• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನಕಲ್ಯಾಣ  ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು:  ಸಿಎಂ  ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
February 24, 2023
in Top Story, ಕರ್ನಾಟಕ
0
ಜನಕಲ್ಯಾಣ  ಹಾಗೂ ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ ನಮ್ಮದು:  ಸಿಎಂ  ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ  ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು.

ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ, ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು,, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದರು.

ಶೇ. 16 ರಷ್ಟು ಬಜೆಟ್ ಗಾತ್ರ ಹೆಚ್ಚಳ ರಾಜ್ಯ ಆರ್ಥಿಕ ಪ್ರಗತಿಯನ್ನು ಬಿಂಬಿಸುತ್ತದೆ :

2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ  ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳವನ್ನು ಸಾಧಿಸುವ ಸಾಧ್ಯತೆ ಇದೆ.  ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆಯನ್ನು ಸಾಧಿಸಿದೆ.  ಕೋವಿಡ್  ನಂತರದ ವರ್ಷದಲ್ಲಿ  ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ , ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನು ಅಭಿನಂದಿಸುತ್ತೇನೆ.  ಈ ಬಾರಿಯ 3,09,182 ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದ್ದು, ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದರು.

402 ಕೋಟಿ ರೂ. ಆದಾಯ ಹೆಚ್ಚಳ -ಆರ್ಥಿಕ ನಿರ್ವಹಣೆಯ ಪ್ರತಿಬಿಂಬ :

ಕೇಂದ್ರದ ತೆರಿಗೆಯಲ್ಲಿ ರಾಜ್ಯದ  ತೆರಿಗೆ ಪಾಲು 37252  ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಲಾಗಿದೆ(ಕಳೆದ ಸಾಲಿಗಿಂತ ಶೇ. 25 ರಷ್ಟು  ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ  402 ಕೋಟಿ ಆದಾಯ ಹೆಚ್ಚಳವನ್ನು(revenue surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ.  ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆ(revenue deficit)ಯನ್ನು ತೋರಿಸುತ್ತಿದೆ ಎಂದರು.

ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ :

ಒಟ್ಟು ಜಿಎಸ್ ಡಿಪಿಯ ಶೇ. 25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕೆಂಬ ನಿಯಮವಿದ್ದು, ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್ ಮುನ್ನ ಹಾಗೂ ನಂತರದ ಆರ್ಥಿಕತೆಯನ್ನು ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ  ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದರು.

ಹೆಚ್ಚು ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು :

ರಾಜ್ಯ ಸರ್ಕಾರ 65 ವರ್ಷಗಳ ಅವಧಿಯಲ್ಲಿ  ಒಟ್ಟು1,30,000 ಕೋಟಿ ಸಾಲ ಪಡೆದಿರಬಹುದು.  ಆದರೆ ಕಾಂಗ್ರೆಸ್ ನ ಸಿದ್ದರಾಮಯ್ಯ ಅವರ ಕಾಲದಲ್ಲಿ  ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ  ಕೇವಲ 71% ರಷ್ಟು  ಅವಕಾಶವನ್ನು ಬಳಸಿಕೊಂಡಿದೆ. 2020-21 ರಲ್ಲಿ  ಕೇಂದ್ರ ಸರ್ಕಾರದಿಂದ 5 % ವರೆಗೆ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ  ಕೇವಲ ಶೇ. 3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

Tags: Basavaraja Bommaiಬಿಜೆಪಿ
Previous Post

ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಛತ್ತೀಸ್ ಘಡದಲ್ಲಿ ಭೀಕರ ಅಪಘಾತ: ಟ್ರಕ್- ವ್ಯಾನ್ ನಡುವೆ ಡಿಕ್ಕಿ- 11 ಮಂದಿ ಸಾವು

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಲಾರಿ: 3 ಸಾವು, 11 ಮಂದಿಗೆ ಗಾಯ

ಛತ್ತೀಸ್ ಘಡದಲ್ಲಿ ಭೀಕರ ಅಪಘಾತ: ಟ್ರಕ್- ವ್ಯಾನ್ ನಡುವೆ ಡಿಕ್ಕಿ- 11 ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada