• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆ ಬಗ್ಗೆ ಸರ್ಕಾರ ಹೇಳಿದ್ದೇನು..? ವಿಪಕ್ಷಗಳ ಮಾತೇನು..?

ಕೃಷ್ಣ ಮಣಿ by ಕೃಷ್ಣ ಮಣಿ
October 22, 2024
in Top Story, ಕರ್ನಾಟಕ
0
ಮಳೆ ಬಗ್ಗೆ ಸರ್ಕಾರ ಹೇಳಿದ್ದೇನು..? ವಿಪಕ್ಷಗಳ ಮಾತೇನು..?
Share on WhatsAppShare on FacebookShare on Telegram

ಬೆಂಗಳೂರು ಜನರು ಮಳೆಗೆ ನಲುಗಿ ಹೋಗಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳ ಜತೆ​ ಮಳೆ ಹಾನಿ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾದ ಕಮಿಷನರ್‌ ಯಲಹಂಕದ ಟಾಟಾ ನಗರದಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕಾರು ನೀರಿನಲ್ಲಿ ಚಲಿಸಲು ಸಾಧ್ಯವಾಗಲಿಲ್ಲ. ಆಗ ಟ್ರಾಕ್ಟರ್​ನಲ್ಲೇ ತುಷಾರ್ ಗಿರಿನಾಥ್ ರೌಂಡ್ಸ್ ಹಾಕಿದರು.. ಹಲವು ಏರಿಯಾಗಳ ಜನ ಬಿಬಿಎಂಪಿ ಆಯುಕ್ತರಿಗೆ ತರಾಟೆ ತೆಗೆದುಕೊಂಡರು..

ADVERTISEMENT

ಮಳೆ ಹಾನಿ ಪ್ರದೇಶ ಪರಿಶೀಲನೆ ನಂತರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದರು.. ಯಲಹಂಕದಲ್ಲಿ ಸುರಿದಿರುವ ಅತಿ ಹೆಚ್ಚಿನ ಮಳೆಯಿಂದ ಕೆರೆ ತುಂಬಿ ನೀರು ಓವರ್‌ ಫ್ಲೋ ಆಗ್ತಿದೆ.. ಈ ವಲಯದಲ್ಲಿ ಮಳೆಯಿಂದ 10 ರಿಂದ 11 ಲೇಔಟ್​ನಲ್ಲಿ ಅವಾಂತರ ಆಗಿದೆ.. 4 ಸಾವಿರ ಮನೆಗಳು ಸಮಸ್ಯೆಗೆ ಒಳಗಾಗಿದೆ. ಕೇಂದ್ರೀಯ ವಿಹಾರದ ನಿವಾಸಿಗಳನ್ನು ಸ್ಥಳಾಂತರ ಮಾಡಿದ್ದೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಉಂಟಾಗಿರುವ ಮಳೆ ಅವಾಂತರದ ಬಗ್ಗೆ ಬೆಂಗಳೂರು ಅಭಿವೃದ್ಧಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್​ ಮಾತನಾಡಿದ್ದು, ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ SDRF​ ತಂಡ ರಕ್ಷಣಾ ಕಾರ್ಯ ನಡೆಸಿದೆ.. ಮಳೆ ಅನಾಹುತಗಳ ಬಗ್ಗೆ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ… ಕೇಂದ್ರಿಯ ವಿಹಾರ್, ಟಾಟಾ ನಗರದಲ್ಲಿ ನೀರು ಎತ್ತುವ ಕೆಲಸ ಆಗ್ತಿದೆ. ಎಲ್ಲೆಲ್ಲಿ ಮಳೆಯಿಂದ ಸಮಸ್ಯೆ ಆಗಿದೆ ಆ ಬಗ್ಗೆ‌ ವರದಿ ನೀಡಲು ಹೇಳಿದ್ದೇನೆ ಎಂದಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಕೆಲಸಕ್ಕೆ ಕ್ರೆಡಿಟ್ ತಗೋತಿದ್ದಾರೆ. ಆದರೆ ಅವರು ಬಂದ ಮೇಲೆ ಕೆಲಸ ಮಾಡಿಲ್ಲ. ಸಿಎಂ, ಡಿಸಿಎಂ ನಡುವಿನ ವ್ಯತ್ಯಾಸದಿಂದ ಬೆಂಗಳೂರಿಗೆ ಪೆಟ್ಟಾಗಿದೆ. ಬೆಂಗಳೂರಿನ ಜನ ಬೋಟಲ್ಲಿ ಹೋಗುವ ಸ್ಥಿತಿ ಇದೆ. ಜನರಿಗೆ ಬೋಟ್‌ಗಳನ್ನಾದರೂ ಕೊಡಿಸಲಿ. ಇಂಗ್ಲೆಂಡ್ ರೀತಿ ಬೋಟ್ ವ್ಯವಸ್ಥೆ ತರಲಿ ಎಂದು ವ್ಯಂಗ್ಯವಾಡಿದ್ದಾರೆ. ರೋಡ್ ಟ್ರಾನ್ಸ್‌‌ಪೋರ್ಟ್‌ನಲ್ಲಿ ಸರ್ಕಾರ ವಿಫಲ ಆಗಿದೆ. ಬೋಟ್ ಟ್ರಾನ್ಸ್‌ಪೋರ್ಟ್ ಸಿಸ್ಟಂ ಆದರೂ ಜಾರಿಗೆ ತರಲಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಉಂಟಾಗಿರುವ ಮಳೆ ಅವಾಂತರಕ್ಕೆ ಜೆಡಿಎಸ್​ ಚಾಟಿ ಬೀಸಿದೆ. ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾತನಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.. ಡಿಸಿಎಂ ಡಿಕೆ ಶಿವಕುಮಾರ್‌ ನನ್ನ ವಿಷನ್ ಬ್ರಾಂಡ್ ಬೆಂಗಳೂರು ಮಾಡೋದು ಅಂತ ಹೇಳ್ತಾರೆ.. ಆದರೆ ವಾಸ್ತವದಲ್ಲಿ ಹಾಗಾಗಿಲ್ಲ. ಬೆಂಗಳೂರಿನಾದ್ಯಂತ ಚರಂಡಿ ವ್ಯವಸ್ಥೆ ಹಾಳಾಗಿದೆ.. ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ತಲೆಕೆಡಿಸಿಕೊಂಡಿಲ್ಲ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಸಿಗ್ತಿಲ್ಲ. ಇವರಿಗೆಲ್ಲ ನಾಚಿಕೆ ಆಗಬೇಕು ಅಂತ ಆಕ್ರೋಶ ವ್ಯಕ್ತ ಪಡಿಸಿದ್ರು..

Tags: BangaloreBangalore Rainbangalore rain 2024bangalore rain floodbangalore rain newsbangalore rain statusbangalore rainsbengaluru heavy rainsBengaluru Rainbengaluru rain newsbengaluru rainsbengaluru rains todayBJPCongress Partyheavy rainheavy rain in bengaluruheavy rains in bengaluruheavy rains lash bengalurukarnataka rainsRainrain in bangalorerain in bengalururains in bengalururains in bengaluru 2024rains lash bengaluruಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಈ ವಾರ ತೆರೆಗೆ “ಮೂಕ ಜೀವ”

Next Post

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

Related Posts

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..
Top Story

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

by ಪ್ರತಿಧ್ವನಿ
March 11, 2026
0

ಬೆಂಗಳೂರು : ಕರ್ನಾಟಕ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನೀತಿಯಲ್ಲಿ ಸ್ಥಳೀಯ ಉತ್ಪಾದಕರನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಎಂಎಸ್‌ಎಂಇಗಳಿಗಾಗಿ ನಿರ್ದಿಷ್ಟ ಎಐ (AI) ಮತ್ತು...

Read moreDetails
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

ವಿಚಾರಣೆ ಬಳಿಕ ದರ್ಶನ್ ಅಭಿಮಾನಿಗಳ ಬಗ್ಗೆ ರಮ್ಯಾ ಹೇಳಿದ್ದೇನು?

March 11, 2026
ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ! 

March 10, 2026
ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

ಬೆಂಗಳೂರಿನ ಜನರಿಗೆ ಇಲ್ಲಿದೆ ಆರೋಗ್ಯ ತಜ್ಞರು ಕೊಟ್ಟ ಎಚ್ಚರಿಕೆ!

March 10, 2026
Next Post

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆದೆ: ಮುಖ್ಯಮಂತ್ರಿ‌ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada