ಆರೆಸ್ಸೆಸ್ ಚಟುವಟಿಕೆ ಬ್ಯಾನ್ ವಿಚಾರವಾಗಿ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷದ ಒರಿಜಿನಲ್ ಹಿಂದುಗಳು ಖರ್ಗೆಯವರ ಜೊತೆಗಿದ್ದು ಬೆದರಿಕೆಗಳಿಗೆ ಹೆದರುವ ಮಾತಿಲ್ಲ ಎಂದರು.

ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆ ಬ್ಯಾನ್ ಮಾಡುವ ವಿಚಾರ ಕುರಿತು ಸಿಎಂಗೆ ಪತ್ರ ಬರೆದ ಹಿನ್ನೆಲೆ ಬೆದರಿಕೆ ಕರೆ ಬಂದಿರುವ ಸಂಬಂಧ ಸಂತೋಷ್ ಲಾಡ್ ರಾಯಚೂರಿನಲ್ಲಿ ಮಾತನಾಡಿರು. ಐಡಿಯಾಲಜಿಕಲ್ ಡಿಫರನ್ಸ್ ಇರಬಹುದು. ಈ ರೀತಿ ಬೆದರಿಕೆ ಹಾಕೋದಕ್ಕೆ ಅರ್ಥ ಇರಲ್ಲ.

ಯಾರು ಮಾಡಿದ್ದಾರೆ ಗೊತ್ತಿಲ್ಲ. ಈ ಆರ್ಎಸ್ಎಸ್ ಅನ್ನು ಬ್ಯಾನ್ ಮಾಡಿದವರು ಯಾರು? ಎರಡು-ಮೂರು ಬಾರಿ ಬ್ಯಾನ್ ಮಾಡಿದವರು ಯಾರು? ಸರ್ದಾರ್ ವಲ್ಲಭಾಯ್ ಪಟೇಲ್ ಸ್ಟಾಚು ಮಾಡಿದ್ದಾರಲ್ಲ ಅವರೇ ಬ್ಯಾನ್ ಮಾಡಿದ್ದು. ಯಾಕ್ ಬ್ಯಾನ್ ಮಾಡಿದ್ದು ಅಂತ ಕೇಳಬೇಕು ಎಂದು ತಿರುಗೇಟು ನೀಡಿದರು.





