• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ಮೋದಿ ಸಲಹೆಯನ್ನು ಧಿಕ್ಕರಿಸಿದ ಅವರದ್ದೇ ಸಂಪುಟದ ಸಹೋದ್ಯೋಗಿಗಳು!

ಫೈಝ್ by ಫೈಝ್
October 30, 2021
in ದೇಶ, ರಾಜಕೀಯ
0
ಪ್ರಧಾನಿ ಮೋದಿ ಸಲಹೆಯನ್ನು ಧಿಕ್ಕರಿಸಿದ ಅವರದ್ದೇ ಸಂಪುಟದ ಸಹೋದ್ಯೋಗಿಗಳು!
Share on WhatsAppShare on FacebookShare on Telegram

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವಿಶ್ವದ ನಾಯಕರಿಗೆಲ್ಲಾ ನಾಯಕ, ವಿಶ್ವಗುರು ಎಂಬಂತೆ ಬಿಜೆಪಿ ಬಿಂಬಿಸುತ್ತಿದೆ. ಮೋದಿ ಅಭಿಮಾನಿಗಳು ಅದನ್ನೇ ನಿಜವೆಂದೇ ನಂಬಿ ʼವಿಶ್ವಗುರುʼವಿನ ಭಜನೆಯಲ್ಲಿ ತೊಡಗಿದ್ದಾರೆ. ಆದರೆ, ವಿಶ್ವಗುರು ಮೋದಿಯ ಸಾಧಾರಣ ಸಲಹೆಯನ್ನು ಸ್ವತಃ ಅವರ ಸಂಪುಟದ ಸಹೋದ್ಯೋಗಿಗಳು, ಸಚಿವರೇ ಮಾಡುತ್ತಿಲ್ಲ ಎನ್ನುವುದು ವಾಸ್ತವ.

ADVERTISEMENT

2020 ರಲ್ಲಿ ಇಡೀ ವಿಶ್ವಕ್ಕೆ ಬಂದೆರಗಿದ ಅನಾಹುತಕಾರಿ ಕರೋನಾದಿಂದ ಭಾರತ ದೇಶವೂ ಹೊರತಾಗಿರಲಿಲ್ಲ. ದೀರ್ಘಾವದಿ ಲಾಕ್ಡೌನ್ಗಳು, ವೀಕೆಂಡ್ ಕರ್ಫ್ಯೂಗಳ ಹೊರತಾಗಿಯೂ ಭಾರತಕ್ಕಾದ ನಷ್ಟ ಅಷ್ಟಿಷ್ಟಲ್ಲ. ಕರೋನಾ ತೀವ್ರತೆ ಕಡಿಮೆಯಾಗಿದ್ದರೂ ಅದರ ನೆರಳಿನಿಂದ ಇನ್ನೂ ಜನರು ಹೊರ ಬಂದಿಲ್ಲ. ಹಾಗಾಗಿಯೇ ಇಂದಿಗೂ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಮೊದಲಾದ ನಿಯಮಗಳು ಇನ್ನೂ ಚಾಲ್ತಿಯಲ್ಲಿದೆ.

ಮೊದಮೊದಲು ಮಾಸ್ಕ್ ಧರಿಸುವಿಕೆಗೆ ಹೊಂದಿಕೊಳ್ಳಲು ಜನರು ಕಷ್ಟಪಟ್ಟರಾದರೂ ಸದ್ಯ ಬಹುತೇಕ ನಗರ ಭಾಗಗಳಲ್ಲಿ, ಪಟ್ಟಣಗಳಲ್ಲಿ ಮಾಸ್ಕ್ ಧರಿಸಿರಿಯೇ ಜನರು ಹೊರಬರುತ್ತಿದ್ದಾರೆ. ಅತೀವ ಜನಸಂದಣಿಯಿರುವ ಕಡೆಗಳಲ್ಲಿ ಮಾಸ್ಕ್ ಧರಿಸಿ ಎಚ್ಚರಿಕೆ ಪಾಲಿಸುತ್ತಿದ್ದಾರೆ. ಭಾರತದ ಪ್ರಧಾನಿ ಮೋದಿಯವರೂ ಮಾಸ್ಕ್ ಧರಿಸುವಂತೆ ಹಾಗೂ ಕೋವಿಡ್ ಪ್ರೋಟೋಕಾಲ್ ಪಾಲಿಸುವಂತೆ ಭಾರತದ ಜನರಿಗೆ ಮನವಿ ಸಲ್ಲಿಸಿದ್ದರು. ಮಾಸ್ಕ್ ಧರಿಸುವಿಕೆಯನ್ನು ಕಾಲಿನ ರಕ್ಷಣೆಗೆ ಶೂ ಧರಿಸುವಷ್ಟೇ ಸಹಜವಾಗಿ ಧರಿಸಿಕೊಂಡು ಅಭ್ಯಾಸ ಮಾಡಿಕೊಳ್ಳಿ ಎಂದು ಪ್ರಧಾನಿ ಮನವಿ ಸಲ್ಲಿಸಿದ್ದರು.

ಶತಕೋಟಿ ಲಸಿಕೆಯ ಮೈಲಿಗಲ್ಲು ತಲುಪಿದ ಸಂಧರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ ಅವರು, “ನಾವು ಮನೆಯಿಂದ ಹೊರಗೆ ಕಾಲಿಡುವಾಗ ಹೇಗೆ ಪಾದರಕ್ಷೆಗಳನ್ನು ಧರಿಸುತ್ತೇವೋ ಅಷ್ಟೇ ಸಹಜವಾಗಿ, ಮಾಸ್ಕ್ ಕೂಡಾ ಧರಿಸಬೇಕು” ಎಂದು ಮನವಿ ಮಾಡಿದ್ದರು. ಈ ಹಿಂದೆ ಹಲವು ಬಾರಿ ಈ ರೀತಿಯ ಮನವಿ ಸಲ್ಲಿಸಿದ್ದರೂ ಸ್ವತಃ ಮೋದಿ ಸಂಪುಟದ ಸಚಿವರೇ ಈ ಮನವಿಯನ್ನು ತಿರಸ್ಕರಿಸುವ ಹಲವು ಘಟನೆಗಳು ನಡೆದಿದೆ. ಇಂತಹ ಕನಿಷ್ಟ 10 ಸಂಧರ್ಭಗಳು ಇಲ್ಲಿದೆ.

  • ರಕ್ಷಣಾ ಸಚಿವ ರಾಜನಾಥ್ ಸಿಂಗ್

ಅಕ್ಟೋಬರ್ 25 ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನವದೆಹಲಿಯಲ್ಲಿ ನಡೆದ ರಾಯಭಾರಿಗಳ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಕುರಿತು ರಾಜ್ನಾಥ್ ಸಿಂಗ್ ಟ್ವೀಟ್ ಮಾಡಿರುವ ಫೋಟೋಗಳಲ್ಲಿ ಅವರು ಮಾಸ್ಕ್ ಧರಿಸದೇ ಇರುವುದು ಕಂಡು ಬರುತ್ತದೆ. ಆ ಫೊಟೋಗಳಲ್ಲಿ ಅವರೊಬ್ಬರೇ ಮಾಸ್ಕ್ ಧರಿಸದ ವ್ಯಕ್ತಿ ಆಗಿದ್ದರು ಅನ್ನುವುದು ವಿಶೇಷ.

Had an amazing interaction with the Ambassadors of several countries at the Ambassadors’ Round Table in New Delhi.

Invited the foreign defence companies to participate in Asia’s largest defence exhibition in Gandhinagar, Gujarat to be held next year.https://t.co/BBWMwlNO3z pic.twitter.com/9riol39y4Z

— Rajnath Singh (@rajnathsingh) October 25, 2021

  • ಗೃಹ ಸಚಿವ ಅಮಿತ್ ಶಾ

ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಕಾಶ್ಮೀರ ಪ್ರವಾಸದುದ್ದಕ್ಕೂ ಕಣಿವೆ ರಾಜ್ಯದಲ್ಲಿ ಸಮವಸ್ತ್ರಧಾರಿ ಸಿಬ್ಬಂದಿ ಮತ್ತು ನಾಗರಿಕರೊಂದಿಗೆ ಬಹಳ ನಿಕಟವಾಗಿ ಸಂವಹನ ನಡೆಸಿದ್ದಾರೆ. ಬಿಎಸ್ಎಫ್ ಬಂಕರ್ನಲ್ಲಿದ್ದ ಸಮಯದುದ್ದಕ್ಕೂ ಹಾಗೂ ಖೀರ್ ಭವಾನಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವಾಗ ಮತ್ತು ವಿವಿಧ ನಾಗರಿಕರ ಸಮೂಹದೊಂದಿಗೆ ಸಂವಾದ ನಡೆಸಬೇಕಾದರೆ ಅಮಿತ್ ಶಾ ಮಾಸ್ಕ್ ಧರಿಸದೆಯೇ ಪಾಲ್ಗೊಂಡಿದ್ದಾರೆ. ಅವರೊಂದಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡಾ ಮಾಸ್ಕ್ ಧರಿಸದೆ ಇದ್ದರು.

  • ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವ ಡಾ.ಎಲ್. ಮುರುಗನ್

ಅಕ್ಟೋಬರ್ 22 ರಂದು ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಎಸ್ಆರ್ ಹೆಲ್ತ್ ಕ್ಲಿನಿಕ್ನಲ್ಲಿರುವ ಲಸಿಕೆ ಕೇಂದ್ರಕ್ಕೆ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆಯ ರಾಜ್ಯ ಸಚಿವರಾದ ಡಾ.ಎಲ್. ಮುರುಗನ್ ಅವರು ಭೇಟಿ ನೀಡಿದರು. ಹಲವಾರು ಅಧಿಕೃತ ಫೋಟೋಗಳಲ್ಲಿ, ಜನರೊಂದಿಗೆ ಇರುವಾಗಲೂ ಮುರುಗನ್ ಮಾಸ್ಕ್ ಇಲ್ಲದೆ ಇರುವುದು ಕಂಡು ಬರುತ್ತದೆ.

  • ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ

ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅಕ್ಟೋಬರ್ 20 ರಂದು ಉತ್ತರಾಖಂಡದ ಪಕ್ಕದಲ್ಲಿರುವ ಉತ್ತರ ಪ್ರದೇಶದ ರಾಂಪುರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಪ್ರವಾಹ ಪೀಡಿತ ಜನರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು. ಅವರ ಕಛೇರಿ ಬಿಡುಗಡೆಗೊಳಿಸಿರುವ ಫೋಟೋಗಳಲ್ಲಿ ಅವರು ಮಾಸ್ಕ್ ರಹಿತವಾಗಿ ತೆಪ್ಪವನ್ನು ಸವಾರಿ ಮಾಡುವುದನ್ನು ಹಾಗೂ ಸಂತ್ರಸ್ತರಿಗೆ ಸಾಮಾಗ್ರಿ ವಿತರಿಸುವುದು ಕಂಡುಬರುತ್ತದೆ.

  • ವಿಜ್ಞಾನ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ಡಾ ಜಿತೇಂದ್ರ ಸಿಂಗ್ ಅವರು ಅಕ್ಟೋಬರ್ 20 ರಂದು ತಮ್ಮ ಉಸ್ತುವಾರಿಯಲ್ಲಿ ಒಂಬತ್ತು ಇಲಾಖೆಗಳು/ಸಚಿವಾಲಯಗಳಲ್ಲಿ ಭಾರತ ಸರ್ಕಾರದಲ್ಲಿ ಬಾಕಿ ಇರುವವರ ವಿಲೇವಾರಿಗಾಗಿ ಅಕ್ಟೋಬರ್ 2 ರಂದು ಪ್ರಾರಂಭಿಸಲಾದ ವಿಶೇಷ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು. ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಹಾಕಿದ ಫೋಟೋಗಳು ಪೌರಕಾರ್ಮಿಕರಿಂದ ತುಂಬಿರುವ ಕೋಣೆಯಲ್ಲಿ ಮಾಸ್ಕ್ ಇಲ್ಲದೆ ಸಚಿವರಿರುವುದನ್ನು ತೋರಿಸುತ್ತದೆ.

Union Minister @DrJitendraSingh reviews the progress of special campaign launched on 2nd October for disposal of pendency in Government of India

Read: https://t.co/N8buBvqqiE pic.twitter.com/jlmoDIPZax

— PIB India (@PIB_India) October 20, 2021

  • ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್

ಮಾಹಿತಿ ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಅಕ್ಟೋಬರ್ 18 ರಂದು ಬೆಂಗಳೂರಿನ ಸಿಡಿಎಸಿ ಕೇಂದ್ರಕ್ಕೆ ಭೇಟಿ ನೀಡಿ ಸಭೆಯಲ್ಲಿ ಪಾಲ್ಗೊಂಡರು. ಈ ವೇಳೆ ಅವರು ಮಾಸ್ಕ್ ಧರಿಸಿರಲಿಲ್ಲ.

  • ಸಚಿವೆ ದರ್ಶನ ವಿಕ್ರಮ್ ಜರ್ದೋಶ್

ಕೈಮಗ್ಗ ತಜ್ಞರ ಸಮಿತಿಯ ನಿಯೋಗವು ಜವಳಿ ಖಾತೆ ರಾಜ್ಯ ಸಚಿವೆ ದರ್ಶನ ವಿಕ್ರಮ್ ಜರ್ದೋಶ್ ಅವರನ್ನು ಅಕ್ಟೋಬರ್ 18 ರಂದು ಅವರ ಕಚೇರಿಯಲ್ಲಿ ಭೇಟಿ ಮಾಡಿತು. ಸಭೆಯ ಅಧಿಕೃತ ಫೋಟೋದಲ್ಲಿ ಸಚಿವೆ ಮಾಸ್ಕ್ ಧರಿಸದಿರುವುದು ಕಾಣಬಹುದು.

  • ಮನ್ಸುಖ್ ಮಾಂಡವಿಯಾ ಮತ್ತು ಹರ್ದೀಪ್ ಸಿಂಗ್ ಪುರಿ

ಅಕ್ಟೋಬರ್ 16 ರಂದು, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಮತ್ತು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಭಾರತದ ವ್ಯಾಕ್ಸಿನೇಷನ್ ಡ್ರೈವ್ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೆ ಪಾಲ್ಗೊಂಡರು.

  • ದೇವುಸಿನ್ಹ ಚೌಹಾಣ್

ಅಕ್ಟೋಬರ್ 14 ರಂದು ಟೆಲಿಕಾಂ ಮತ್ತು ನೆಟ್ವರ್ಕಿಂಗ್ ಉತ್ಪನ್ನಗಳಿಗೆ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್ಐ) ಯೋಜನೆಯ ಬಿಡುಗಡೆ ಸಮಾರಂಭದಲ್ಲಿ ಸಂವಹನ ರಾಜ್ಯ ಸಚಿವ ದೇವುಸಿನ್ಹ್ ಚೌಹಾಣ್ ಉಪಸ್ಥಿತರಿದ್ದರು. ಪಿಐಬಿ ಹೊರತಂದ ಈವೆಂಟ್ನ ಅಧಿಕೃತ ಫೋಟೋಗಳು ಸಚಿವರು ಮತ್ತು ಇತರ ಅನೇಕರು ಮಾಸ್ಕ್‌ ಧರಿಸದಿರುವುದನ್ನು ತೋರಿಸುತ್ತವೆ.

  • ಅನುರಾಗ್ ಠಾಕೂರ್,

ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಅಕ್ಟೋಬರ್ 12 ರಂದು ಭೇಟಿಯಾದರು. ಬಿಡುಗಡೆಯಾದ ಫೋಟೋಗಳಲ್ಲಿ ಮಾಸ್ಕ್ ಧರಿಸಿರಲಿಲ್ಲ.

Subscribe to our channels on YouTube  & Twitter

ಮೂಲ – ದಿ ಪ್ರಿಂಟ್

Tags: BJPನರೇಂದ್ರ ಮೋದಿಪ್ರಧಾನಿ ಮೋದಿಬಿಜೆಪಿಮಾಸ್ಕ್ರಾಜನಾಥ್ ಸಿಂಗ್ವಿಶ್ವಗುರುಶತಕೋಟಿ ಲಸಿಕೆ
Previous Post

ಗೋವಾಗೂ ವಿಸ್ತರಿಸಿದ TMC : ಖ್ಯಾತ ಟೆನಿಸ್‌ ಆಟಗಾರ ಲಿಯಾಂಡರ್ ಪೇಸ್, ನಟಿ ನಫೀಸಾ ಅಲಿ ಪಕ್ಷ ಸೇರ್ಪಡೆ – ಗೆಲುವಿನ ವಿಶ್ವಾಸದಲ್ಲಿ ದೀದಿ

Next Post

ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ

ಪಾಕಿಸ್ತಾನ ಪರ ಘೋಷಣೆ : ಕಾಶ್ಮೀರಿ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ‌ ಮೆಹಬೂಬಾ ಮುಫ್ತಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada