• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ- ಸಚಿವ ಪ್ರಿಯಾಂಕ್ ಖರ್ಗೆ

Any Mind by Any Mind
June 11, 2023
in ಕರ್ನಾಟಕ
0
ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ಬದ್ಧರಾಗಿದ್ದೇವೆ- ಸಚಿವ ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Telegram

ಕಲಬುರಗಿ : ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಶಕ್ತಿ ಯೋಜನೆಗೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ADVERTISEMENT

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನ ವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ರಾಜ್ಯದ 14.50 ಕೋಟಿ ಹಾಗೂ ಜಿಲ್ಲೆಯ 1.50 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಪಕ್ಷ ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಮಾರ್ಗ ಸೂಚಿ ತಯಾರಿಸಲಾಗಿದ್ದು ಕನಿಷ್ಠ 50,000 ಕೋಟಿ ಹಣ ಬೇಕಾಗುತ್ತದೆ. ಇದರಿಂದ ಆರ್ಥಿಕ ಹೊರೆಯಾದರೂ ಕೂಡಾ ಅದನ್ನು ನಿಭಾಯಿಸುವ ಶಕ್ತಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗಿದ್ದು ಈಗಾಗಲೇ ಈ ಯೋಜನೆಗಳ ಜಾರಿಗೆ ಬೇಕಾಗುವ ಹಣಕಾಸು ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕೂಡಾ ಕಂಡುಹಿಡಿಯಲಾಗಿದೆ ಎಂದರು.

ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರ ಆರ್ಥಿಕ ಸ್ಥಿರತೆ ನಿರ್ಮಾಣ ಮಾಡಲಾಗುವುದು ಎಂದು ಪ್ರತಿಪಾದಿಸಿದ ಸಚಿವರು ಪಕ್ಷದ ಪ್ರಣಾಳಿಕೆಗಳನ್ನು ಹಾಗೂ ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ 10 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು ಅವುಗಳನ್ನೂ ಕೂಡಾ ಜಾರಿಗೊಳಿಸಲಾಗುವುದು ಎಂದರು.

ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ನಾಡಿನ ಜನರ ಸಂಕಷ್ಟಗಳನ್ನು ಅರಿತು ಅವರ ಆರ್ಥಿಕ ಸಬಲತೆಗೆ ಬೇಕಾಗುವ ಕಾರ್ಯಕ್ರಮಗಳನ್ನು ರೂಪಿಸಲು ನಿರ್ಧಾರ ಕೈಗೊಳ್ಳಲಾಯಿತು. ಅದರ ಪರಿಣಾಮವಾಗಿ ಪಕ್ಷ ಐದು ಪ್ರಮುಖ ಗ್ಯಾರಂಟಿಗಳನ್ನು ಘೋಷಿಸಲಾಯಿತು. ಈಗ ಅವುಗಳನ್ನು ಜಾರಿಗೆ ತರುವ ಬದ್ಧತೆ ಸರ್ಕಾರಕ್ಕಿದ್ದು ವಿರೋಧ ಪಕ್ಷ ಬಿಜೆಪಿ ಈ ಕುರಿತು ಅನಗತ್ಯ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ ಗಿರೀಶ್ ಬದೋಲೆ, ಕೆಕೆಆರ್ ಡಿಬಿ ಕಾರ್ಯದರ್ಶಿ ಅನಿವೃದ್ಧಿ ಶ್ರವಣ್, ನಗರ ಪೊಲೀಸ್ ಆಯುಕ್ತ ಚೇತನ್ ಆರ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಂತರ ಸಚಿವರು ಐದು ಸರ್ಕಾರಿ ಸಾರಿಗೆ ಬಸ್ ಗಳಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಟಿಕೇಟ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

Tags: BJPguarantee cardKalaburagiPriyank KhargeShakti Yojana
Previous Post

ಸಾಮಾಜಿಕ ತಳಹದಿಯೂ ಭ್ರಷ್ಟಾಚಾರದ ಬೇರುಗಳೂ

Next Post

ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

ಶಕ್ತಿ ಯೋಜನೆ ಕಾರ್ಯಾರಂಭ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ ಜಾರ್ಜ್ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada