಕರೋನಾ ತಡೆ ನಿಟ್ಟಿನಲ್ಲಿ ಸಲಹೆ ನೀಡಬೇಕು. ಆದರೆ ಬೆಂಗಳೂರಿನಲ್ಲಿ ಇಷ್ಟೊಂದು ಕರೋನಾ ಉಲ್ಭಣ ಇರೋ ಸಂದರ್ಭದಲ್ಲಿ ಪಾದಯಾತ್ರೆ ಎಲ್ಲಿಂದ ಆರಂಭ ಮಾಡ್ತೀರಿ..? ಆ ಪಾದಯಾತ್ರೆ ಆರಂಭ ಮಾಡುವಾಗ ಎಷ್ಟು ಜನ ಸೇರ್ತಾರೆ, ಆ ಸ್ಥಳಗಳಲ್ಲಿ ಕರೋನಾ ಸೋಂಕು ಹೇಗಿದೆ ಎಂಬುದನ್ನ ತಿಳಿದುಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರೇ ಕರೋನಾ ಸೋಂಕಿಗೆ ಬಲಿಯಾಗ್ತಾರೆ. ಕಾಂಗ್ರೆಸ್ ಮುಖಂಡರು ಇದನ್ನ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಮೇಕೆದಾಟು ಹೋರಾಟಕ್ಕೆ ಖಂಡಿತಾ ನನ್ನ ಬೆಂಬಲ ಇದೆ. ವಿರೋಧ ಪಕ್ಷವೇನು ಹೋರಾಟ ಮಾಡಬೇಕೋ ಅದನ್ನ ಮಾಡಲಿ. ಆದರೆ ಬೆಂಗಳೂರಲ್ಲೇ ಕರೋನಾ ಹೆಚ್ಚುತ್ತಿದೆ ಎಂದು ಸರ್ಕಾರ ಬಿಗಿ ಕಾನೂನುಗಳನ್ನ ತರಲು ಹೊರಟ ಸಂದರ್ಭದಲ್ಲಿ ಈ ತರಹ ರಾಜಕೀಯ ಮಾಡೋದು ಸರಿ ಅಲ್ಲ. ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರ ಜೊತೆ ಕೂತು ಚರ್ಚೆ ಮಾಡಲಿ. ಸಿದ್ದರಾಮಯ್ಯ ಸಿಎಂ ಆಗಿದ್ದವರು ಇದರಲ್ಲಿ ರಾಜಕೀಯ ಮಾಡಬಾರದು ಎಂದಿದ್ದಾರೆ.

ಪಾದಯಾತ್ರೆ ಪಾಲಿಟಿಕ್ಸ್:  ಕಾಂಗ್ರೆಸಿಗೆ ಒಂದು ರೂಲ್ಸ್ ಮಾಡಕ್ಕೆ ಆಗಲ್ಲ- ಆರಗ ಜ್ಞಾನೇಂದ್ರ | Padayatra Politics

ಮುಂದುವರೆದು, ಸಾವಿರಾರು ಜನರು ಮೇಕೆದಾಟು ಪಾದಯಾತ್ರೆಗೆ ತೆರಳಿದರೆ ಆತಂಕ ಖಂಡಿತಾ. ಇದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕರ್ಫ್ಯೂ ಎಂದು ಕರೆಯುವುದು ಬಾಲಿಶ. ಕೊರೋನಾಕ್ಕೆ ಎಲ್ಲರೂ ಬಲಿಯಾಗಿದ್ದಾರೆ. ಹರೆಯದವರೇ ಮೃತರಾಗಿರೋದನ್ನ ಕಂಡರೆ ಕಣ್ಣೀರು ಬರುತ್ತದೆ. ಎಲ್ಲೆಲ್ಲಿ ಉಲ್ಭಣವಾಗುತ್ತಿದೆಯೋ ಅಲ್ಲೆಲ್ಲಾ ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳಬೇಕು. ಈ ಮಾತನ್ನ ಸಿದ್ದರಾಮಯ್ಯಗೂ ಹೇಳ್ತೀನಿ, ಡಿಕೆ ಶಿವಕುಮಾರ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಗಮನಕ್ಕೂ ತರುತ್ತೇನೆ ಎಂದು ಈಶ್ವರಪ್ಪ ಹೇಳಿದರು.

Tags: Congress PartyCovid 19ಆರಗ ಜ್ಞಾನೇಂದ್ರಕರೋನಾಕಾಂಗ್ರೆಸ್ ಪಕ್ಷಕೋವಿಡ್-19ತ್ಯೇಕ ನಿಯಮಪಾದಯಾತ್ರೆ ಪಾಲಿಟಿಕ್ಸ್
Previous Post

ಪ್ರಧಾನಿ ಪ್ರಯಾಣದ ವೇಳೆ ನಿಜಕ್ಕೂ ನಡೆದದ್ದು ಏನು? ಭದ್ರತಾ ಲೋಪವೋ? ರ್‍ಯಾಲಿ ರದ್ದು ಮಾಡಲು ನೆಪವೋ?

Next Post

ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

Related Posts

Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
0

16 ಬಜೆಟ್ ಮಂಡಿಸಿದವರು ಸಿದ್ದರಾಮಯ್ಯ. ದೇವರಾಜ್ ಅರಸ್ ದಾಖಲೆ ಮುರಿದು ಸಿಎಂ ಆಗಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಸಿಎಂ ಮೇಲಿರಲಿ. ನಿಮ್ಮ ಆಶೀರ್ವಾದ ಇರೋವರೆಗೂ ಸಿದ್ದರಾಮಯ್ಯ ಅವರಿಗೆ...

Read moreDetails

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025

CM Siddaramaiah: ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸಿ.ಎಂ.ಸಿದ್ದರಾಮಯ್ಯ ಮೆಚ್ಚುಗೆ..!!

July 12, 2025

Santhosh Lad: ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ..

July 12, 2025
Next Post
ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

ಕಳೆದ ಐದು ವರ್ಷಗಳಲ್ಲಿ ಸರ್ಕಾರದಿಂದ ದೇವಸ್ಥಾನಗಳಿಗೆ ಹೆಚ್ಚು ಅನುದಾನ : ಇದರಲ್ಲಿ ಬಿಜೆಪಿ ಪಾಲೇ ಹೆಚ್ಚು!

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada