• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳದಲ್ಲಿ ಆಂತರಿಕ ಬಿನ್ನಾಭಿಪ್ರಾಯದಿಂದ ಎಲ್ಲಾ ಮೋರ್ಚಾಗಳನ್ನು ವಿಸರ್ಜಿಸಿದ ಬಿಜೆಪಿ

ಪ್ರತಿಧ್ವನಿ by ಪ್ರತಿಧ್ವನಿ
January 14, 2022
in ದೇಶ, ರಾಜಕೀಯ
0
ಪಶ್ಚಿಮ ಬಂಗಾಳದಲ್ಲಿ ಆಂತರಿಕ ಬಿನ್ನಾಭಿಪ್ರಾಯದಿಂದ  ಎಲ್ಲಾ ಮೋರ್ಚಾಗಳನ್ನು ವಿಸರ್ಜಿಸಿದ ಬಿಜೆಪಿ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ಪ್ರಬಲ ವಿರೋಧ ಪಕ್ಷ ಭಾರತೀಯ ಜನತಾ ಪರ್ಟಿಯ ಹಣೆಬರಹ ಯಾಕೋ ಸರಿ ಇದ್ದಂತೆ ಕಾಣುತ್ತಿಲ್ಲ. ಒಂದು ಕಡೆ ದೀದಿ ಬಿಜೆಪಿಯಿಂದ ಚುನಾಯಿತರಾದ ಶಾಸಕರನ್ನು ಘರ್ವಾಪ್ಸಿ ಹೆಸರಿನಲ್ಲಿ ಟಿಎಂಸಿಗೆ ಕರೆತರುತ್ತಿದ್ದಾರೆ. ಇತ್ತ ಬಿಜೆಪಿ ಸಂಘಟಿತವಾಗಿ ಹೋರಾಟ ಮಾಡುವ ಬದಲು ತನ್ನ ಆಂತರಿಕ ತಿಕ್ಕಾಟದಿಂದ ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಿದೆ.

ADVERTISEMENT

ಹೌದು, ಕೆಲವು ವಾರಗಳ ಹಿಂದೆ ವಿವಿಧ ಮೋರ್ಚಾಗಳಿಗೆ ರಚಿಸಲಾಗಿದ್ದ ಪದಾಧಿಕಾರಿಗಳು ಹಾಗೂ ಅಧ್ಯಕ್ಷರುಗಳ ನೇಮಕವಾಗಿತ್ತು. ಆದರೆ, ಮುಖಂಡರುಗಳ ನಡುವಿನ ಬಿನ್ನಾಭಿಪ್ರಾಯದಿಂದಾಗಿ ಮತ್ತು ಆಂತರಿಕ ತಿಕ್ಕಾಟದಿಂದಾಗಿ ಎಲ್ಲಾ ವಿಭಾಗಗಳ ನೇಮಕಾತಿ ರದ್ದುಗೊಳಿಸಿ ಪುನರ್ರಚಿಸುವಂತೆ ಆದೇಶಿಸಿದೆ.

ಈ ಕುರಿತು ಲಿಖಿತ ಆದೇಶ ಹೊರಡಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಆದ್ಯಕ್ಷ ಮತ್ತು ಸಂಸದ ಡಾ.ಸುಕಾಂತ ಮಜುಂದಾರ್ ಅವರ ಸೂಚನೆ ಮತ್ತು ಆದೇಶದ ಪ್ರಕಾರ ಎಲ್ಲಾ ವಿಭಾಗದ ಇಲಾಖೆಗಳು ಹಾಗೂ ಮೋರ್ಚಾಗಳಿಗೆ ಹೊಸದಾಗಿ ನೇಮಕಾತಿ ಮಾಡುವವರೆಗೆ ವಿಸರ್ಜಿಸುತ್ತೇವೆ ಎಂದು ತಾವು ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಕಳೆದ ತಿಂಗಳು ನೂತನವಾಗಿ ರಚಿಸಲ್ಪಟ್ಟ ರಾಜ್ಯ ಸಮಿತಿಯನ್ನು ತೀವ್ರವಾಗಿ ಕೇಂದ್ರ ಸಚಿವ ಶಾಂತನೂ ಠಾಕೂರ್ ಹಾಗೂ 10 ಶಾಸಕರು ಇದನ್ನು ವಿರೋಧಿಸಿ ಪಕ್ಷದ ವಾಟ್ಸಪ್ ಗ್ರೂಪ್ ತೊರೆದಿದ್ದರು. ಸಚಿವರ ಆಪ್ತರಾದ ಸಯಂತನ್ ಬಸು ಹಾಗೂ ಜಯ್ಪ್ರಕಾಶ್ ಮಜುಂದಾರ್ ಅವರನ್ನು ಸಮಿತಿ ರಚಿಸುವ ಸಮಯದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಇಷ್ಟೆಲ್ಲಾ ಅಸಮಾಧಾನಕ್ಕೆ ಕಾರಣವಾಗಿದೆ.

ಹೊಸದಾಗಿ ಪಕ್ಷಕ್ಕೆ ಬರುವವರನ್ನು ನಾವು ಬೇಡ ಎಂದು ಹೇಳುವುದಿಲ್ಲ. ಆದರೆ, ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದವರನ್ನು ಕಡೆಗಣಿಸುವುದರಿಂದ ಇಂತಹ ಸಮಸ್ಯೆಗಳು ಉದಭವವಾಗುತ್ತದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಸದ್ಯ ಅಸಮಾಧಾನಗೊಂಡಿರುವ ನಾಯಕರು ಸಭೆ ಸೇರಿ ತಮ್ಮ ಮುಂದಿನ ನಡೆಯನ್ನು ಪ್ರಕಟಿಸುವುದಾಗಿ ಹೇಳಿದ್ದರು. ಆದರೆ, ಅವರ ಹೇಳಿಕೆ ಬೆನ್ನಲ್ಲೇ ಬಿಜೆಪಿಯ ಈ ನಿರ್ಧಾರ ಹೊರ ಬಿದ್ದಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಂತನ್ ಠಾಕೂರ್, ಈ ಸಮಯದಲ್ಲಿ ನಾನು ವಾಟ್ಸಪ್ ಗುಂಪುಗಳನ್ನು ಏಕೆ ತೊರೆದೆ ಎಂದು ಹೇಳಲು ಇಚ್ಚಿಸುವುದಿಲ್ಲ. ಸಮಯ ಸಂದರ್ಭನುಸಾರವಾಗಿ ನನ್ನ ಮುಂದಿನ ಯೋಜನೆಗಳನ್ನು ಆದಷ್ಟು ಬೇಗ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವರ ಹಾದಿಯಾಗಿ ನಟ ಹಾಗೂ ಶಾಸಕ ಹಿರಾನ್ ಚಟರ್ಜಿ ಕೂಡ ಪಕ್ಷದ ಎಲ್ಲಾ ವಾಟ್ಸಪ್ ಗುಂಪುಗಳನ್ನು ತೊರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಾನ್ ರಾಜ್ಯ ಬಿಜೆಪಿ ಘಟಕಕ್ಕೆ ನನ್ನ ಅವಶ್ಯಕತೆ ಇಲ್ಲ ಎಂದು ಕಾಣಿಸುತ್ತಿದೆ. ನನ್ನ ಕ್ಷೇತ್ರದಲ್ಲಿ ನಡೆಯುವ ಪಕ್ಷದ ಕಾರ್ಯಕಮಗಳು ನನ್ನ ಗಮನಕ್ಕೆ ಬಾರದೆ ಮೊದಲೇ ನಿರ್ಧರಿಸಲ್ಪಟ್ಟಿರುತ್ತವೆ ಎಂದು ಕಿಡಿಕಾರಿದ್ದಾರೆ.

Tags: BJPCongress PartyCovid 19West Bengalಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ದೆಹಲಿಯ ರೈತ ಹೋರಾಟವನ್ನು ಹೇಗೆ ಹತ್ತಿಕ್ಕಲು ಪ್ರಯತ್ನಿಸಿದರೋ ಅದೇ ರೀತಿ ಮೇಕೆದಾಟು ಪಾದಯಾತ್ರೆನ್ನು ಮಾಡುತ್ತಿದ್ದಾರೆ : RAMACHANDRA

Next Post

ಕುಂಟುತ್ತಾ ಸಾಗಿದ ರಾಜಾಜಿನಗರ ಮೇಲ್ಸೇತುವೆ ಕಾಮಗಾರಿ; ಸಾರ್ವಜನಿಕರು ಹೈರಾಣು

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post

ಕುಂಟುತ್ತಾ ಸಾಗಿದ ರಾಜಾಜಿನಗರ ಮೇಲ್ಸೇತುವೆ ಕಾಮಗಾರಿ; ಸಾರ್ವಜನಿಕರು ಹೈರಾಣು

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada