• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನಕಲ್ಯಾಣ  ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು:  ಸಿಎಂ  ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಕರ್ನಾಟಕ
0
ಜನಕಲ್ಯಾಣ  ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು:  ಸಿಎಂ  ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ  ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು.

ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ, ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು,, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದರು.

ಶೇ. 16 ರಷ್ಟು ಬಜೆಟ್ ಗಾತ್ರ ಹೆಚ್ಚಳ ರಾಜ್ಯ ಆರ್ಥಿಕ ಪ್ರಗತಿಯನ್ನು ಬಿಂಬಿಸುತ್ತದೆ :

2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ  ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳವನ್ನು ಸಾಧಿಸುವ ಸಾಧ್ಯತೆ ಇದೆ.  ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆಯನ್ನು ಸಾಧಿಸಿದೆ.  ಕೋವಿಡ್  ನಂತರದ ವರ್ಷದಲ್ಲಿ  ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ , ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನು ಅಭಿನಂದಿಸುತ್ತೇನೆ.  ಈ ಬಾರಿಯ 3,09,182 ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದರು.

402 ಕೋಟಿ ರೂ. ಆದಾಯ ಹೆಚ್ಚಳ -ಆರ್ಥಿಕ ನಿರ್ವಹಣೆಯ ಪ್ರತಿಬಿಂಬ :

ಕೇಂದ್ರದ ತೆರಿಗೆಯಲ್ಲಿ ರಾಜ್ಯದ  ತೆರಿಗೆ ಪಾಲು 37252  ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ(ಕಳೆದ ಸಾಲಿಗಿಂತ ಶೇ. 25 ರಷ್ಟು  ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ  402 ಕೋಟಿ ಆದಾಯ ಹೆಚ್ಚಳವನ್ನು(revenue surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ.  ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆ(revenue deficit)ಯನ್ನು ತೋರಿಸುತ್ತಿದೆ ಎಂದರು.

ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ :

ಒಟ್ಟು ಜಿಎಸ್ ಡಿಪಿಯ ಶೇ. 25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕೆಂಬ ನಿಯಮವಿದ್ದು, ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್ ಮುನ್ನ ಹಾಗೂ ನಂತರದ ಆರ್ಥಿಕತೆಯನ್ನು ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ  ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದರು.

ಹೆಚ್ಚು ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು :

ರಾಜ್ಯ ಸರ್ಕಾರ 65 ವರ್ಷಗಳ ಅವಧಿಯಲ್ಲಿ  ಒಟ್ಟು1,30,000 ಕೋಟಿ ಸಾಲ ಪಡೆದಿರಬಹುದು.  ಆದರೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅವರ ಕಾಲದಲ್ಲಿ  ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ  ಕೇವಲ 71% ರಷ್ಟು  ಅವಕಾಶವನ್ನು ಬಳಸಿಕೊಂಡಿದೆ. 2020-21 ರಲ್ಲಿ  ಕೇಂದ್ರ ಸರ್ಕಾರದಿಂದ 5 % ವರೆಗೆ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ  ಕೇವಲ ಶೇ. 3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

Tags: Basavaraja Bommaiಬಿಜೆಪಿ
Previous Post

ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಛತ್ತೀಸ್ ಘಡದಲ್ಲಿ ಭೀಕರ ಅಪಘಾತ: ಟ್ರಕ್- ವ್ಯಾನ್ ನಡುವೆ ಡಿಕ್ಕಿ- 11 ಮಂದಿ ಸಾವು

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
Next Post
ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಲಾರಿ: 3 ಸಾವು, 11 ಮಂದಿಗೆ ಗಾಯ

ಛತ್ತೀಸ್ ಘಡದಲ್ಲಿ ಭೀಕರ ಅಪಘಾತ: ಟ್ರಕ್- ವ್ಯಾನ್ ನಡುವೆ ಡಿಕ್ಕಿ- 11 ಮಂದಿ ಸಾವು

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada