• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?

ಪ್ರತಿಧ್ವನಿ by ಪ್ರತಿಧ್ವನಿ
January 29, 2026
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Central Budget 2026: ಕೇಂದ್ರ ಬಜೆಟ್ ಮೇಲೆ ತೆರಿಗೆ ಹಾಗೂ ಇತರ ವಲಯದ ನಿರೀಕ್ಷೆಗಳೇನು..?
Share on WhatsAppShare on FacebookShare on Telegram

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2026ರ ಫೆಬ್ರವರಿ 1ರಂದು (ಭಾನುವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದು ಅವರು ವಿತ್ತ ಸಚಿವೆ ಸ್ಥಾನದಲ್ಲಿ ಮಂಡಿಸುವ ಸತತ ಒಂಬತ್ತನೇ ಕೇಂದ್ರ ಬಜೆಟ್ ಆಗಿದ್ದು, ಈ ಮೂಲಕ ಭಾರತೀಯ ರಾಜಕೀಯ ಹಾಗೂ ಆರ್ಥಿಕ ಇತಿಹಾಸದಲ್ಲಿ ಮತ್ತೊಂದು ಮಹತ್ವದ ದಾಖಲೆ ಬರೆಯಲಿದ್ದಾರೆ.

ADVERTISEMENT
Assembly Session: 2011ರ ಘಟನೆ ಮರು ಪ್ರಸ್ತಾಪಿಸಿದ ಸುರೇಶ್ ಕುಮಾರ್.. ಸಿಎಂ ಸಿದ್ದರಾಮಯ್ಯ ಸಮರ್ಥನೆ #pratidhvani

ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಈಗಾಗಲೇ ತೆರಿಗೆದಾರರು, ಕೈಗಾರಿಕಾ ಮುಖಂಡರು, ಉದ್ಯಮ ಸಂಘಟನೆಗಳು ಮತ್ತು ತಜ್ಞರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಘೋಷಣೆಗಳ ನಿರೀಕ್ಷೆಯಲ್ಲಿದ್ದಾರೆ.

ಬಜೆಟ್ 2026: ಯಾವ ಕ್ಷೇತ್ರಗಳ ಮೇಲೆ ವಿತ್ತ ಸಚಿವೆ ಗಮನ?

ಈ ಬಾರಿಯ ಬಜೆಟ್‌ನಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಗತಿ ನೀಡುವ ಉದ್ದೇಶದಿಂದ ವಿತ್ತ ಸಚಿವೆ ವಿವಿಧ ವಲಯಗಳಿಗೆ ಹೆಚ್ಚಿನ ಅನುದಾನ ಹಂಚಿಕೆ ಹಾಗೂ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಪ್ರಮುಖವಾಗಿ, ರೈಲ್ವೆ ವಲಯದಲ್ಲಿ ಹೊಸ ಮಾರ್ಗಗಳು, ಆಧುನೀಕರಣ, ಹೈ-ಸ್ಪೀಡ್ ರೈಲು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಹಾಗೂ ರಸ್ತೆ, ಸೇತುವೆ, ಬಂದರು, ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಹೊಸ ಯೋಜನೆ, ನಗರಾಭಿವೃದ್ಧಿಗಾಗಿ ಸ್ಮಾರ್ಟ್ ಸಿಟಿ, ಕುಡಿಯುವ ನೀರು, ಒಳಚರಂಡಿ ಯೋಜನೆಗಳು, ಉತ್ಪಾದನಾ ಕ್ಷೇತ್ರದಲ್ಲಿ (Make in India) ಕೈಗಾರಿಕಾ ಹೂಡಿಕೆ ಉತ್ತೇಜನ, ಆಟೋಮೊಬೈಲ್ ವಲಯದಲ್ಲಿ ವಿಶೇಷವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಬೆಂಬಲ ನೀಡುವ ಹಾಗೂ ರಕ್ಷಣಾ ವಲಯದಲ್ಲಿ ದೇಶೀಯ ಉತ್ಪಾದನೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ ಸೌಲಭ್ಯ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಲಯಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ಸಿಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Siddaramaiah : ನಾವು ಬರೆದು ಕೊಟ್ಟ ಭಾಷಣ ಅವರು ಓದಿಲ್ಲ #pratidhvani #siddaramaiah #karnatakagovernor

ಇತರೆ ವಲಯಗಳಿಗೂ ನಿರೀಕ್ಷೆ

ಮುಖ್ಯ ವಲಯಗಳ ಜೊತೆಗೆ, ಸರ್ಕಾರಿ ಆಸ್ಪತ್ರೆಗಳ ಸುಧಾರಣೆ, ಆರೋಗ್ಯ ವಿಮೆ ಯೋಜನೆ ,ಪ್ರವಾಸೋದ್ಯಮದಲ್ಲಿ ಧಾರ್ಮಿಕ ಮತ್ತು ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ, ಕೃಷಿ ವಲಯದಲ್ಲಿ ರೈತರ ಆದಾಯ ವೃದ್ಧಿ, ಬೆಳೆ ವಿಮೆ, ಹೊಸ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅನುದಾನ ಘೋಷಣೆಯಾಗುವ ನಿರೀಕ್ಷೆಯಿದೆ. ಹಾಗೂ ಸರಕು ಸಾಗಣೆ ವೆಚ್ಚ ಕಡಿತ ಮಾಡುವ ನಿರೀಕ್ಷೆ ಇದೆ.

Session : ಛಲವಾದಿ ಆಕ್ರೋಶಕ್ಕೆ ಬೆಚ್ಚಿಬಿದ್ದ ಕಾಂಗ್ರೆಸಿಗರು #pratidhvani

2025ರ ಬಜೆಟ್‌ನಲ್ಲಿ ಏನಿತ್ತು?

ಕಳೆದ ವರ್ಷ ಇದೇ ಅವಧಿಯಲ್ಲಿ ವಿತ್ತ ಸಚಿವೆ ಮಂಡಿಸಿದ ಕೇಂದ್ರ ಬಜೆಟ್ 2025 ಮಧ್ಯಮ ವರ್ಗದ ಜನರಿಗೆ ದೊಡ್ಡ ನಿಟ್ಟುಸಿರು ನೀಡಿತ್ತು. ವಾರ್ಷಿಕ ₹12 ಲಕ್ಷವರೆಗೆ ಆದಾಯ ಹೊಂದಿರುವವರಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಘೋಷಿಸಲಾಗಿತ್ತು. ಹೊಸ ತೆರಿಗೆ ಪದ್ಧತಿಯಡಿ ಪ್ರಮಾಣಿತ ಕಡಿತದ ಬಳಿಕ ತೆರಿಗೆ ರಹಿತ ಆದಾಯ ಮಿತಿ ₹12.75 ಲಕ್ಷಕ್ಕೆ ಏರಿಸಲಾಗಿತ್ತು. ಈ ನಿರ್ಧಾರದಿಂದ ಲಕ್ಷಾಂತರ ತೆರಿಗೆದಾರರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ನಿಟ್ಟುಸಿರು ಬಿಟ್ಟಿದ್ದರು.

ಈ ಬಾರಿಯ ತೆರಿಗೆ ವ್ಯವಸ್ಥೆಯಲ್ಲಿ ಏನು ಬದಲಾವಣೆ?

ಈಗ ಬಜೆಟ್ 2026ರಲ್ಲಿ, ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ, ಪ್ರಮಾಣಿತ ಕಡಿತ ಹೆಚ್ಚಳ,  ಗೃಹ ಸಾಲ ಮತ್ತು ಹೂಡಿಕೆಗಳಿಗೆ ಹೆಚ್ಚುವರಿ ತೆರಿಗೆ ಸೌಲಭ್ಯ, ಈ ರೀತಿಯ ಘೋಷಣೆಗಳ ನಿರೀಕ್ಷೆಯೊಂದಿಗೆ ತೆರಿಗೆದಾರರು ಕೇಂದ್ರ ಬಜೆಟ್‌ಅನ್ನು ಕಾತುರದಿಂದ ಕಾಯುತ್ತಿದ್ದಾರೆ.

Tags: budgetcentral budgetCentral Budget 2026Central GovernmentIndiaNarendra ModiNirmala SitharamanTax
Previous Post

Ranveer Singh: ಬಾಲಿವುಡ್ ನಟ ರಣವೀರ್‌ ಸಿಂಗ್‌ ಮೇಲೆ ಬೆಂಗಳೂರಲ್ಲಿ FIR

Next Post

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

Economic Survey 2026: ಸಂಸತ್‌ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada