• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಹೇಮಾವತಿ ಲಿಂಕ್ ಕೆನಾಲ್ ಯೋಜನೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

“ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.

ADVERTISEMENT

ತುಮಕೂರಿನ ಸುಂಕಾಪುರ ಬಳಿ ನಡೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಪರಿವೀಕ್ಷಣೆ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಿದರು.

“ಈ ವಿಚಾರದಲ್ಲಿ ಯಾವುದೇ ರೈತರು ಗಾಬರಿಯಾಗುವುದು ಬೇಡ. ನಾನು ಬೆಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ತುಮಕೂರು ಜಿಲ್ಲೆಯ ರೈತರ ರಕ್ಷಣೆ ಬಗ್ಗೆ ತೀರ್ಮಾನ ಮಾಡುತ್ತೇನೆ. ಕೇವಲ ಕುಣಿಗಲ್ ಮಾತ್ರವಲ್ಲ ಎಲ್ಲಾ ಕ್ಷೇತ್ರಗಳ ಹಿತ ನಮಗೆ ಮುಖ್ಯ. ನಾವೆಲ್ಲರೂ ಸೇರಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡೋಣ. ನಿಮ್ಮ ಸಮಸ್ಯೆ ಏನೇ ಇದ್ದರೂ ನಾನು ಅದನ್ನು ಬಗೆಹರಿಸುತ್ತೇನೆ” ಎಂದು ಧೈರ್ಯ ತುಂಬಿದರು.

“ಕೇಂದ್ರ ಸಚಿವರಾದ ಸೋಮಣ್ಣ ಹಾಗೂ ಶಾಸಕರ ಸಲಹೆ ಮೇರೆಗೆ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇನೆ. ನಾನು ಒಂದು ಕ್ಷೇತ್ರಕ್ಕೆ ಸೀಮಿತವಾದವನಲ್ಲ. ಕರ್ನಾಟಕ ರಾಜ್ಯದ ನೀರಾವರಿ ಮಂತ್ರಿಯಾಗಿದ್ದೇನೆ. ತುಮಕೂರಿನ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿ ನಮ್ಮ ಜವಾಬ್ದಾರಿ. ತುಮಕೂರಿನ ಜನರು ಪ್ರತಿ ಸಂದರ್ಭದಲ್ಲಿಯೂ ನಮಗೆ ಸಂಯಮದಿಂದ ಸಹಕಾರ ನೀಡಿದ್ದಾರೆ” ಎಂದರು.

“ಈ ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ, ನಾನು ನೀರಾವರಿ ಸಚಿವನಾಗಿದ್ದ ವೇಳೆ ಈ ಯೋಜನೆ ಪ್ರಾರಂಭಿಸಲಾಯಿತು. ನಂತರ ಬಿಜೆಪಿ ಸರ್ಕಾರ ಈ ಯೋಜನೆ ನಿಲ್ಲಿಸಿತ್ತು. ಪರಿಣಾಮ 600 ಕೋಟಿಯಿದ್ದ ಯೋಜನಾ ವೆಚ್ಚ ಇಂದು ಒಂದು ಸಾವಿರ ಕೋಟಿಗೆ ಏರಿಕೆಯಾಗಿದೆ. ವೈ.ಕೆ ರಾಮಯ್ಯ ಅವರ ಕಾಲದಿಂದ ಈ ಹೋರಾಟ ನಡೆದಿದ್ದು, ಇದಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ತೀರ್ಮಾನ ಮಾಡಿದ್ದೇವೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಪೈಪ್ ಗಳ ಖರೀದಿ ಹಾಗೂ ಕೆಲಸ ಆರಂಭಿಸಿ 400 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ. ಇದು ನಾಲ್ಕೈದು ತಿಂಗಳಲ್ಲಿ ಮುಗಿಯುವ ಕೆಲಸ” ಎಂದು ಹೇಳಿದರು.

“ಕಾವೇರಿಯಿಂದ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕು. ಈ ಹೇಮಾವತಿ, ಹಾರಂಗಿ, ಕಬಿನಿ, ಕೆಆರ್ ಎಸ್ ಜಲಾಶಯದಿಂದ ಈ ವರ್ಷ ಈಗಾಗಲೇ 220 ಟಿಎಂಸಿ ನೀರು ಹೋಗಿದೆ. ಇನ್ನು ನಾಲ್ಕೈದು ತಿಂಗಳು ಮಳೆ ಬರುವ ಸಾಧ್ಯತೆ ಇದೆ. ಸುಮಾರು 200 ಟಿಎಂಸಿ ನೀರು ಸಮುದ್ರ ಸೇರುವ ನಿರೀಕ್ಷೆ ಇದೆ. ಇದನ್ನು ತಡೆದು ನಮ್ಮ ರೈತರಿಗೆ ಸಹಾಯ ಮಾಡಬೇಕು. ಇದಕ್ಕಾಗಿ ಕಾಲುವೆಗಳಲ್ಲಿ ನೀರು ಹರಿಸಬೇಕು. ನೀರು ಹೆಚ್ಚಾಗಿದ್ದಾಗ ಮಾತ್ರ ಬಳಸಲು ಈ ಯೋಜನೆ ತಂದಿದ್ದೇವೆ, ನಮಗೆ ಎಲ್ಲಾ ತಾಲೂಕುಗಳು ಒಂದೇ” ಎಂದು ತಿಳಿಸಿದರು.

“ನಾನು ಕಾಮಗಾರಿ ಸ್ಥಳವನ್ನು ಪರಿಶೀಲನೆ ಮಾಡಿದೆ. ಯಾವುದೇ ಕಾರಣಕ್ಕೂ ನೀರನ್ನು ಕಾಲುವೆಗಳಿಗಿಂತ ಕೆಳಗೆ ಸಾಗಿಸುವುದಿಲ್ಲ. ಒಂದೇ ಎತ್ತರ ಕಾಯ್ದುಕೊಂಡು ಸ್ಕಾಡಾ ಹಾಕಿ ನೀರಿನ ಹರಿವು ಪರಿಶೀಲನೆ ಮಾಡಬಹುದು. ನಾವು ತಮಿಳುನಾಡು, ಮಹಾರಾಷ್ಟ್ರ ಜೊತೆಗಿನ ಜಲ ವಿವಾದದಂತೆ ನಮ್ಮೊಳಗೆ ವಿವಾದಗಳಾಗಬಾರದು. ಆಲಮಟ್ಟಿ ಜಲಾಶಯ ಮಟ್ಟ ಎತ್ತರಿಸಿದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರಂತೆ ನಮ್ಮ ಸ್ಥಳೀಯರು ಅಡ್ಡಿಪಡಿಸಬಾರದು. ನಾನು ಎಲ್ಲಾ ಶಾಸಕರಿಗೆ ಈ ವಿಚಾರವಾಗಿ ಹೇಳಿದ್ದೇನೆ. ತುಮಕೂರಿನ ಎಲ್ಲಾ ಕ್ಷೇತ್ರಗಳ ಹಿತ ಕಾಯ್ದು, ಗೌರವ ನೀಡಲು ನಾವು ಬದ್ಧ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೇಡ. ಕಳೆದ 20 ವರ್ಷಗಳಿಂದ ಈ ಯೋಜನೆಯ ಕೊನೆ ಭಾಗದ ರೈತರಿಗೆ ಸರಿಯಾಗಿ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಹೀಗಾಗಿ ಈ ಯೋಜನೆ ತಂದಿದ್ದೇವೆ” ಎಂದರು.

ನಿಮ್ಮ ಹಿತ ಕಾಯಲು ಎತ್ತಿನಹೊಳೆ ಯೋಜನೆಯಡಿ ಕೆರೆ ತುಂಬಿಸಲಿದ್ದೇವೆ

“ನಾವು ಎತ್ತಿನಹೊಳೆ ಯೋಜನೆ ಮ‌ೂಲಕ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಕೈಗೊಂಡಿದ್ದು, ಹೆಚ್ಚಿನ ನೀರು ಸಂಗ್ರಹವಾದಾಗ ಈ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲಾಗುವುದು. ನಾವು ಈ ಯೋಜನೆ ಕೇವಲ ಕುಡಿಯುವ ನೀರಿಗೆ ಮಾತ್ರ, ಕೆರೆಗಳಿಗೆ ನೀರು ಹರಿಸುವುದಿಲ್ಲ ಎಂದು ತೀರ್ಮಾನ ಮಾಡಬಹುದಾಗಿತ್ತು. ಆದರೆ ನೀರು ಹೆಚ್ಚಾಗಿದ್ದಾಗ ನಾವು ವ್ಯರ್ಥ ಮಾಡಬಾರದು ಎಂದು ಈ ಯೋಜನೆ ಮಾಡಿದ್ದೇವೆ. ಇದಕ್ಕಾಗಿ 20 ಸಾವಿರ ಕೋಟಿ ಹಣ ಖರ್ಚು ಮಾಡುತ್ತಿದ್ದೇವೆ. ಆಮೂಲಕ ನಾವು ಅಂತರ್ಜಲ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

ಈ ನೀರನ್ನು ಮುಖ್ಯ ಕಾಲುವೆಗಳ ಮೂಲಕ ತೆಗೆದುಕೊಂಡು ಹೋಗಬೇಕು ಎಂಬ ಸ್ಥಳೀಯರ ಆಗ್ರಹದ ಬಗ್ಗೆ ಕೇಳಿದಾಗ, “ನಾನು ಈಗಾಗಲೇ ತೀರ್ಮಾನ ಮಾಡಿರುವ ಯೋಜನೆಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಬೇರೆ ತಾಲೂಕುಗಳಿಗೆ ಸಿಗಬೇಕಾದ ನೀರಿನಲ್ಲಿ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲಾಗುವುದು. ಕುಣಿಗಲ್ ಗೆ ಮೀಸಲಾಗಿರುವಷ್ಟು ನೀರನ್ನು ಮಾತ್ರ ನಾವು ನೀಡುತ್ತೇವೆ. ನಿಮಗೆ ಕಡಿಮೆ ಮಾಡಿ, ಅವರಿಗೆ ಹೆಚ್ಚಿನ ನೀರು ನೀಡುವ ಪ್ರಶ್ನೆ ಇಲ್ಲ. ನೀರು ಕಡಿಮೆ ಇದ್ದ ಸಂದರ್ಭದಲ್ಲಿ ಎಲ್ಲರಿಗೂ ಸಮಾನವಾಗಿ ನೀರನ್ನು ಹರಿಸಲಾಗುವುದು. ಸರ್ವರಿಗೂ ಸಮಬಾಳು, ಸಮಪಾಲು” ಎಂದು ತಿಳಿಸಿದರು.

ನೀರು ಹೆಚ್ಚುವರಿಯಾಗಿ ಬಂದರೆ ಮಾತ್ರ ಹರಿಸಲಾಗುವುದೇ ಎಂದು ಕೇಳಿದಾಗ, “ಹೌದು, ನೀರು ಯಾವುದೇ ರೀತಿ ಹೆಚ್ಚುವರಿಯಾಗಿ ಹರಿಯದಂತೆ ಸ್ಕಾಡಾ ವ್ಯವಸ್ಥೆ ಅಳವಡಿಸಲಾಗುವುದು. ಈ ನೀರಿನ ಪಾಲನ್ನು ಸಮವಾಗಿ ಹಂಚಿಕೆ ಮಾಡಲಾಗುವುದು” ಎಂದು ತಿಳಿಸಿದರು.

ಮತ್ತೆ ಈ ಕಾಮಗಾರಿ ಯಾವಾಗ ಆರಂಭಿಸುತ್ತೀರಿ ಎಂದು ಕೇಳಿದಾಗ, “ನೀವೇ ಶುಭ ಗಳಿಗೆ, ಶುಭ ಮುಹೂರ್ತ ನೋಡಿ” ಎಂದರು.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾಗಿ ಪರಿಹಾರ ನೀಡಲಾಗಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಕಾನೂನು ಪ್ರಕಾರ ಯಾರಿಗೆ ಏನು ಪರಿಹಾರ ನೀಡಬೇಕೋ ಅದನ್ನು ನೀಡಲಾಗುವುದು” ಎಂದು ತಿಳಿಸಿದರು.

ಹೋರಾಟಗಾರರಿಗೆ ನಿಮ್ಮ ಸಲಹೆ ಏನು ಎಂದು ಕೇಳಿದಾಗ, “ನಾನು ಅವರಿಗೆ ಕೈ ಮುಗಿದು ಕೇಳಿಕೊಳ್ಳುವುದೇನೆಂದರೆ. ನಾವು ನೆರೆ ರಾಜ್ಯಗಳ ಜೊತೆಗಿನ ಜಲ ಸಂಘರ್ಷದಂತೆ ನಮ್ಮೊಳಗೆ ನಾವೇ ಜಗಳವಾಡುವುದು ಬೇಡ. ನಾವು ರಕ್ತ, ಸಂಬಂಧ ಹಂಚಿಕೊಂಡು ಹುಟ್ಟಿದ್ದೇವೆ, ನೀರು ಹಂಚಿಕೊಂಡು ಬದುಕುತ್ತಿದ್ದೇವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ಮನವಿ ಮಾಡಿದರು.

ಪ್ರಾಣ ಹೋದರೂ ಸರಿ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ನಾವು ಅವರ ಪ್ರಾಣ ಉಳಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಕಾಮಗಾರಿ ಪೂರ್ಣಗೊಳ್ಳುತ್ತದೆಯೇ ಎಂದು ಕೇಳಿದಾಗ, “ನಿಮ್ಮ (ಮಾಧ್ಯಮಗಳ) ಹಾಗೂ ಅವರ ಅನುಗ್ರಹದಿಂದ ಈ ಕಾಮಗಾರಿ ಪೂರ್ಣಗೊಳ್ಳಲಿದೆ” ಎಂದರು.

Tags: bjp dk shivakumar clashbjp vs dk shivakumarDCM DK Shivakumardeputy cm dk shivakumarDK Shivakumardk shivakumar accidentdk shivakumar birthdaydk shivakumar congressdk shivakumar cycledk shivakumar cyclingdk shivakumar exclusivedk shivakumar familydk shivakumar housedk shivakumar interviewdk shivakumar latestdk shivakumar memoriesdk shivakumar newsdk shivakumar speaksdk shivakumar speechdk shivakumar videodk shivakumar wife
Previous Post

MB Patil: ₹882 ಕೋಟಿ ವೆಚ್ಚದಲ್ಲಿ ಹೊಸೊಡಾದ ಸೌರಕೋಶ ತಯಾರಿಕಾ ಘಟಕ: ಎಂ. ಬಿ. ಪಾಟೀಲ

Next Post

Lakshmi Hebbalkar: ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

Lakshmi Hebbalkar: ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada