• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬ್ರಿಟೀಷರಿಗೆ ಹೆದರಲಿಲ್ಲ, ಇನ್ನು ಬಿಜೆಪಿಗೆ ಹೆದರುತ್ತೇವಾ?: ಮಲ್ಲಿಕಾರ್ಜುನ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
March 6, 2023
in ಕರ್ನಾಟಕ, ರಾಜಕೀಯ
0
ಬ್ರಿಟೀಷರಿಗೆ ಹೆದರಲಿಲ್ಲ, ಇನ್ನು ಬಿಜೆಪಿಗೆ ಹೆದರುತ್ತೇವಾ?: ಮಲ್ಲಿಕಾರ್ಜುನ ಖರ್ಗೆ
Share on WhatsAppShare on FacebookShare on Telegram

ತುಮಕೂರು: ನಾವು ಬ್ರಿಟೀಷರಿಗೆ ಹೆದರಲಿಲ್ಲ, ಇನ್ನು ಬಿಜೆಪಿಗೆ ಹೆದರುತ್ತೇವಾ? ಅಂಬೇಡ್ಕರ್ ಅವರು ಕೊಟ್ಟ, ಸಂವಿಧಾನ ಉಳಿಸದಿದ್ದರೆ ಸರ್ವಾಧಿಕಾರಿ ಸರ್ಕಾರ ಬರುತ್ತದೆ. ಹಾಗಾಗಿ ಪ್ರಜಾಪ್ರಭುತ್ವ ಉಳಿಸಲು ನಾವು ಹೋರಾಟ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ADVERTISEMENT

ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಕಚೇರಿ ‘ರಾಜೀವ್ ಭವನ’ ಉದ್ಘಾಟನಾ ಸಮಾರಂಭ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂದು ಮಾತನಾಡಿದ ಅವರು, ಈ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾದರೆ, ನೀವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಇವರ ಅನಾಚಾರದ ಬಗ್ಗೆ ಜನರಿಗೆ ತಿಳಿಸಬೇಕು ಎಂದರು.

ಮೋದಿ ಮುಖ ನೋಡಿ ಎಷ್ಟು ಬಾರಿ ಮತ ಹಾಕುತ್ತೀರಿ? ಗ್ರಾಮಪಂಚಾಯ್ತಿಯಿಂದ ಲೋಕಸಭೆ ಚುನಾವಣೆವರೆಗೂ ಮೋದಿ ಮುಖ ನೋಡಿ ಮತ ಹಾಕಬೇಕಾ? ಇಲ್ಲೆಲ್ಲಾ ಮೋದಿ ಬಂದು ಆಡಳಿತ ಮಾಡುತ್ತಾರಾ? ಮೋದಿ ನಮ್ಮ ರಾಜ್ಯಕ್ಕೆ ಏನು ಮಾಡಿದ್ದಾರಾ? ಎಷ್ಟು ಆಣೆಕಟ್ಟು, ಸಾರ್ವಜನಿಕ ವಲಯ ಕಾರ್ಖಾನೆ ಮುಚ್ಚಿದ್ದಾರೆ? ಕೇಂದ್ರ ಸರ್ಕಾರದಲ್ಲಿ 30 ಲಕ್ಷ ನೌಕರಿ ಖಾಲಿ ಇವೆ. ರಾಜ್ಯದಲ್ಲಿ ಸುಮಾರು 3 ಲಕ್ಷ ಸರ್ಕಾರಿ ಹುದ್ದೆ ಖಆಲಿ ಇವೆ. ನಾವು ಅಧಿಕಾರಕ್ಕೆ ಬಂದಾಗ ಈ ಹುದ್ದೆ ತುಂಬುತ್ತೇವೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. 9 ವರ್ಷಗಳಲ್ಲಿ 18 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದೀರಿ ಎಂದು ಕೇಳಿದಾಗ ನನ್ನ ಮಾತನ್ನು ಸದನದ ಕಡತದಿಂದ ತೆಗೆದುಹಾಕಿದರು ಎಂದು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೋದಿ ಅವರನ್ನು ಪ್ರಧಾನಿ ಮಾಡಿರುವುದು ಅಭಿವೃದ್ಧಿಗಾಗಿಯೋ, ಕಾಂಗ್ರೆಸ್ ಟೀಕಿಸಲೋ

ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದಾಗ ಕಲಬುರ್ಗಿಗೆ ಬಂದು ಅನೇಕ ಮಾತುಗಳನ್ನು ಹೇಳಿದರು. ಅವರು ಪ್ರಧಾನಿ ಬಂದು ಮಾತನಾಡಲಿ ಎಂದು ಸ್ವಾಗತಿಸಿದೆ. ಅವರು ರಾಜ್ಯದ ಅಭಿವೃದ್ಧಿಗೆ ಸರ್ಕಾರ ಹಣ, ವಿಮಾನ, ಸೌಲಭ್ಯ, ಅಧಿಕಾರವನ್ನು ಬಳಸಿಕೊಳ್ಳಬೇಕೇ ಹೊರತು, ನಮ್ಮನ್ನು ಟೀಕಿಸಲು ಅಲ್ಲ ಪ್ರಧಾನಮಂತ್ರಿ ಮಾಡಿ ಅಧಿಕಾರ ಮಾಡಿರುವುದು ದೇಶದ ಅಭಿವೃದ್ಧಿಗಾಗಿಯೋ ಅಥವಾ ನಮ್ಮ ಬಗ್ಗೆ ಟೀಕೆ ಮಾಡಲೋ? ಎಂದು ಪ್ರಶ್ನಿಸಿದರು.

ಮೋದಿ, ಶಾ ಮೂಗಿನ ಕೆಳಗೆ ಭ್ರಷ್ಟಾಚಾರ

ರಾಜ್ಯದಲ್ಲಿ 40% ಭ್ರಷ್ಟಾಚಾರ ನಡೆಯುತ್ತಿದೆ. ಮೋದಿ, ಅಮಿತ್ ಶಾ ಅವರು ಈ ಬಗ್ಗೆ ಮಾತನಾಡಬೇಕು. ಅವರ ಮೂಗಿನ ಕೆಳಗೆ ಭ್ರಷ್ಟಾಚಾರ ನಡೆಯುತ್ತಿದೆ. ಇವರು ದುಪ್ಪಟ್ಟು ಅಂದಾಜು ವೆಚ್ಚ ನಿಗದಿ ಮಾಡಿ 100% ರಷ್ಟು ಭ್ರಷ್ಟಾಚಾರ ಮಾಡುತ್ತಿದ್ದಾರೆ. ನಾನು 52 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಪ್ರಧಾನಿಯನ್ನು ನಾನು ನೋಡಿಲ್ಲ. ಈ ಪ್ರಧಾನಿ ಕೇವಲ ಕಾಂಗ್ರೆಸ್ ಪಕ್ಷದ ಟೀಕೆಗೆ ಸೀಮಿತವಾಗಿದ್ದಾರೆ ಎಂದರು.

ಕಾಂಗ್ರೆಸ್ ಸಾಧನೆ ನಮ್ಮದೆನ್ನುತ್ತಾರೆ

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿರುವ ಸಾಧನೆಗಳನ್ನು ತಾವೇ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಈ ಜಿಲ್ಲೆಯಲ್ಲಿ ಹೆಚ್’ಎಎಲ್ ಘಟಕ ತಂದಿದ್ದು ಕಾಂಗ್ರೆಸ್ ಸರ್ಕಾರದಲ್ಲಿ . ಎ.ಕೆ ಆಂಟೋನಿಯವರು ನೀಡಿದ ಕೆಲಸ ಅದು. ಈಗ ಬಂದು ಇದು ನಾನು ಮಾಡಿದ್ದೇನೆ ಎಂದರು. ಕಾಂಗ್ರೆಸ್ ಪಕ್ಷ ಹೆಚ್ ಎಂಟಿ, ಐಐಟಿ, ಐಐಎಂ, ಆಣೆಕಟ್ಟುಗಳನ್ನು ಕಟ್ಟಿದ್ದಾರೆ. ಮೋದಿ ಅವರು ಒಂದಾದರೂ ಆಣೆಕಟ್ಟು ಕಟ್ಟಿದ್ದಾರಾ? ನೀರಾವರಿ ಯೋಜನೆ ಮಾಡಿದ್ದಾರಾ? ಆದರೂ ಅವರು ಬಡಾಯಿ ಕೊಚ್ಚಿಕೊಳ್ಳುತ್ತಾರೆ ಈ ಜಿಲ್ಲೆಗೆ ಹೇಮಾವತಿ ನೀರು ತಂದುಕೊಟ್ಟಿದ್ದು ವೀರೇಂದ್ರ ಪಾಟೀಲ್ ಅವರ ಕಾಲದಲ್ಲಿ. ದೇವರಾಜ ಅರಸು ಅವರ ಕಾಲದಲ್ಲಿ ಅದನ್ನು ಜಾರಿಗೆ ತಂದರೇ ಹೊರತು ಮೋದಿಯವರಲ್ಲ ಎಂದು ಕುಟುಕಿದರು.

ಸೂಜಿಯಿಂದ ರಾಕೆಟ್ ನಿರ್ಮಾಣದವರೆಗೂ ಮಾಡಿರುವ ಸಾಧನೆ ಕಾಂಗ್ರೆಸ್ ಪಕ್ಷದ್ದು

ಅವರ ಪ್ರಕಾರ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿರುವುದು 2014ರಲ್ಲಿ. 1947ರಿಂದ 2014ರವರೆಗೆ ಕಾಂಗ್ರೆಸ್ ಸಾವಿರಾರು ಕೆಲಸ ಮಾಡಿದ್ದಾರೆ. ದೇಶದಲ್ಲಿ ಜನರ ಹೊಟ್ಟೆ ತುಂಬಿಸಲು ಅನ್ನ ಇಲ್ಲದಾಗ ಹಸಿರು ಕ್ರಾಂತಿ ಮಾಡಿದ್ದು ನೆಹರು. ಪರಿಣಾಮ ಇಂದು ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದೆ. ಮೋದಿ ಅವರು ಬರುವ ಮುನ್ನ ದೇಶದ ಜನ ಉಪವಾಸದಲ್ಲಿದ್ದರು, ಇವರು ಬಂದ ನಂತರ ಮನೆಯಲ್ಲಿ ವಾಸ ಮಾಡುತ್ತಿದ್ದೆವು ಎಂಬಂತೆ ಅವರು ಮಾತನಾಡುತ್ತಾರೆ. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮೋದಿ ಅವರೇ ನಿರ್ಮಾಣ ಮಾಡಿದ್ದಾರಾ? ನಾವು ಮಾಡದ ಕೆಲಸಕ್ಕೆ ಶ್ರೇಯಸ್ಸು ಪಡೆಯಲು ಮುಜುಗರ ಪಡುತ್ತೇವೆ. ಆದರೆ ಈತ ಬೇರೆಯವರ ಕೆಲಸ ತಾವೇ ಮಾಡಿರುವಂತೆ ಮಾತನಾಡುತ್ತಾರೆ. ಸ್ವಾತಂತ್ರ್ಯ ಪೂರ್ವದಲ್ಲಿ 16% ಇದ್ದ ಸಾಕ್ಷರತೆ, ಇಂದು 73% ಇದೆ. ಇದನ್ನು ಮೋದಿಯವರು ಮಾಡಿದರಾ? ನಿಮ್ಮ ಊರಿನಲ್ಲಿರುವ ಶಾಲೆಗಳನ್ನು ನಿರ್ಮಾಣ ಮಾಡಿದವರು ಯಾರು? ಈ ದೇಶದಲ್ಲಿ ಸೂಜಿಯಿಂದ ರಾಕೆಟ್ ನಿರ್ಮಾಣದವರೆಗೂ ಸಾಧನೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ಸಾಕಷ್ಟು ಜನಪರ ಯೋಜನೆ ನೀಡಿದೆ. ಅಂತಹ ಕಾರ್ಯಕ್ರಮಗಳು ಮತ್ತೆ ಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದರು.

Tags: Congress Partyನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Previous Post

ವರದಕ್ಷಿಣೆ ಕಿರುಕುಳ ತಾಳಲಾರದೇ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Next Post

ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲೇ ಇದಾನೆ ಅವರಿಗೆ ಬಿಜೆಪಿ ಅವ್ರೇ ರಕ್ಷಣೆ ಕೊಡ್ತವ್ರೆ : ಸಿದ್ದರಾಮಯ್ಯ

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲೇ ಇದಾನೆ ಅವರಿಗೆ ಬಿಜೆಪಿ ಅವ್ರೇ ರಕ್ಷಣೆ ಕೊಡ್ತವ್ರೆ : ಸಿದ್ದರಾಮಯ್ಯ

ಮಾಡಾಳ್‌ ವಿರೂಪಾಕ್ಷಪ್ಪ ಮನೆಯಲ್ಲೇ ಇದಾನೆ ಅವರಿಗೆ ಬಿಜೆಪಿ ಅವ್ರೇ ರಕ್ಷಣೆ ಕೊಡ್ತವ್ರೆ : ಸಿದ್ದರಾಮಯ್ಯ

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada