• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

2025ರಲ್ಲಿ ಸ್ಯಾಂಡಲ್‌ವುಡ್‌ ಬಣ್ಣದ ಲೋಕ ಹೇಗಿತ್ತು..? ಏನೇನಾಯ್ತು..?

ಪ್ರತಿಧ್ವನಿ by ಪ್ರತಿಧ್ವನಿ
December 31, 2025
in Top Story, ಕರ್ನಾಟಕ, ಸಿನಿಮಾ
0
2025ರಲ್ಲಿ ಸ್ಯಾಂಡಲ್‌ವುಡ್‌ ಬಣ್ಣದ ಲೋಕ ಹೇಗಿತ್ತು..? ಏನೇನಾಯ್ತು..?
Share on WhatsAppShare on FacebookShare on Telegram

2025ರಲ್ಲಿ ಕನ್ನಡ ಚಿತ್ರರಂಗ ಸಾಕಷ್ಟು ಏಳು-ಬೀಳುಗಳನ್ನು ಕಂಡಿದೆ. ವರ್ಷದ ಆರಂಭದಲ್ಲಿ ಹಲವು ಸಿನಿಮಾಗಳು ಕಲೆಕ್ಷನ್‌ನಲ್ಲಿ ನಿರಾಸೆ ಮೂಡಿಸಿದ್ದವು. ಕೆಲವು ಚಿತ್ರಗಳು ಭಾರೀ ಯಶಸ್ಸು ಗಳಿಸಿ ಸಿನಿರಂಗಕ್ಕೆ ಉಸಿರು ನೀಡಿವೆ. ಈ ವರ್ಷದಲ್ಲಿ ಬಿಡುಗಡೆಯಾದ ಪ್ರಮುಖ ಯಶಸ್ವಿ ಸಿನಿಮಾಗಳಲ್ಲಿ ಮತ್ತು ಬಾಕ್ಸ್ ಆಫೀಸ್ ಲೂಟಿಯಲ್ಲಿ ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆ ಕಾಂತಾರ ಚಾಪ್ಟರ್‌ 1 ವರ್ಷದ ಅತಿದೊಡ್ಡ ಹಿಟ್‌ ಚಿತ್ರಗಳ ಸಾಲಿಗೆ ಸೇರುತ್ತದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸುಮಾರು 800 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ದಾಖಲೆ ಬರೆದಿದೆ. ಕನ್ನಡ ವರ್ಷನ್ ನೆಟ್ ಕಲೆಕ್ಷನ್ 149.85 ಕೋಟಿ. ಇದು 2025ರ ಅತಿ ಹೆಚ್ಚು ಗಳಿಕೆಯ ಕನ್ನಡ ಚಿತ್ರವಾಗಿರುವುದು ವಿಶೇಷವಾಗಿದೆ.

ADVERTISEMENT
Actress Sushma Veer Interview: ಪ್ರೊಡ್ಯೂಸರ್ ಸಾಲ ಮಾಡಿ ಸಿನಿಮಾ ಮಾಡ್ತಾರೆ..ಈ ಪೈರಸಿ ಕಳ್ಳರು  ಕನ್ನ ಹಾಕ್ತಾರೆ..

ಅಶ್ವಿನ್ ಕುಮಾರ್ ನಿರ್ದೇಶನ, ಅನಿಮೇಟೆಡ್ ಚಿತ್ರ ಮಹಾವತಾರ ನರಸಿಂಹ ಈ ಚಿತ್ರವು ಭಾರತದ ಅತಿ ಹೆಚ್ಚು ಗಳಿಕೆಯ ಅನಿಮೇಷನ್ ಚಿತ್ರವಾಗಿ ಹೆಸರು ಮಾಡಿದೆ. ಸುಮಾರು 325 ಕೋಟಿ ಕಲೆಕ್ಷನ್ ಮಾಡಿ ದೊಡ್ಡ ಯಶಸ್ಸು ಕಂಡಿದೆ. ಇನ್ನೂ ನಟ ರಾಜ್‌ ಬಿ. ಶೆಟ್ಟಿಯವರ ಸು ಫ್ರಂ ಸೋ ಸಣ್ಣ ಬಜೆಟಿನ ಚಿತ್ರವಾಗಿದ್ದರೂ ಕನ್ನಡ ವರ್ಷನ್‌ನಲ್ಲಿ ನೆಟ್ 84.45 ಕೋಟಿ ಗಳಿಸಿ ಅಚ್ಚರಿ ಮೂಡಿಸಿತು. ಕನ್ನಡ ವಿಭಾಗದಲ್ಲಿ ಇದು ಎರಡನೇ ಸ್ಥಾನವನ್ನು ಪಡೆದ ಚಿತ್ರವಾಗಿದೆ. ಅಲ್ಲದೇ ಇದೇ ರಾಜ್ ಬಿ. ಶೆಟ್ಟಿ ಅವರ ಅಭಿನಯದ ‘ರಕ್ಕಸಪುರದೊಳ್’ ಚಿತ್ರದ ಟೀಸರ್ ಬಿಡುಗಡೆಯಾಗಿ ಗಮನ ಸೆಳೆದಿದ್ದು, ಈ ವರ್ಷ ಕನ್ನಡದಲ್ಲಿ ಅತಿ ಬ್ಯೂಸಿ ನಟರಲ್ಲಿ ಒಬ್ಬರಾಗಿದ್ದಾರೆ.

Actor jaggesh ; ಪೈರಸಿ ಕಳ್ಳರನ್ನು ಒದ್ದು ಒಳಗಡೆ ಹಾಕಿಸಿದ್ದೀನಿ.. #pratidhvani #jaggesh #sandalwood

ಇನ್ನು ಚಿತ್ರರಂಗದ ವಿಚಾರದಲ್ಲಿ ನೋಡಿದಾಗ ಹಲವು ಸ್ಟಾರ್‌ ನಟರ ಸಿನಿಮಾಗಳಿಲ್ಲದೆ ಆರಂಭದಲ್ಲಿ ಸಿನಿಪ್ರೇಮೆಗಳಿಗೆ ನಿರಾಸೆಯಾಗಿತ್ತು.‌ ನಟರಾದ ಶ್ರೀಮುರುಳಿ, ಧ್ರುವ ಸರ್ಜಾ, ಯಶ್‌, ಗೋಲ್ಡನ್ ಸ್ಟಾರ್‌ ಗಣೇಶ್‌ ಸೇರಿದಂತೆ ಪ್ರಮುಖರ ಸಿನಿಮಾಗಳು ತೆರೆಗೆ ಬರಲಿಲ್ಲ. ಅಲ್ಲದೇ ಜನರ ನಿರೀಕ್ಷೆ ಹೆಚ್ಚಿಸಿದ್ದ ಚಿತ್ರಗಳಾಗಿ ತೆರೆ ಕಂಡ ಕೆಲ ಚಿತ್ರಗಳು ಹೆಸರು ಗಳಿಸಿದವೇ ಹೊರತು ಅಷ್ಟೊಂದು ಯಶಸ್ಸು ಪಡೆಯಲಿಲ್ಲ.

Samiullah Journalist Interview: ಪ್ರಜಾಪ್ರಭುತ್ವದ ಸೌಧದ ಮೇಲೆ ಗೋರಿ ಕಟ್ಟೋಕೆ ಬಿಡಲ್ಲ | ಸಮೀವುಲ್ಲಾ | Congress

ಆದರೆ ಈ ವರ್ಷಾಂತ್ಯದಲ್ಲಿ ಸಿನಿ ಪ್ರೇಮಿಗಳಿಗೆ ಸ್ವಲ್ಪ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸಾಕಷ್ಟು ಸದ್ದು ಮಾಡಿತು. ಬಳಿಕ ಬಿಡುಗಡೆಯಾದ ಕಿಚ್ಚ ಸುದೀಪ್‌ ನಟನೆಯ ಮಾರ್ಕ್‌ ಹಾಗೂ ಕರುನಾಡ ಚಕ್ರವರ್ತಿ ನಟ ಶಿವರಾಜ್‌ ಕುಮಾರ್‌, ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ರಾಜ್.ಬಿ.ಶೆಟ್ಟಿ ನಟಿಸಿರುವ 45 ಚಿತ್ರಗಳು ಸಿನಿ ರಸಿಕರಿಗೆ ಮನರಂಜನೆಯ ರಸದೌತಣ ನೀಡಿದವು.

Actress Sushma Veer Interview: ಸುದೀಪ್‌ ಅವರು ಹೇಳಿದ್ರಲ್ಲಿ ಏನೂ ತಪ್ಪಿಲ್ಲ.. ಹಾಗಾದ್ರೆ ತಪ್ಪು ಯಾರದು..?

2025ರ ವರ್ಷದಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳು ಬಿಡುಗಡೆಯಾದರೂ, ಹೆಚ್ಚಿನವು ನಿರಾಸೆ ಮೂಡಿಸಿದವು. ಸ್ಟಾರ್ ಚಿತ್ರಗಳು ಹೆಚ್ಚಾಗಿ ವಿಫಲವಾದರೂ, ಕಾಂತಾರ ಚಾಪ್ಟರ್-1 ಮತ್ತು ಸು ಫ್ರಂ ಸೋ ನಂಥ ಚಿತ್ರಗಳು ಉದ್ಯಮಕ್ಕೆ ಆಸರೆಯಾದವು. ಒಟ್ಟಾರೆಯಾಗಿ, ಕನ್ನಡ ಚಿತ್ರಗಳು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಗಮನ ಸೆಳೆದವು. 2025ರ ಆರಂಭದಲ್ಲಿ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಚಿತ್ರರಂಗದ ನಟ ನಟಿಯರು ಭಾಗವಹಿಸಿರಲಿಲ್ಲ ಆಗ ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಲಾವಿದರ ವಿರುದ್ದ ತಮ್ಮ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಡಿ.ಕೆ ಶಿವಕುಮಾರ್‌ ಇದೇ ವೇಳೆ ನಟ್ಟು ಬೋಲ್ಟು ಟೈಟ್‌ ಮಾಡಿ ರಿಪೇರಿ ಮಾಡಬೇಕೋ ಅಲ್ಲಿ ಮಾಡುತ್ತೇವೆ ಎಂದು ಗರಂ ಆಗಿದ್ದರು. ಈ ಹೇಳಿಕೆಯು ಹಲವು ತಿಂಗಳುಗಳ ಕಾಲ ರಾಜಕೀಯದಲ್ಲಿಯೂ ಸದ್ದು ಮಾಡಿತ್ತು.

VRUSSHABHA Celebrity show uncut ; ವೃಷಭ ಸಿನಿಮಾವನ್ನು ಹಾಡಿ ಹೊಗಳಿದ ಸ್ಯಾಂಡಲ್‌ವುಡ್‌ ನಟ ನಟಿಯರು #pratidhvani

ಇನ್ನು ಬಹುಭಾಷಾ ನಟ ಕಮಲ್‌ ಹಾಸನ್‌ 2025ರಲ್ಲಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಕನ್ನಡ ಭಾಷೆಯ ಮೂಲ ಕೆದಕಿ, ಕನ್ನಡವು ತಮಿಳಿನಿಂದ ಜನ್ಮ ಪಡೆದಿದೆ ಎಂಬ ಹೇಳಿಕೆ ನೀಡಿದ್ದರು. ಇದು ರಾಜ್ಯಾದ್ಯಂತ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಪ್ರತಿಫಲವಾಗಿ ಕಮಲ್‌ ಹಾಸನ್‌ ನಟನೆಯ ಥಗ್‌ ಲೈಫ್‌ ಚಿತ್ರದ ಬಿಡುಗಡೆಗೂ ರಾಜ್ಯದಲ್ಲಿ ಕನ್ನಡಪರ ಹೋರಾಟಗಾರರು ಅವಕಾಶ ನೀಡಲಿಲ್ಲ.

Tags: DarshanKannadakannada moviesKarnatakakichha sudeepMoviessandalwood
Previous Post

Daily Horoscope: ವರ್ಷಾಂತ್ಯದ ಅದೃಷ್ಟ ರಾಶಿಗಳಿವು..!

Next Post

New Year 2026: ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಬೆಂಗಳೂರು: ಪೊಲೀಸ್ ಬಿಗಿ ಬಂದೋಬಸ್ತ್

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post
New Year 2026: ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಬೆಂಗಳೂರು: ಪೊಲೀಸ್ ಬಿಗಿ ಬಂದೋಬಸ್ತ್

New Year 2026: ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಬೆಂಗಳೂರು: ಪೊಲೀಸ್ ಬಿಗಿ ಬಂದೋಬಸ್ತ್

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada