• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?
Share on WhatsAppShare on FacebookShare on Telegram

ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, 17ನೇ ತಾರೀಕು ಕ್ಯಾಬಿನೆಟ್ ನಲ್ಲಿ ಚರ್ಚೆ ಆದ ನಂತರ ಹೇಳಿಕೆ ಕೊಡೋಣ ಎಂದುಕೊಂಡಿದ್ದೆ. ಆದರೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಗೊಂದಲ ಉಂಟಾಗಿರುವುದರಿಂದ ಸ್ಪಷ್ಟನೆ ನೀಡಬೇಕಾಗಿದೆ. ಕೆಲವರಿಗೆ ತಮ್ಮ ಜಾತಿ ಬಿಟ್ಟು ಹೋಗಿದೆ ಎಂಬ ಅಭಿಪ್ರಾಯ ಇದೆ. ರಾಜ್ಯದಲ್ಲಿ ಎಷ್ಟು ಜಾತಿಗಳಿವೆಯೋ ಎಲ್ಲವನ್ನು ಒಳಗೊಳ್ಳಲಾಗಿದೆ. ಸಂಖ್ಯೆ ಎಷ್ಟು ಎಂದು ಈಗ ನಾನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ADVERTISEMENT
Siddaramaiah: ಅಂಬೇಡ್ಕರ್ ಬಗ್ಗೆ ಸಿಎಂ ಸಿದ್ದರಾಮಯ್ಯ ಅದ್ಭುತ ಭಾಷಣ..! #drbrambedkar #jaibhim #pratidhvani

ನಾವು ಜಾತಿ ಹೇಳುವುದಿಲ್ಲ ಎಂದು ಕೆಲವರು ಹೇಳಿದ್ದಾರೆ. ಕೆಲವರು ಜಾತಿಯ ಬಗ್ಗೆ ಮಾಹಿತಿ ಇಲ್ಲದವರು ಇದ್ದಾರೆ. ಸುಮಾರು ಅಂತಹ ಐನೂರು ಜಾತಿಗಳು ಸಿಕ್ಕಿವೆ. ನಮ್ಮ ಜಾತಿಯ ಸಮೀಕ್ಷೆ ಆಗಿಲ್ಲ ಎಂದು ಹೇಳುವುದು ಸರಿಯಲ್ಲ. ಕಾಂತರಾಜ್ ಅವರು ಇದ್ದಾಗ ಒಂದು ಫಾರ್ಮೆಟ್ ತಯಾರಿಸಿದ್ದರು. ಈ ವರದಿ ಅವೈಜ್ಞಾನಿಕ ಎನ್ನುವಂತಿಲ್ಲ. 54 ಪ್ರಶ್ನಾವಳಿಗಳನ್ನು ಒಳಗೊಳ್ಳಲಾಗಿತ್ತು. ಇದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಜಾತಿ ಗಣತಿ ಅಲ್ಲವೇ ಅಲ್ಲ. ಮಾಡಿರುವ ಸಮೀಕ್ಷೆಯಲ್ಲಿ ಒಂದು ಅಂಶ ಜಾತಿ ಅಷ್ಟೇ. ಜನರು ಹೇಳಿರುವ ಜಾತಿಯನ್ನು ಬರೆದುಕೊಳ್ಳಲಾಗಿದೆ ಎಂದಿದ್ದಾರೆ.

ಜನರ ಜಾತಿಯನ್ನು ನಾವು ನಿರ್ಧರಿಸಲು ಆಗಲ್ಲ, ಮನೆಯವರು ಕೊಟ್ಟ ಜಾತಿಯನ್ನು ನಮೂದಿಸಲಾಗಿದೆ. ವರದಿ ಸಾರ್ವಜನಿಕಗೊಂಡ ನಂತರ ಚರ್ಚೆ ಮಾಡಬಹುದು. ವರದಿಯಲ್ಲಿ ತಪ್ಪಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ. ತಪ್ಪಾಗಿದ್ದರೆ ಸರಿ ಮಾಡುತ್ತೇವೆ ಎಂದು ಸರಕಾರ ಹೇಳಿದೆ. ಶೇಕಡ 95 ಸರಿ ಇದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಏನನ್ನು ನೋಡದೆ ಇದು ವೈಜ್ಞಾನಿಕ ವರದಿ ಅಲ್ಲ ಎನ್ನಬಾರದು. ಸಿದ್ದರಾಮಯ್ಯನವರು ಕೂತುಕೊಂಡು ವರದಿ ಬರೆಸಿದ್ದಾರೆ ಎನ್ನುವುದು ಸರಿಯಲ್ಲ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಯಾ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ ಎಂದಿದ್ದಾರೆ.

ಪ್ರತಿ ಹಳ್ಳಿಯಲ್ಲಿ ತರಬೇತಿಗೊಂಡ ಶಿಕ್ಷಕರು ಹೋಗಿ ಸಮೀಕ್ಷೆ ಮಾಡಿದ್ದಾರೆ. ಯಾವ ಶಿಕ್ಷಕರಿಗೂ ವೈಯಕ್ತಿಕ ಆಸಕ್ತಿ ಇರಲು ಸಾಧ್ಯವಿಲ್ಲ. ನೀಡಿರುವ ಫಾರ್ಮೆಟ್ ಅನ್ನು ತುಂಬಿಸಿಕೊಂಡು ಬಂದಿದ್ದಾರೆ ಅಷ್ಟೆ. ಇದು ಖಾಸಗಿ ಅವರು ತಯಾರಿಸಿದ ವರದಿಯಲ್ಲ. ಮೊದಲು ಸಚಿವ ಸಂಪುಟ ವರದಿ ಬಗ್ಗೆ ಚರ್ಚೆ ಮಾಡಲಿ. ನಮ್ಮ ಜಾತಿಯ ಸಂಖ್ಯೆ ಕಡಿಮೆಯಾಗಿದೆ ಎಂದು ಕೆಲವರು ಹೇಳುತ್ತಾರೆ. ರಾಜ್ಯದಿಂದ ಹೊರಗುಳಿದವರು ಈ ಲೆಕ್ಕಾಚಾರದಲ್ಲಿ ಬರಲ್ಲ. ಲಿಂಗಾಯತರು ಈ ಬಗ್ಗೆ ದೂರಿದ್ದಾರೆ. ಲಿಂಗಾಯಿತ ಎಂದು ಹೇಳುವ ಬದಲು ಹಿಂದೂ ಗಾಣಿಗ ಎಂದು ಕೆಲವರು ಕೊಟ್ಟಿದ್ದಾರೆ ಎಂದಿದ್ದಾರೆ.

ಸರ್ವೇ ಮಾಡುವಾಗ ಯಾರು ಏನು ಹೇಳಿದ್ದಾರೋ ಗೊತ್ತಿಲ್ಲ. ಅಧಿಕಾರಿಗಳಿಗೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ. ತಪ್ಪಿದ್ದರೆ ದೂರು ಕೊಟ್ಟು ಸರಿಪಡಿಸಬಹುದು. ಸರಿಪಡಿಸಲು ಅಧಿಕಾರಿಗಳು ಇದ್ದಾರೆ. ಈ ವರದಿ ಜಾರಿ ಮಾಡಲು ಆಗದಿದ್ದರೆ ಮರು ಸಮೀಕ್ಷೆ ಮಾಡಿ ಏನು ಪ್ರಯೋಜನ..? ಇದು ವೈಜ್ಞಾನಿಕವಾಗಿ ಆದ ವರದಿ, ಏನು ತೊಂದರೆ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸರ್ವೆಯಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ನವರು ವರದಿ ಅಪ್ಲೋಡ್ ಮಾಡಿದ್ದಾರೆ. ಅವರು ಯಾರಿಗೂ ಪಾಸ್ವರ್ಡ್ ಕೊಡುವುದಿಲ್ಲ. ಎಲ್ಲಾ ಊಹಾಪೋಹಗಳು ಚರ್ಚೆಯಾಗುತ್ತಿದೆ. ಸಚಿವ ಸಂಪುಟದಲ್ಲಿ ಮೊದಲು ಚರ್ಚೆ ಆಗಲಿ, ವರದಿ ಜಾರಿ ಆಗಬೇಕು ಎಂದು ನಾನು ಹಾರೈಸುತ್ತೇನೆ. ಜನರ ಮನಸ್ಸಿನಲ್ಲಿರುವ ಅನುಮಾನ ದೂರವಾಗಲು ವರದಿ ಸಾರ್ವಜನಿಕಗೊಳ್ಳಬೇಕು ಎಂದಿದ್ದಾರೆ.

Tags: bihar caste censusbihar caste census newscaste based censuscaste based census in biharCaste Censuscaste census biharcaste census bihar newscaste census in biharcaste census in indiacaste census in karnatakacaste census reportcongresskarnataka caste census reportopposition meetingopposition meeting in bengaluruopposition meeting shift to bengalurusupreme court on caste census in bihar
Previous Post

ಜಾತಿ ಜನಗಣತಿ ವಿರೋಧಿಸಿ ಕಾಂಗ್ರೆಸ್​ನಲ್ಲೇ ಇಂದು ಡಿಸಿಎಂ ಸಭೆ..

Next Post

ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?

ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada