ಬೆಂಗಳೂರು : ನನ್ನ ಫೋಟೋವನ್ನು ಚಂದವಾಗಿ ಅಚ್ಚು ಮಾಡಿ ಮಸಿ ಬಳಿಯುವ ಕೆಲಸ ಮಾಡಲಾಗಿದೆ. ಮೂರ್ನಾಲ್ಕು ಬಾರಿ ನನ್ನ ತೇಜೋವಧೆ ಮಾಡುವ ಕೆಲಸ ನಡೆದಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇವಲ ನಾನು ಮಾತ್ರವಲ್ಲ 15 ಜನ ಸಂಸದರಿಗೆ ಮಳಿ ಬಸಿಯುವ ಕೆಲಸ ನಡೆಯುತ್ತಿದೆ. ಆಯ್ಕೆ ಮಾಡಿದ ಮತದಾರರಿಗೆ ಅವಮಾನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನು ಕಟ್ಟಬೇಕಾದ ಅವಶ್ಯಕತೆಯಿದೆ. ಯಾರೂ ಧೈರ್ಯ ಕಳೆದುಕೊಳ್ಳೋದು ಬೇಡ, ಭರವಸೆ ಕೊಟ್ಟು ಅಧಿಕಾರಕ್ಕೆ ಬಂದವರು ಏನು ಮಾಡ್ತಾರೆ ಎಂದು ಕಾದು ನೋಡೋಣ ಎಂದು ಹೇಳಿದ್ದಾರೆ